AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​

ಸಬಾ ಅವರು ಮೂಲತಃ ಪಾಕಿಸ್ತಾನದವರು. ಸಾಕಷ್ಟು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಕಳೆದ ವರ್ಷ ಡಾನ್ಸ್​ ವಿಡಿಯೋ ಚಿತ್ರೀಕರಣಕ್ಕಾಗಿ ಅವರು ಲಾಹೋರ್​ನ ಐತಿಹಾಸಿಕ ಮಸೀದಿಯಲ್ಲಿ ಹೆಜ್ಜೆ ಹಾಕಿದ್ದರು.

ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​
ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 09, 2021 | 6:49 PM

ಬಾಲಿವುಡ್​ನಲ್ಲಿ ಇರ್ಫಾನ್​ ಖಾನ್​ ನಟನೆಯ ‘ಹಿಂದಿ ಮೀಡಿಯಮ್​’ ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ಇರ್ಫಾನ್​ ಖಾನ್​ ಜತೆಗೆ ಸಬಾ ಖಮಾರ್​ ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಇವರಿಗೆ ಈಗ ಸಂಕಷ್ಟವೊಂದು ಎದುರಾಗಿದೆ. ಅವರನ್ನು ಬಂಧಿಸುವಂತೆ ಪಾಕಿಸ್ತಾನದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಬಾ ಅವರು ಮೂಲತಃ ಪಾಕಿಸ್ತಾನದವರು. ಸಾಕಷ್ಟು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಕಳೆದ ವರ್ಷ ಡಾನ್ಸ್​ ವಿಡಿಯೋ ಚಿತ್ರೀಕರಣಕ್ಕಾಗಿ ಅವರು ಲಾಹೋರ್​ನ ಐತಿಹಾಸಿಕ ಮಸೀದಿಯಲ್ಲಿ ಹೆಜ್ಜೆ ಹಾಕಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ಕೂಡ ದಾಖಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿಲ್ಲ. ಈ ಸಂಬಂಧ ಲಾಹೋರ್​ನ ಮ್ಯಾಜಿಸ್ಟ್ರಿಯಲ್​ ಕೋರ್ಟ್​ ಜಾಮೀನು ಸಹಿತ ವಾರಂಟ್​ ಹೊರಡಿಸಿದೆ. ಸಬಾ ಜತೆ ಗಾಯಕ ಬಿಲಾಲ್​ ಸಯೀದ್​ಗೂ ಸಂಕಷ್ಟ ಎದುರಾಗಿದೆ. ಅಕ್ಟೋಬರ್​ 6ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಲಾಗಿದೆ.

ಲಾಹೋರ್​ನ ವಾಜಿರ್​ ಖಾನ್​ ಮಸೀದಿಯಲ್ಲಿ ವಿಡಿಯೋ ಸಾಂಗ್​ ಶೂಟ್​ ಮಾಡಲಾಗಿತ್ತು. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಪಾಕಿಸ್ತಾನದಲ್ಲಿ ಅನೇಕರು ಸಿಟ್ಟಿಗೆದ್ದಿದ್ದರು. ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ದೂರು ದಾಖಲು ಮಾಡಿದ್ದರು. ಇನ್ನು, ಸಬಾಗೆ ಕೊಲೆ ಬೆದರಿಕೆ ಕೂಡ ಬಂದಿತ್ತು.

ಹಿಂದಿ ಮೀಡಿಯಮ್​ ಸಿನಿಮಾದಲ್ಲಿ ಸಬಾ ನಟನೆಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 69 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇರ್ಫಾನ್​ ಖಾನ್​ ನಟನೆಯನ್ನು ಅನೇಕರು ಹೊಗಳಿದ್ದರು. ಸಬಾ ಪಾಕಿಸ್ತಾನದಲ್ಲಿ ಸಿನಿಮಾ ಹಾಗೂ ಶಾರ್ಟ್​ ಮೂವಿಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿ ಸಾಕಷ್ಟು ಧಾರಾವಾಹಿಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಪಾಕಿಸ್ತಾನದಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದೆ. ಆದರೆ, ಸಬಾ ಮಾಡಿದ ತಪ್ಪಿನಿಂದಾಗಿ ಕೆಲ ಅಭಿಮಾನಿಗಳೇ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!