ಜನರಿಗೆ ಮೋಸ ಮಾಡಲು ಅತಿ ಹೆಚ್ಚು ಬಳಕೆ ಆಯ್ತು ಒರಿ ಅಲಿಯಾಸ್ ಒರ್ಹಾನ್ ಅವತ್ರಮಣಿ ಹೆಸರು

ದೀಪಿಕಾ ಪಡುಕೋಣೆ, ಜಾನ್ವಿ ಕಪೂರ್​ ಮುಂತಾದ ಸೆಲೆಬ್ರಿಟಿಗಳ ಜೊತೆ ತುಂಬ ಆಪ್ತವಾಗಿ ನಿಂತು ಫೋಟೋ ತೆಗೆಸಿಕೊಳ್ಳುವ ಒರಿ ಅಲಿಯಾಸ್​ ಒರ್ಹಾನ್​ ಅವತ್ರಮಣಿ ಹೆಸರನ್ನು ಸೈಬರ್​ ವಂಚಕರು ದುರ್ಬಳಕೆ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜನರನ್ನು ಯಾಮಾರಿಸಲು ಒರಿ ಹೆಸರು ಹೆಚ್ಚಾಗಿ ಬಳಕೆ ಆಗಿದೆ ಎಂಬ ವಿಚಾರ ಬಹಿರಂಗವಾಗಿದೆ.

ಜನರಿಗೆ ಮೋಸ ಮಾಡಲು ಅತಿ ಹೆಚ್ಚು ಬಳಕೆ ಆಯ್ತು ಒರಿ ಅಲಿಯಾಸ್ ಒರ್ಹಾನ್ ಅವತ್ರಮಣಿ ಹೆಸರು
ಒರ್ಹಾನ್​ ಅವತ್ರಮಣಿ
Follow us
|

Updated on: Oct 14, 2024 | 4:06 PM

ಇತ್ತೀಚಿನ ವರ್ಷಗಳಲ್ಲಿ ಒರಿ ಹೆಸರು ಸಿಕ್ಕಾಪಟ್ಟೆ ಚಾಲ್ತಿಗೆ ಬಂತು. ಒರ್ಹಾನ್ ಅವತ್ರಮಣಿ ಎಂಬುದು ಈ ವ್ಯಕ್ತಿಯ ಪೂರ್ಣ ಹೆಸರು. ಬಾಲಿವುಡ್​ ಮಂದಿಯ ಎಲ್ಲ ಪಾರ್ಟಿಗಳನ್ನೂ ಒರಿ ಕಾಣಿಸಿಕೊಳ್ಳಲು ಆರಂಭಿಸಿದರು. ಬಿ-ಟೌನ್ ಬೆಡಗಿ ಜಾನ್ವಿ ಕಪೂರ್​ ಅವರಿಂದ ಹಿಡಿದು ಇಂಟರ್​ನ್ಯಾಷನಲ್​ ಸೆನ್ಸೇಷನ್​ ರಿಯಾನಾ ತನಕ ಎಲ್ಲರ ಜೊತೆಗೂ ಒರಿ ಆಪ್ತವಾಗಿ ಫೋಟೋ ಕ್ಲಿಕ್ಕಿಸಿಕೊಂಡು ಜನಪ್ರಿಯತೆ ಗಳಿಸಿದರು. ಆದರೆ ಅವರ ಹೆಸರನ್ನು ಬಳಸಿಕೊಂಡು ಜನರಿಗೆ ಮೋಸ ಮಾಡುವ ದೊಡ್ಡ ಜಾಲವೇ ನಡೆದಿದೆ. ಆ ಬಗ್ಗೆ ಒಂದು ಅಚ್ಚರಿಯ ಮಾಹಿತಿ ಬಹಿರಂಗ ಆಗಿದೆ.

ಸೋಶಿಯಲ್​ ಮೀಡಿಯಾಗೆ ಜನರು ಅಡಿಕ್ಟ್​ ಆಗಿದ್ದಾರೆ. ಸದಾ ಕಾಲ ಇಂಟರ್​ನೆಟ್​ ಬಳಕೆಯಲ್ಲಿ ಬಹುತೇಕರು ಮುಳುಗಿರುತ್ತಾರೆ. ಹಾಗಾಗಿ ವಂಚಕರು ಕೂಡ ಇದೇ ಜಾಲವನ್ನು ಬಳಸುತ್ತಾರೆ. ದೊಡ್ಡ ದೊಡ್ಡ ಸೆಲೆಬ್ರಿಟಿಗಳ ಹೆಸರನ್ನು ಬಳಸಿಕೊಂಡು ಜನರಿಗೆ ಮೋಸ ಮಾಡುವ ಸೈಬರ್​ ಖದೀಮರು ಸಕ್ರಿಯವಾಗಿದ್ದಾರೆ. ಅಚ್ಚರಿ ಏನೆಂದರೆ, ಸೈಬರ್​ ವಂಚಕರು ಅತಿ ಹೆಚ್ಚು ಬಳಕೆ ಮಾಡಿರುವ ಹೆಸರು ಒರಿ ಅವರದ್ದು!

ಖಾಸಗಿ ಸಂಸ್ಥೆಯೊಂದು ನಡೆಸಿದ ಅಧ್ಯಯನದಲ್ಲಿ ಈ ವಿಚಾರ ಬಹಿರಂಗ ಆಗಿದೆ. ಸೈಬರ್​ ಖದೀಮರು ಬಳಸಿದ ಟಾಪ್​ 10 ಸೆಲೆಬ್ರಿಟಿಗಳ ಹೆಸರಿನ ಪೈಕಿ ಒರಿ ಹೆಸರು ನಂಬರ್​ 1 ಸ್ಥಾನದಲ್ಲಿದೆ. ಗಾಯಕ-ನಟ ದಿಲ್​ಜಿತ್​ ದೋಸಾಂಜ್​ ಹೆಸರು ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ನಟಿ ಆಲಿಯಾ ಭಟ್​, 4ನೇ ಸ್ಥಾನದಲ್ಲಿ ನಟ ರಣವೀರ್​ ಸಿಂಗ್​ ಹೆಸರು ಇದೆ. ಅಲ್ಲದೇ ಕ್ರೀಡಾ ಜಗತ್ತಿನ ಸೆಲೆಬ್ರಿಟಿಗಳ ಹೆಸರು ಕೂಡ ಬಳಕೆ ಆಗಿದೆ.

ಇದನ್ನೂ ಓದಿ: ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು; ಒರಿ ಮಾಡಿದ ವಿಡಿಯೋ ವೈರಲ್

5ನೇ ಸ್ಥಾನದಲ್ಲಿ ವಿರಾಟ್​ ಕೊಹ್ಲಿ ಹೆಸರು ಇದೆ. 6ನೇ ಸ್ಥಾನದಲ್ಲಿ ಸಚಿನ್​ ತೆಂಡೂಲ್ಕರ್​ ಹೆಸರು, 7ನೇ ಸ್ಥಾನದಲ್ಲಿ ಶಾರುಖ್​ ಖಾನ್​ ಹೆಸರು, 8ನೇ ಸ್ಥಾನದಲ್ಲಿ ದೀಪಿಕಾ ಪಡುಕೋಣೆ ಹೆಸರು, 9ನೇ ಸ್ಥಾನದಲ್ಲಿ ಆಮಿರ್​ ಖಾನ್ ಹೆಸರು ಹಾಗೂ 10ನೇ ಸ್ಥಾನದಲ್ಲಿ ಎಂಎಸ್​ ಧೋನಿ ಹೆಸರು ಇದೆ. ಇಂಥ ಘಟಾನುಘಟಿ ಸೆಲೆಬ್ರಿಟಿಗಳ ಹೆಸರಗಳನ್ನೂ ಮೀರಿಸಿ ಒರಿ ಹೆಸರನ್ನು ಸೈಬರ್​ ವಂಚಕರು ಹೆಚ್ಚಾಗಿ ಬಳಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ಆನೆಗಳು ಮೈಸೂರನ್ನು ಖಂಡಿತ ಮಿಸ್ ಮಾಡಿಕೊಳ್ಳುತ್ತವೆ: ಡಾ ಪ್ರಭುಗೌಡ, ಡಿಸಿಎಫ್
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಧಾರಾಕಾರ ಮಳೆ, ವಿಡಿಯೋ ನೋಡಿ
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಉತ್ಸಾಹದಿಂದ ಓಡಾಡುತ್ತಿರುವ ಜಮೀರ್ ಅಹ್ಮದ್
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?
ಹೆಬ್ಬಾಳದಲ್ಲಿ ಪ್ರತಿನಿತ್ಯ ಆಗುವ ಟ್ರಾಫಿಕ್ ಜಾಮ್​ಗಳಿಗೆ ಕೊನೆ ಯಾವತ್ತು?
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮುಡಾ ಆರೋಪಿ ಸಿದ್ದರಾಮಯ್ಯ ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ: ಕೃಷ್ಣ
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಮಧ್ಯಾಹ್ನವಾದರೂ ತುಮಕೂರು-ಶಿರಾ ಹೆದ್ದಾರಿಯಲ್ಲಿ ಕ್ಲಿಯರ್​ ಆಗದ ಟ್ರಾಫಿಕ್​​​
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಂಡೂರು ಅಭ್ಯರ್ಥಿ ಆಯ್ಕೆ ಜಮೀರ್ ಅಹ್ಮದ್ ನೀಡುವ ಸಲಹೆ ಅಂತಿಮವಾಗುವ ಸಾಧ್ಯತೆ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಯಿರಲಿ ಅಥವಾ ಬಿಸಿಲು; ಪ್ರೀ-ವೆಡ್ಡಿಂಗ್ ಶೂಟ್ ಮಾತ್ರ ಆಗಲೇಬೇಕು!
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?
ಮಳೆಗೆ ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಕಾರಣವೇ?