ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು; ಒರಿ ಮಾಡಿದ ವಿಡಿಯೋ ವೈರಲ್

ಸೋಶಿಯಲ್​ ಮೀಡಿಯಾದಲ್ಲಿ ಒರಿ ಅಲಿಯಾಸ್​ ಒರ್ಹಾನ್​ ಅವತ್ರಮಣಿ ಅವರಿಗೆ ಸಖತ್​ ಖ್ಯಾತಿ ಇದೆ. ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಸಮಾರಂಭದಲ್ಲಿ ಒರಿ ಕೂಡ ಭಾಗಿ ಆಗಿದ್ದರು. ಅಲ್ಲಿ ಭಾರಿ ಉತ್ಸಾಹದಿಂದ ವಡಾ ಪಾವ್​ ತಿನ್ನಲು ಹೋದ ಒರಿ ಗೆಳತಿ ತಾನಿಯಾ ಶ್ರಾಫ್​ಗೆ ಕೂದಲು ಸಿಕ್ಕಿದೆ. ಆ ವಿಡಿಯೋ ವೈರಲ್​ ಆಗಿದ್ದು, ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು; ಒರಿ ಮಾಡಿದ ವಿಡಿಯೋ ವೈರಲ್
ಒರಿ, ವಡಾ ಪಾವ್​
Follow us
|

Updated on: Jul 09, 2024 | 9:05 PM

ಉದ್ಯಮಿ ಮುಖೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಪುತ್ರ ಅನಂತ್​ ಅಂಬಾನಿ ಮದುವೆ ಬಗ್ಗೆ ಸಾವಿರಾರು ಬಗೆಯ ಸುದ್ದಿ ಆಗುತ್ತಿದೆ. ಪ್ರೀ-ವೆಡ್ಡಿಂಗ್​ ಸಮಾರಂಭದಿಂದ ಆರಂಭವಾದ ಇವರ ಸಡಗರ ಇಂದಿಗೂ ಮುಂದುವರಿದಿದೆ. ತಿಂಗಳುಗಟ್ಟಲೆ ನಡೆಯುತ್ತಿರುವ ಈ ಸಮಾರಂಭಕ್ಕೆ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಬಂದಿದ್ದಾರೆ. ಕೆಲವು ವಾರಗಳ ಹಿಂದೆ ಇಟಲಿಯಲ್ಲಿ ಅದ್ದೂರಿಯಾಗಿ ಪ್ರೀ-ವೆಡ್ಡಿಂಗ್​ ಸಮಾರಂಭ ಮಾಡಲಾಯಿತು. ಆ ವೇಳೆ ನೀಡಿದ ಆಹಾರದಲ್ಲಿ ಕೂದಲು ಸಿಕ್ಕಿದೆ! ಸೋಶಿಯಲ್​ ಮೀಡಿಯಾ ಸೆನ್ಸೇಷನ್​ ಆಗಿರುವ ಒರಿ ಹಂಚಿಕೊಂಡ ವಿಡಿಯೋದಿಂದ ಈ ವಿಚಾರ ವೈರಲ್​ ಆಗಿದೆ.

ಬಾಲಿವುಡ್ ಸೆಲೆಬ್ರಿಟಿಗಳ ಆಪ್ತ ಎಂದೇ ಫೇಮಸ್​ ಆಗಿರುವ ಒರಿ ಅಲಿಯಾಸ್​ ಒರ್ಹಾನ್​ ಅವತ್ರಮಣಿ ಅವರು ತಮ್ಮದೇ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾರೆ. ಇದರಲ್ಲಿ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ ಪ್ರೀ-ವೆಡ್ಡಿಂಗ್​ ಸಮಾರಂಭದ ಕೆಲವು ದೃಶ್ಯಗಳನ್ನು ಒರಿ ಹಂಚಿಕೊಂಡಿದ್ದಾರೆ. ಅತಿಥಿಗಳಿಗೆ ತಯಾರಿಸಿದ್ದ ನೂರಾರು ಬಗೆಯ ಆಹಾರದ ಬಗ್ಗೆ ಅವರೊಂದು ವಿಡಿಯೋ ಮಾಡಿದ್ದಾರೆ.

ಇದನ್ನೂ ಓದಿ: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಅಂಬಾನಿ ಹಾಗೂ ನೀತಾ ದಂಪತಿ; ಇಲ್ಲಿದೆ ವಿಡಿಯೋ

ಒರಿ ಮತ್ತು ಅವರ ಸ್ನೇಹಿತೆ ತಾನಿಯಾ ಶ್ರಾಫ್​ ಅವರು ಹಲವು ಆಹಾರಗಳ ರುಚಿ ಸವಿದಿದ್ದಾರೆ. ಅದರ ನಡುವೆ ಅವರು ವಡಾ ಪಾವ್​ ಕೂಡ ತಿಂದಿದ್ದಾರೆ. ತಿನ್ನುವುದಕ್ಕೂ ಮುನ್ನವೇ ‘ಇದು ಅತ್ಯುತ್ತಮ ವಡಾ ಪಾವ್​’ ಎಂದು ಒರಿ ಬಿಲ್ಡಪ್​ ಕೊಟ್ಟಿದ್ದಾರೆ. ಆದರೆ ತಾನಿಯಾ ಶ್ರಾಫ್​ಗೆ ಆ ವಡಾ ಪಾವ್​ನಲ್ಲಿ ಕೂದಲು ಸಿಕ್ಕಿದೆ. ‘ನನಗೆ ಇನ್ನೊಂದು ಬೇಕಿತ್ತು. ಆದರೆ ಅದರಲ್ಲಿ ಕೂದಲು ಇತ್ತು’ ಎಂದು ಅವರು ಹೇಳಿರುವುದು ಈ ವಿಡಿಯೋದ ಹಿನ್ನೆಲೆಯಲ್ಲಿ ಕೇಳಿಸಿದೆ. ಇದು ಸಖತ್​ ವೈರಲ್​ ಆಗುತ್ತಿದೆ.

ಒರಿ ಹಂಚಿಕೊಂಡ ವಿಡಿಯೋ:

ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರು ಜಾಮ್​ನಗರ್​ನಲ್ಲಿ ಪ್ರೀವೆಡ್ಡಿಂಗ್​ ಸಮಾರಂಭವನ್ನು ಆರಂಭಿಸಿದ್ದರು. ಅದರಲ್ಲಿ ಶಾರುಖ್​ ಖಾನ್​, ಅಮಿರ್​ ಖಾನ್​, ಸಲ್ಮಾನ್​ ಖಾನ್​, ರಿಯಾನಾ ಸೇರಿದಂತೆ ಅನೇಕ ಘಟಾನುಘಟಿ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಜುಲೈ 12ರಂದು ಮುಂಬೈನಲ್ಲಿ ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಮದುವೆ ನಡೆಯಲಿದೆ. ಈಗಾಗಲೇ ಜಸ್ಟಿನ್​ ಬೀಬರ್​ ಅವರು ಬಂದು ಸಂಗೀತ ಕಾರ್ಯಕ್ರಮ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಕೇಸ್ ವಾಪಸ್ಸು ತಗೊಳ್ಳಿ ಅಂತ ಭಿಕ್ಷೆ ಬೇಡುವ ಸ್ಥಿತಿ ಬಂದಿಲ್ಲ: ಸಿಟಿ ರವಿ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಆರೋಪ
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು
ನಾಗರ ಹಾವಿನ ಮೇಲೆ ಧಾರಾಳ ಮಮಕಾರ ತೋರಿದ ಹಸು