AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಲೇಡಿ ಸೆಲೆಬ್ರಿಟಿಗಳ ಜೊತೆ ಪೋಸ್ ಕೊಡುವ ಈ ವ್ಯಕ್ತಿ ಯಾರು ಗೊತ್ತಾ?

ಬಾಲಿವುಡ್​ನಲ್ಲಿ ಪಾರ್ಟಿ ಆದರೆ ಅಲ್ಲಿ ಒರಿ ಹಾಜರಿ ಹಾಕುತ್ತಾರೆ. ಖುಷಿ ಕಪೂರ್, ಜಾನ್ವಿ ಕಪೂರ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ಕರೀನಾ ಕಪೂರ್, ನಿಸಾ ದೇವಗನ್, ಸಾರಾ ತೆಂಡೂಲ್ಕರ್, ಅನನ್ಯಾ ಪಾಂಡೆ, ಸಾರಾ ಅಲಿ ಖಾನ್ ಸೇರಿ ಅನೇಕರ ಜೊತೆ ಅವರು ಆಪ್ತವಾಗಿ ಕಾಣಿಸಿಕೊಂಡಿದ್ದಾರೆ.

ಎಲ್ಲಾ ಲೇಡಿ ಸೆಲೆಬ್ರಿಟಿಗಳ ಜೊತೆ ಪೋಸ್ ಕೊಡುವ ಈ ವ್ಯಕ್ತಿ ಯಾರು ಗೊತ್ತಾ?
ಸೆಲೆಬ್ರಿಟಿ ಕಿಡ್​ಗಳ ಜೊತೆ ಒರಿ
ರಾಜೇಶ್ ದುಗ್ಗುಮನೆ
|

Updated on: Nov 07, 2023 | 2:35 PM

Share

ಬಾಲಿವುಡ್​ ಬಗ್ಗೆ, ಬಾಲಿವುಡ್ ಸೆಲೆಬ್ರಿಟಿಗಳ ಬಗ್ಗೆ ಸ್ವಲ್ಪ ಜ್ಞಾನ ಇದ್ದವರಿಗೆ ಒಂದು ಮುಖ ಆಗಾಗ ಕಾಣುತ್ತದೆ. ಅವರು ಬೇರಾರು ಅಲ್ಲ ಒರ್ಹನ್ ಅವತ್ರಮಣಿ ಅಲಿಯಾಸ್ ಒರಿ. ಹಲವು ಸೆಲೆಬ್ರಿಟಿಗಳ ಜೊತೆ ಇವರು ಕಾಣಿಸಿಕೊಳ್ಳುತ್ತಾರೆ. ಹಾಗಂತ ಇವರಿಗೂ ಚಿತ್ರರಂಗಕ್ಕೂ ನೇರ ಸಂಬಂಧ ಇಲ್ಲ. ಅವರು ನಟನೆಯಲ್ಲಾಗಲೀ ನಿರ್ದೇಶನದಲ್ಲಾಗಲೀ ತೊಡಗಿಕೊಂಡಿಲ್ಲ. ಆದಾಗ್ಯೂ ಸ್ಟಾರ್ ಕಿಡ್​ಗಳಿಗೆ ಇವರೇ ಫೇವರಿಟ್. ಇವರು ಯಾರು ಎಂಬುದನ್ನು ಸಾರಾ ಅಲಿ ಖಾನ್ ಹಾಗೂ ಅನನ್ಯಾ ಪಾಂಡೆ ಅವರು ‘ಕಾಫಿ ವಿತ್ ಕರಣ್ ಸೀಸನ್ 8’ರ (Koffee With Karan) ಮೂರನೇ ಎಪಿಸೋಡ್​ನಲ್ಲಿ ಹೇಳಿಕೊಂಡಿದ್ದಾರೆ.

ಬಾಲಿವುಡ್​ನಲ್ಲಿ ಪಾರ್ಟಿ ಆದರೆ ಅಲ್ಲಿ ಒರಿ ಹಾಜರಿ ಹಾಕುತ್ತಾರೆ. ಖುಷಿ ಕಪೂರ್, ಜಾನ್ವಿ ಕಪೂರ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ಕರೀನಾ ಕಪೂರ್, ನಿಸಾ ದೇವಗನ್, ಸಾರಾ ತೆಂಡೂಲ್ಕರ್, ಅನನ್ಯಾ ಪಾಂಡೆ, ಸಾರಾ ಅಲಿ ಖಾನ್ ಸೇರಿ ಅನೇಕರ ಜೊತೆ ಅವರು ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಆದರೆ, ಅವರ ಐಡೆಂಟಿಟಿ ಬಗ್ಗೆ ಯಾರಿಗೂ ಗೊತ್ತಿಲ್ಲ. ಇವರ ಕುರಿತು ಅನನ್ಯಾ ಪಾಂಡೆ ಹಾಗೂ ಸಾರಾ ಮಾತನಾಡಿದ್ದಾರೆ.

‘ಈ ಒರಿ ಯಾರು’ ಎಂದು ಕರಣ್ ಜೋಹರ್ ಪ್ರಶ್ನೆ ಮಾಡಿದ್ದಾರೆ. ‘ಒರಿ ಹಲವು ವಿಚಾರಗಳ ಬಗ್ಗೆ ತಿಳಿದಿರುವ ವ್ಯಕ್ತಿ. ಅವರು ಸಖತ್ ಫನ್ನಿ ವ್ಯಕ್ತಿ’ ಎಂದಿದ್ದಾರೆ ಸಾರಾ ಅಲಿ ಖಾನ್.  ಇನ್ನು, ಒರಿ ಬಗ್ಗೆ ಹರಡಿರುವ ವದಂತಿಗಳು ಒಂದೆರಡಲ್ಲ. ಈ ಬಗ್ಗೆ ಅನನ್ಯಾ ಮಾತನಾಡಿದ್ದಾರೆ. ‘ಎಲ್ಲರ ಪ್ರೀತಿ ಪಾತ್ರರಾಗುವ ವ್ಯಕ್ತಿ ಒರಿ. ಆದರೆ, ಅವರನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಸೋಶಿಯಲ್ ಮೀಡಿಯಾಗೆ ಪೋಸ್ಟ್ ಹಾಕುವಾಗ ಅವರೇ ಕ್ಯಾಪ್ಶನ್ ನೀಡುತ್ತಾರೆ. ಅವರು ಏನು ಮಾಡುತ್ತಾರೆ ಅನ್ನೋದು ಗೊತ್ತಿಲ್ಲ’ ಎಂದಿದ್ದಾರೆ ಅನನ್ಯಾ.

ಇದನ್ನೂ ಓದಿ: ‘ಕಾಫಿ ವಿತ್​ ಕರಣ್​’ ಶೋಗೆ ಸಾರಾ ಅಲಿ ಖಾನ್​ ಅತಿಥಿ; ಮತ್ತೆ ಅದೇ ವಿವಾದದ ಬಗ್ಗೆ ಪ್ರಶ್ನೆ ಎದುರಾಗುತ್ತಾ?

ಒರಿ ಅವರು ಲಿಂಕ್ಡ್​​​ಇನ್​ನಲ್ಲಿದ್ದಾರೆ. ಅಲ್ಲಿ ರಿಲೈನ್ಸ್ ಇಂಡಸ್ಟ್ರೀಸ್​ ಲಿಮಿಟೆಡ್​​ನಲ್ಲಿ ಸ್ಪೆಷಲ್ ಪ್ರಾಜೆಕ್ಟ್ ಮ್ಯಾನೇಜರ್ ಎಂದು ತಮ್ಮ ಡೆಸಿಗ್ನೇಷನ್ ಬಗ್ಗೆ ಬರೆದುಕೊಂಡಿದ್ದಾರೆ. ಇವರು ಇಶಾ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್​ನ ಕ್ಲೋಸ್ ಫ್ರೆಂಡ್ ಎನ್ನಲಾಗಿದೆ. ಇವರ ಬಗ್ಗೆ ಇದಕ್ಕಿಂತ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು