AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​

ಸಬಾ ಅವರು ಮೂಲತಃ ಪಾಕಿಸ್ತಾನದವರು. ಸಾಕಷ್ಟು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಕಳೆದ ವರ್ಷ ಡಾನ್ಸ್​ ವಿಡಿಯೋ ಚಿತ್ರೀಕರಣಕ್ಕಾಗಿ ಅವರು ಲಾಹೋರ್​ನ ಐತಿಹಾಸಿಕ ಮಸೀದಿಯಲ್ಲಿ ಹೆಜ್ಜೆ ಹಾಕಿದ್ದರು.

ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​
ಪಾಕಿಸ್ತಾನದ ಮಸೀದಿಯಲ್ಲಿ ಬಾಲಿವುಡ್​ ನಟಿಯ ಎಡವಟ್ಟು; ಅರೆಸ್ಟ್​ ವಾರೆಂಟ್​ ಹೊರಡಿಸಿದ ಕೋರ್ಟ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 09, 2021 | 6:49 PM

Share

ಬಾಲಿವುಡ್​ನಲ್ಲಿ ಇರ್ಫಾನ್​ ಖಾನ್​ ನಟನೆಯ ‘ಹಿಂದಿ ಮೀಡಿಯಮ್​’ ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ಇರ್ಫಾನ್​ ಖಾನ್​ ಜತೆಗೆ ಸಬಾ ಖಮಾರ್​ ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಇವರಿಗೆ ಈಗ ಸಂಕಷ್ಟವೊಂದು ಎದುರಾಗಿದೆ. ಅವರನ್ನು ಬಂಧಿಸುವಂತೆ ಪಾಕಿಸ್ತಾನದ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಬಾ ಅವರು ಮೂಲತಃ ಪಾಕಿಸ್ತಾನದವರು. ಸಾಕಷ್ಟು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಕಳೆದ ವರ್ಷ ಡಾನ್ಸ್​ ವಿಡಿಯೋ ಚಿತ್ರೀಕರಣಕ್ಕಾಗಿ ಅವರು ಲಾಹೋರ್​ನ ಐತಿಹಾಸಿಕ ಮಸೀದಿಯಲ್ಲಿ ಹೆಜ್ಜೆ ಹಾಕಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ಪ್ರಕರಣ ಕೂಡ ದಾಖಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿಲ್ಲ. ಈ ಸಂಬಂಧ ಲಾಹೋರ್​ನ ಮ್ಯಾಜಿಸ್ಟ್ರಿಯಲ್​ ಕೋರ್ಟ್​ ಜಾಮೀನು ಸಹಿತ ವಾರಂಟ್​ ಹೊರಡಿಸಿದೆ. ಸಬಾ ಜತೆ ಗಾಯಕ ಬಿಲಾಲ್​ ಸಯೀದ್​ಗೂ ಸಂಕಷ್ಟ ಎದುರಾಗಿದೆ. ಅಕ್ಟೋಬರ್​ 6ಕ್ಕೆ ಮುಂದಿನ ವಿಚಾರಣೆ ನಿಗದಿ ಮಾಡಲಾಗಿದೆ.

ಲಾಹೋರ್​ನ ವಾಜಿರ್​ ಖಾನ್​ ಮಸೀದಿಯಲ್ಲಿ ವಿಡಿಯೋ ಸಾಂಗ್​ ಶೂಟ್​ ಮಾಡಲಾಗಿತ್ತು. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಪಾಕಿಸ್ತಾನದಲ್ಲಿ ಅನೇಕರು ಸಿಟ್ಟಿಗೆದ್ದಿದ್ದರು. ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ದೂರು ದಾಖಲು ಮಾಡಿದ್ದರು. ಇನ್ನು, ಸಬಾಗೆ ಕೊಲೆ ಬೆದರಿಕೆ ಕೂಡ ಬಂದಿತ್ತು.

ಹಿಂದಿ ಮೀಡಿಯಮ್​ ಸಿನಿಮಾದಲ್ಲಿ ಸಬಾ ನಟನೆಗೆ ಎಲ್ಲ ಕಡೆಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 69 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇರ್ಫಾನ್​ ಖಾನ್​ ನಟನೆಯನ್ನು ಅನೇಕರು ಹೊಗಳಿದ್ದರು. ಸಬಾ ಪಾಕಿಸ್ತಾನದಲ್ಲಿ ಸಿನಿಮಾ ಹಾಗೂ ಶಾರ್ಟ್​ ಮೂವಿಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿ ಸಾಕಷ್ಟು ಧಾರಾವಾಹಿಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಪಾಕಿಸ್ತಾನದಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದೆ. ಆದರೆ, ಸಬಾ ಮಾಡಿದ ತಪ್ಪಿನಿಂದಾಗಿ ಕೆಲ ಅಭಿಮಾನಿಗಳೇ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಇದನ್ನೂ ಓದಿ: ರಜತ್​ ಬೇಡಿ ಕಾರು ಡಿಕ್ಕಿಯಿಂದ ಗಾಯಗೊಂಡಿದ್ದ ವ್ಯಕ್ತಿ ನಿಧನ; ಬಾಲಿವುಡ್​ ನಟನಿಗೆ ಹೆಚ್ಚಿತು ಸಂಕಷ್ಟ

ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ