AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಿ ನಟ ಫವಾದ್​ ಖಾನ್​ಗೆ ಭಾರತದ ಸಿನಿಮಾದಲ್ಲಿ ಮತ್ತೆ ಸಿಕ್ಕಿದೆ ಅವಕಾಶ

ಭಾರತದಲ್ಲಿ ಕಲಾವಿದರಿಗೆ ಕೊರತೆ ಇದೆಯೇ? ಖಂಡಿತಾ ಇಲ್ಲ. ಹಾಗಿದ್ದರೂ ಕೂಡ ಪಾಕಿಸ್ತಾನಿ ಕಲಾವಿದರನ್ನು ಕರೆದು ಬಾಲಿವುಡ್​ ಸಿನಿಮಾದಲ್ಲಿ ಅವಕಾಶ ನೀಡಲಾಗುತ್ತಿದೆ. ಬ್ಯಾನ್​ ಕಾರಣದಿಂದ ಪಾಕ್​ ನಟ ಫವಾದ್​ ಖಾನ್​ ಅವರನ್ನು ಹಿಂದಿ ಸಿನಿಮಾಗಳಿಂದ ದೂರ ಇಡಲಾಗಿತ್ತು. ಆದರೆ ಈಗ ಮತ್ತೆ ಅವರಿಗೆ ಬಾಲಿವುಡ್​ ಮಂದಿ ಆಫರ್​ ನೀಡಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಸುದ್ದಿ ಹೊರಬಿದ್ದಿದೆ.

ಪಾಕಿಸ್ತಾನಿ ನಟ ಫವಾದ್​ ಖಾನ್​ಗೆ ಭಾರತದ ಸಿನಿಮಾದಲ್ಲಿ ಮತ್ತೆ ಸಿಕ್ಕಿದೆ ಅವಕಾಶ
ಪಾಕ್​ ನಟ ಫವಾದ್​ ಖಾನ್​
ಮದನ್​ ಕುಮಾರ್​
|

Updated on: Jul 03, 2024 | 5:06 PM

Share

ಪಾಕಿಸ್ತಾನಿ ನಟ ಫವಾದ್​ ಖಾನ್​ (Fawad Khan) ಅವರು ಹಿಂದಿ ಸಿನಿಮಾ ಮತ್ತು ಪಾಕಿಸ್ತಾನದ ಸೀರಿಯಲ್​ಗಳಲ್ಲಿ ನಟಿಸಿ ಹೆಸರು ಮಾಡಿದ್ದಾರೆ. ಕಳೆದ ಒಂದಷ್ಟು ವರ್ಷಗಳಿಂದ ಅವರನ್ನು ಬ್ಯಾನ್​ ಮಾಡಲಾಗಿತ್ತು. ಅವರನ್ನು ಮಾತ್ರವಲ್ಲದೇ ಪಾಕಿಸ್ತಾನದ ಎಲ್ಲ ಕಲಾವಿದರು, ಗಾಯಕರು, ಸಂಗೀತಗಾರರನ್ನು ಬಾಲಿವುಡ್​ ಸಿನಿಮಾಗಳಿಂದ ಹೊರಗೆ ಇಡಲಾಗಿತ್ತು. ಆದರೆ ಈಗ ಫವಾದ್​ ಖಾನ್​ ಅವರಿಗೆ ಮತ್ತೆ ಬಾಲಿವುಡ್​ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಹೊಸ ಸಿನಿಮಾದಲ್ಲಿ ಫವಾದ್​ ಖಾನ್​ಗೆ ಜೋಡಿಯಾಗಿ ವಾಣಿ ಕಪೂರ್ (Vaani Kapoor) ನಟಿಸುತ್ತಾರೆ ಎಂದು ಸುದ್ದಿ ಆಗಿದೆ.

2016ರಲ್ಲಿ ಉರಿ ಭಯೋತ್ಪಾದಕ ದಾಳಿ ಬಳಿಕ ಪಾಕಿಸ್ತಾನದ ಜೊತೆ ಭಾರತದ ಸಂಬಂಧ ಸಂಪೂರ್ಣ ಹದಗೆಟ್ಟಿತು. ಆ ಘಟನೆ ಬಳಿಕ ಪಾಕಿಸ್ತಾನದ ಯಾರೊಂದಿಗೂ ಸಿನಿಮಾ, ಸೀರಿಯಲ್​, ಮ್ಯೂಸಿಕ್​ ವಿಡಿಯೋ ಇತ್ಯಾದಿ ಮನರಂಜನಾ ಕಾಂಟೆಂಟ್​ ಮಾಡಬಾರದು ಎಂದು ಭಾರತದ ನಿರ್ಮಾಪಕರು ನಿರ್ಧರಿಸಿದರು. ‘ಭಾರತೀಯ ಚಲನಚಿತ್ರ ನಿರ್ಮಾಪಕರ ಸಂಘ’ವು ಪಾಕ್​ ಮಂದಿಯ ಜೊತೆ ಕೆಲಸ ಮಾಡುವುದಿಲ್ಲ ಎಂದು ಘೋಷಣೆ ಹೊರಡಿಸಿತ್ತು.

ಆ ಬ್ಯಾನ್​ ಬಳಿಕ ಪಾಕಿಸ್ತಾನದ ಸೆಲೆಬ್ರಿಟಿಗಳಾದ ಫವಾದ್​ ಖಾನ್​, ಮಹೀರಾ ಖಾನ್​, ಅತೀಫ್​ ಅಸ್ಲಂ, ರಾಹತ್​ ಫತೇ ಅಲಿ ಖಾನ್​ ಮುಂತಾದವರು ಭಾರತದ ಸಿನಿಮಾಗಳಿಂದ ಹೊರಗೆ ಉಳಿದರು. ಆದರೆ ಕಳೆದ ವರ್ಷ ನವೆಂಬರ್​ನಲ್ಲಿ ಈ ಬ್ಯಾನ್​ ಸೂಕ್ತವಲ್ಲ ಎಂದು ಭಾರತದ ಸುಪ್ರೀಂ ಕೋರ್ಟ್​ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕಲಾವಿದರು ಭಾರತದ ಸಿನಿಮಾಗಳಲ್ಲಿ ಮತ್ತೆ ಕೆಲಸ ಮಾಡಲು ಆರಂಭಿಸಿದ್ದಾರೆ.

ಇದನ್ನೂ ಓದಿ: ಶಾರುಖ್​, ಆಮಿರ್​, ಸಲ್ಲು ಬಗ್ಗೆ ಪಾಕ್​ ನಟಿಯ ಹೇಳಿಕೆ ವೈರಲ್​; ಏನಿದೆ ಈ ವಿಡಿಯೋದಲ್ಲಿ?

ಸದ್ಯಕ್ಕೆ ಫವಾದ್​ ಖಾನ್​ ಒಪ್ಪಿಕೊಂಡಿರುವ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ. ಈ ಚಿತ್ರಕ್ಕೆ ವಾಣಿ ಕಪೂರ್​ ನಾಯಕಿ ಎಂಬುದಷ್ಟೇ ಸುದ್ದಿ ಆಗಿದೆ. ಸದ್ಯಕ್ಕೆ ಈ ಸಿನಿಮಾದ ಪ್ರೀ-ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಶೀಘ್ರವೇ ಲಂಡನ್​ನಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭ ಆಗಲಿದೆ. 2014ರಲ್ಲಿ ‘ಖೂಬ್​ಸೂರತ್​’ ಸಿನಿಮಾ ಮೂಲಕ ಫವಾದ್​ ಖಾನ್ ಅವರು ಬಾಲಿವುಡ್​ಗೆ ಕಾಲಿಟ್ಟಿದ್ದರು. ಬಳಿಕ ‘ಕಪೂರ್​ ಆ್ಯಂಡ್​ ಸನ್ಸ್​’, ‘ಏ ದಿಲ್​ ಹೈ ಮುಷ್ಕಿಲ್​’ ಚಿತ್ರಗಳಲ್ಲಿ ಅವರು ನಟಿಸಿದರು. ಬ್ಯಾನ್​ ಕಾರಣದಿಂದ ಕಳೆದ 8 ವರ್ಷಗಳಿಂದ ಅವರಿಗೆ ಬಾಲಿವುಡ್​ನಲ್ಲಿ ಯಾವುದೇ ಅವಕಾಶ ಸಿಕ್ಕಿರಲಿಲ್ಲ. ಆದರೆ ಈಗ ಮತ್ತೆ ಹೊಸ ಸಿನಿಮಾಗೆ ಅವರು ಸಹಿ ಮಾಡಿದ್ದಾರೆ ಎಂದು ‘ಫಿಲ್ಮ್​ಫೇರ್​’ ವರದಿ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?