AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​

ಸಬಾ ಅವರು ಮೂಲತಃ ಪಾಕಿಸ್ತಾನದವರು. ಸಾಕಷ್ಟು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಕಳೆದ ವರ್ಷ ಡಾನ್ಸ್​ ವಿಡಿಯೋ ಚಿತ್ರೀಕರಣಕ್ಕಾಗಿ ಅವರು ಲಾಹೋರ್​ನ ಐತಿಹಾಸಿಕ ಮಸೀದಿಯಲ್ಲಿ ಹೆಜ್ಜೆ ಹಾಕಿದ್ದರು.

ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​
ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​
TV9 Web
| Edited By: |

Updated on: Sep 09, 2021 | 6:49 PM

Share

ಬಾಲಿವುಡ್​ನಲ್ಲಿ ಇರ್ಫಾನ್​ ಖಾನ್​ ನಟನೆಯ ‘ಹಿಂದಿ ಮೀಡಿಯಮ್​’ ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ಇರ್ಫಾನ್​ ಖಾನ್​ ಜತೆಗೆ ಸಬಾ ಖಮಾರ್​ ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಇವರಿಗೆ ಈಗ ಸಂಕಷ್ಟವೊಂದು ಎದುರಾಗಿದೆ. ಅವರನ್ನು ಬಂಧಿಸುವಂತೆ ಪಾಕಿಸ್ತಾನದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಬಾ ಅವರು ಮೂಲತಃ ಪಾಕಿಸ್ತಾನದವರು. ಸಾಕಷ್ಟು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಕಳೆದ ವರ್ಷ ಡಾನ್ಸ್​ ವಿಡಿಯೋ ಚಿತ್ರೀಕರಣಕ್ಕಾಗಿ ಅವರು ಲಾಹೋರ್​ನ ಐತಿಹಾಸಿಕ ಮಸೀದಿಯಲ್ಲಿ ಹೆಜ್ಜೆ ಹಾಕಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ಕೂಡ ದಾಖಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿಲ್ಲ. ಈ ಸಂಬಂಧ ಲಾಹೋರ್​ನ ಮ್ಯಾಜಿಸ್ಟ್ರಿಯಲ್​ ಕೋರ್ಟ್​ ಜಾಮೀನು ಸಹಿತ ವಾರಂಟ್​ ಹೊರಡಿಸಿದೆ. ಸಬಾ ಜತೆ ಗಾಯಕ ಬಿಲಾಲ್​ ಸಯೀದ್​ಗೂ ಸಂಕಷ್ಟ ಎದುರಾಗಿದೆ. ಅಕ್ಟೋಬರ್​ 6ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಲಾಗಿದೆ.

ಲಾಹೋರ್​ನ ವಾಜಿರ್​ ಖಾನ್​ ಮಸೀದಿಯಲ್ಲಿ ವಿಡಿಯೋ ಸಾಂಗ್​ ಶೂಟ್​ ಮಾಡಲಾಗಿತ್ತು. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಪಾಕಿಸ್ತಾನದಲ್ಲಿ ಅನೇಕರು ಸಿಟ್ಟಿಗೆದ್ದಿದ್ದರು. ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ದೂರು ದಾಖಲು ಮಾಡಿದ್ದರು. ಇನ್ನು, ಸಬಾಗೆ ಕೊಲೆ ಬೆದರಿಕೆ ಕೂಡ ಬಂದಿತ್ತು.

ಹಿಂದಿ ಮೀಡಿಯಮ್​ ಸಿನಿಮಾದಲ್ಲಿ ಸಬಾ ನಟನೆಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 69 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇರ್ಫಾನ್​ ಖಾನ್​ ನಟನೆಯನ್ನು ಅನೇಕರು ಹೊಗಳಿದ್ದರು. ಸಬಾ ಪಾಕಿಸ್ತಾನದಲ್ಲಿ ಸಿನಿಮಾ ಹಾಗೂ ಶಾರ್ಟ್​ ಮೂವಿಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿ ಸಾಕಷ್ಟು ಧಾರಾವಾಹಿಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಪಾಕಿಸ್ತಾನದಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದೆ. ಆದರೆ, ಸಬಾ ಮಾಡಿದ ತಪ್ಪಿನಿಂದಾಗಿ ಕೆಲ ಅಭಿಮಾನಿಗಳೇ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?