AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು; ಒರಿ ಮಾಡಿದ ವಿಡಿಯೋ ವೈರಲ್

ಸೋಶಿಯಲ್​ ಮೀಡಿಯಾದಲ್ಲಿ ಒರಿ ಅಲಿಯಾಸ್​ ಒರ್ಹಾನ್​ ಅವತ್ರಮಣಿ ಅವರಿಗೆ ಸಖತ್​ ಖ್ಯಾತಿ ಇದೆ. ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಸಮಾರಂಭದಲ್ಲಿ ಒರಿ ಕೂಡ ಭಾಗಿ ಆಗಿದ್ದರು. ಅಲ್ಲಿ ಭಾರಿ ಉತ್ಸಾಹದಿಂದ ವಡಾ ಪಾವ್​ ತಿನ್ನಲು ಹೋದ ಒರಿ ಗೆಳತಿ ತಾನಿಯಾ ಶ್ರಾಫ್​ಗೆ ಕೂದಲು ಸಿಕ್ಕಿದೆ. ಆ ವಿಡಿಯೋ ವೈರಲ್​ ಆಗಿದ್ದು, ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು; ಒರಿ ಮಾಡಿದ ವಿಡಿಯೋ ವೈರಲ್
ಒರಿ, ವಡಾ ಪಾವ್​
ಮದನ್​ ಕುಮಾರ್​
|

Updated on: Jul 09, 2024 | 9:05 PM

Share

ಉದ್ಯಮಿ ಮುಖೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಪುತ್ರ ಅನಂತ್​ ಅಂಬಾನಿ ಮದುವೆ ಬಗ್ಗೆ ಸಾವಿರಾರು ಬಗೆಯ ಸುದ್ದಿ ಆಗುತ್ತಿದೆ. ಪ್ರೀ-ವೆಡ್ಡಿಂಗ್​ ಸಮಾರಂಭದಿಂದ ಆರಂಭವಾದ ಇವರ ಸಡಗರ ಇಂದಿಗೂ ಮುಂದುವರಿದಿದೆ. ತಿಂಗಳುಗಟ್ಟಲೆ ನಡೆಯುತ್ತಿರುವ ಈ ಸಮಾರಂಭಕ್ಕೆ ಅನೇಕ ಸೆಲೆಬ್ರಿಟಿಗಳು ಅತಿಥಿಗಳಾಗಿ ಬಂದಿದ್ದಾರೆ. ಕೆಲವು ವಾರಗಳ ಹಿಂದೆ ಇಟಲಿಯಲ್ಲಿ ಅದ್ದೂರಿಯಾಗಿ ಪ್ರೀ-ವೆಡ್ಡಿಂಗ್​ ಸಮಾರಂಭ ಮಾಡಲಾಯಿತು. ಆ ವೇಳೆ ನೀಡಿದ ಆಹಾರದಲ್ಲಿ ಕೂದಲು ಸಿಕ್ಕಿದೆ! ಸೋಶಿಯಲ್​ ಮೀಡಿಯಾ ಸೆನ್ಸೇಷನ್​ ಆಗಿರುವ ಒರಿ ಹಂಚಿಕೊಂಡ ವಿಡಿಯೋದಿಂದ ಈ ವಿಚಾರ ವೈರಲ್​ ಆಗಿದೆ.

ಬಾಲಿವುಡ್ ಸೆಲೆಬ್ರಿಟಿಗಳ ಆಪ್ತ ಎಂದೇ ಫೇಮಸ್​ ಆಗಿರುವ ಒರಿ ಅಲಿಯಾಸ್​ ಒರ್ಹಾನ್​ ಅವತ್ರಮಣಿ ಅವರು ತಮ್ಮದೇ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾರೆ. ಇದರಲ್ಲಿ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ ಪ್ರೀ-ವೆಡ್ಡಿಂಗ್​ ಸಮಾರಂಭದ ಕೆಲವು ದೃಶ್ಯಗಳನ್ನು ಒರಿ ಹಂಚಿಕೊಂಡಿದ್ದಾರೆ. ಅತಿಥಿಗಳಿಗೆ ತಯಾರಿಸಿದ್ದ ನೂರಾರು ಬಗೆಯ ಆಹಾರದ ಬಗ್ಗೆ ಅವರೊಂದು ವಿಡಿಯೋ ಮಾಡಿದ್ದಾರೆ.

ಇದನ್ನೂ ಓದಿ: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಅಂಬಾನಿ ಹಾಗೂ ನೀತಾ ದಂಪತಿ; ಇಲ್ಲಿದೆ ವಿಡಿಯೋ

ಒರಿ ಮತ್ತು ಅವರ ಸ್ನೇಹಿತೆ ತಾನಿಯಾ ಶ್ರಾಫ್​ ಅವರು ಹಲವು ಆಹಾರಗಳ ರುಚಿ ಸವಿದಿದ್ದಾರೆ. ಅದರ ನಡುವೆ ಅವರು ವಡಾ ಪಾವ್​ ಕೂಡ ತಿಂದಿದ್ದಾರೆ. ತಿನ್ನುವುದಕ್ಕೂ ಮುನ್ನವೇ ‘ಇದು ಅತ್ಯುತ್ತಮ ವಡಾ ಪಾವ್​’ ಎಂದು ಒರಿ ಬಿಲ್ಡಪ್​ ಕೊಟ್ಟಿದ್ದಾರೆ. ಆದರೆ ತಾನಿಯಾ ಶ್ರಾಫ್​ಗೆ ಆ ವಡಾ ಪಾವ್​ನಲ್ಲಿ ಕೂದಲು ಸಿಕ್ಕಿದೆ. ‘ನನಗೆ ಇನ್ನೊಂದು ಬೇಕಿತ್ತು. ಆದರೆ ಅದರಲ್ಲಿ ಕೂದಲು ಇತ್ತು’ ಎಂದು ಅವರು ಹೇಳಿರುವುದು ಈ ವಿಡಿಯೋದ ಹಿನ್ನೆಲೆಯಲ್ಲಿ ಕೇಳಿಸಿದೆ. ಇದು ಸಖತ್​ ವೈರಲ್​ ಆಗುತ್ತಿದೆ.

ಒರಿ ಹಂಚಿಕೊಂಡ ವಿಡಿಯೋ:

ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರು ಜಾಮ್​ನಗರ್​ನಲ್ಲಿ ಪ್ರೀವೆಡ್ಡಿಂಗ್​ ಸಮಾರಂಭವನ್ನು ಆರಂಭಿಸಿದ್ದರು. ಅದರಲ್ಲಿ ಶಾರುಖ್​ ಖಾನ್​, ಅಮಿರ್​ ಖಾನ್​, ಸಲ್ಮಾನ್​ ಖಾನ್​, ರಿಯಾನಾ ಸೇರಿದಂತೆ ಅನೇಕ ಘಟಾನುಘಟಿ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಜುಲೈ 12ರಂದು ಮುಂಬೈನಲ್ಲಿ ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಮದುವೆ ನಡೆಯಲಿದೆ. ಈಗಾಗಲೇ ಜಸ್ಟಿನ್​ ಬೀಬರ್​ ಅವರು ಬಂದು ಸಂಗೀತ ಕಾರ್ಯಕ್ರಮ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು