AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​

ಸಬಾ ಅವರು ಮೂಲತಃ ಪಾಕಿಸ್ತಾನದವರು. ಸಾಕಷ್ಟು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಕಳೆದ ವರ್ಷ ಡಾನ್ಸ್​ ವಿಡಿಯೋ ಚಿತ್ರೀಕರಣಕ್ಕಾಗಿ ಅವರು ಲಾಹೋರ್​ನ ಐತಿಹಾಸಿಕ ಮಸೀದಿಯಲ್ಲಿ ಹೆಜ್ಜೆ ಹಾಕಿದ್ದರು.

ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​
ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​
TV9 Web
| Edited By: |

Updated on: Sep 09, 2021 | 6:49 PM

Share

ಬಾಲಿವುಡ್​ನಲ್ಲಿ ಇರ್ಫಾನ್​ ಖಾನ್​ ನಟನೆಯ ‘ಹಿಂದಿ ಮೀಡಿಯಮ್​’ ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ಇರ್ಫಾನ್​ ಖಾನ್​ ಜತೆಗೆ ಸಬಾ ಖಮಾರ್​ ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಇವರಿಗೆ ಈಗ ಸಂಕಷ್ಟವೊಂದು ಎದುರಾಗಿದೆ. ಅವರನ್ನು ಬಂಧಿಸುವಂತೆ ಪಾಕಿಸ್ತಾನದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಬಾ ಅವರು ಮೂಲತಃ ಪಾಕಿಸ್ತಾನದವರು. ಸಾಕಷ್ಟು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಕಳೆದ ವರ್ಷ ಡಾನ್ಸ್​ ವಿಡಿಯೋ ಚಿತ್ರೀಕರಣಕ್ಕಾಗಿ ಅವರು ಲಾಹೋರ್​ನ ಐತಿಹಾಸಿಕ ಮಸೀದಿಯಲ್ಲಿ ಹೆಜ್ಜೆ ಹಾಕಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ಕೂಡ ದಾಖಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿಲ್ಲ. ಈ ಸಂಬಂಧ ಲಾಹೋರ್​ನ ಮ್ಯಾಜಿಸ್ಟ್ರಿಯಲ್​ ಕೋರ್ಟ್​ ಜಾಮೀನು ಸಹಿತ ವಾರಂಟ್​ ಹೊರಡಿಸಿದೆ. ಸಬಾ ಜತೆ ಗಾಯಕ ಬಿಲಾಲ್​ ಸಯೀದ್​ಗೂ ಸಂಕಷ್ಟ ಎದುರಾಗಿದೆ. ಅಕ್ಟೋಬರ್​ 6ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಲಾಗಿದೆ.

ಲಾಹೋರ್​ನ ವಾಜಿರ್​ ಖಾನ್​ ಮಸೀದಿಯಲ್ಲಿ ವಿಡಿಯೋ ಸಾಂಗ್​ ಶೂಟ್​ ಮಾಡಲಾಗಿತ್ತು. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಪಾಕಿಸ್ತಾನದಲ್ಲಿ ಅನೇಕರು ಸಿಟ್ಟಿಗೆದ್ದಿದ್ದರು. ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ದೂರು ದಾಖಲು ಮಾಡಿದ್ದರು. ಇನ್ನು, ಸಬಾಗೆ ಕೊಲೆ ಬೆದರಿಕೆ ಕೂಡ ಬಂದಿತ್ತು.

ಹಿಂದಿ ಮೀಡಿಯಮ್​ ಸಿನಿಮಾದಲ್ಲಿ ಸಬಾ ನಟನೆಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 69 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇರ್ಫಾನ್​ ಖಾನ್​ ನಟನೆಯನ್ನು ಅನೇಕರು ಹೊಗಳಿದ್ದರು. ಸಬಾ ಪಾಕಿಸ್ತಾನದಲ್ಲಿ ಸಿನಿಮಾ ಹಾಗೂ ಶಾರ್ಟ್​ ಮೂವಿಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿ ಸಾಕಷ್ಟು ಧಾರಾವಾಹಿಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಪಾಕಿಸ್ತಾನದಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದೆ. ಆದರೆ, ಸಬಾ ಮಾಡಿದ ತಪ್ಪಿನಿಂದಾಗಿ ಕೆಲ ಅಭಿಮಾನಿಗಳೇ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ