AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ಸಿನಿಮಾದಲ್ಲಿನ ಹಲವು ತಪ್ಪುಗಳ ಪಟ್ಟಿ ನೀಡಿದ ಪಾಕಿಸ್ತಾನಿ ಪ್ರೇಕ್ಷಕರು

ಪಾಕಿಸ್ತಾನದ ಜನರಿಗೆ ‘ಧುರಂಧರ್’ ಸಿನಿಮಾ ಇಷ್ಟ ಆಗಿಲ್ಲ. ಅವರು ತಕರಾರು ತೆಗೆದಿದ್ದಾರೆ. ಈ ಸಿನಿಮಾದಲ್ಲಿ ತೋರಿಸಿದ ಅನೇಕ ಸಂಗತಿಗಳು ನಿಜ ಜೀವನದಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ಅಲ್ಲಿನ ಪ್ರೇಕ್ಷಕರು ಹೇಳಿದ್ದಾರೆ. ‘ಧುರಂಧರ್’ ಬಗ್ಗೆ ಪಾಕ್ ಪ್ರಜೆಗಳಿಬ್ಬರು ಮಾತನಾಡಿದ ವಿಡಿಯೋ ವೈರಲ್ ಆಗಿದೆ.

‘ಧುರಂಧರ್’ ಸಿನಿಮಾದಲ್ಲಿನ ಹಲವು ತಪ್ಪುಗಳ ಪಟ್ಟಿ ನೀಡಿದ ಪಾಕಿಸ್ತಾನಿ ಪ್ರೇಕ್ಷಕರು
Pakistani Audience, Ranveer Singh
ಮದನ್​ ಕುಮಾರ್​
|

Updated on: Mar 27, 2026 | 5:31 PM

Share

ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಗ್ಗೆ ಎಲ್ಲ ಕಡೆಗಳಲ್ಲಿ ಚರ್ಚೆ ಆಗುತ್ತಿದೆ. ಪಾಕಿಸ್ತಾನದಲ್ಲಿ ಈ ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಪಾಕ್ ಜನರು ಬೇರೆ ದೇಶಗಳಲ್ಲಿ ಹಾಗೂ ಪೈರಸಿ ಮೂಲಕ ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ‘ಧುರಂಧರ್’ (Dhurandhar) ಹೇಗಿದೆ ಎಂದು ಪಾಕ್ ಪ್ರೇಕ್ಷಕರು ವಿಮರ್ಶೆ ನೀಡುತ್ತಿದ್ದಾರೆ. ಅಂಥ ವಿಡಿಯೋಗಳು ಸಖತ್ ಸದ್ದು ಮಾಡುತ್ತಿವೆ. ಈ ಸಿನಿಮಾದಲ್ಲಿ ಯಾವೆಲ್ಲ ತಪ್ಪುಗಳು ಇವೆ ಎಂಬುದರ ಬಗ್ಗೆ ಪಾಕ್ (Pakistan) ಪ್ರಜೆಗಳಿಬ್ಬರು ಮಾತನಾಡಿದ ವಿಡಿಯೋ ಈಗ ವೈರಲ್ ಆಗಿದೆ.

‘ಧುರಂಧರ್ ಒಂದು ಓವರ್​ ರೇಟೆಡ್ ಸಿನಿಮಾ. ಈ ಚಿತ್ರದಲ್ಲಿ ಒಂದು ಡೈಲಾಗ್ ಇದೆ. ಯಾರು ಲಿಯಾರಿ ನಿಯಂತ್ರಣ ಮಾಡುತ್ತಾರೋ ಅವರು ಕರಾಚಿ ನಿಯಂತ್ರಿಸುತ್ತಾರೆ. ಯಾರು ಕರಾಚಿ ನಿಯಂತ್ರಿಸುತ್ತಾರೋ ಅವರು ಪಾಕಿಸ್ತಾನವನ್ನೇ ನಿಯಂತ್ರಿಸುತ್ತಾರೆ. ನಮಗೆ ಈ ಡೈಲಾಗ್ ಸಖತ್ ಫನ್ನಿ ಎನಿಸಿತು. ಕರಾಚಿಯು ಮೂಲ ನಿವಾಸಿಗಳ ನಗರ ಅಲ್ಲ. ಅದು ಅನಾಥರ ನಗರ’ ಎಂದು ಪ್ರೇಕ್ಷಕರು ಹೇಳಿದ್ದಾರೆ.

‘ನಮ್ಮ ಕುಟುಂಬದ ಮೂಲ ಇರುವುದು ಲಿಯಾರಿಯಲ್ಲಿ. ಅಲ್ಲಿ ಗ್ಯಾಂಗ್ ವಾರ್ ಇದ್ದಿದ್ದು ಮತ್ತು ಇರುವುದು ನಿಜ. ಆದರೆ ಅದು ನೆರೆಹೊರೆಯವರ ಸಣ್ಣ ಗ್ಯಾಂಗ್ ವಾರ್ ಅಷ್ಟೇ. ಮಿನಿ ಸ್ಕರ್ಟ್ ಧರಿಸಿ ಲಿಯಾರಿಯಲ್ಲಿ ಸಿನಿಮಾದ ಹೀರೋಯಿನ್ ಓಡಾಡುತ್ತಾಳೆ. ಅದು ಲಿಯಾರಿಯಲ್ಲಿ ಸಾಧ್ಯವೇ ಇಲ್ಲ. ಹಾಗೆ ಒಬ್ಬಳೇ ಮಹಿಳೆ ಮಿನಿ ಸ್ಕರ್ಟ್ ಧರಿಸಿ ಸುತ್ತಾಡೋಕೆ ಆಗಲ್ಲ’ ಎಂದ ಕೂಡ ಅವರು ಹೇಳಿದ್ದಾರೆ.

‘ಒಂದು ಹಾಡಿನಲ್ಲಿ ರೇವ್ ಪಾರ್ಟಿ ನಡೆಯೋದು ತೋರಿಸಿದ್ದಾರೆ. ಅಲ್ಲಿ ಸೂಚನಾ ಫಲಕಗಳು ಉರ್ದು ಭಾಷೆಯಲ್ಲಿ ಕಾಣಿಸಿದೆ. ಆದರೆ ನಿಜವಾಗಿಯೂ ಇಂಗ್ಲಿಷ್ ಸೂಚನಾ ಫಲಕಗಳು ಇರುತ್ತವೆ’ ಎಂದು ಈ ಪ್ರೇಕ್ಷಕರಿಬ್ಬರು ತಕರಾರು ತೆಗೆದಿದ್ದಾರೆ. ಅಲ್ಲದೇ, ರಣವೀರ್ ಸಿಂಗ್ ಧರಿಸಿ ಕಾಸ್ಟ್ಯೂಮ್ ಕೂಡ ಸೂಕ್ತವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಮಗೆ ರಸ್ತೆ ಇಲ್ಲ, 500 ಕೋಟಿ ರೂ. ಕೊಡಿ: ‘ಧುರಂಧರ್ 2’ ತಂಡಕ್ಕೆ ಪಾಕಿಸ್ತಾನಿಗಳ ಮನವಿ

‘ಪಾಕಿಸ್ತಾನದ ಮಿನಿಸ್ಟರ್ ಮಗಳ ಜೊತೆ ಹೀರೋ ಮದುವೆ ಆಗುತ್ತಾನೆ. ಪಾಕಿಸ್ತಾನದಲ್ಲಿ ಹಾಗೆಲ್ಲ ಆಗಲು ಸಾಧ್ಯವಿಲ್ಲ. ದೊಡ್ಡ ಬಂಗಲೆಯಲ್ಲಿ ಇರುವ ಆಕೆ ಮದುವೆ ಬಳಿಕ ಚಿಕ್ಕ ಮನೆಗೆ ಹೋಗೋಕೆ ಆಗಲ್ಲ’ ಎಂದು ಪ್ರೇಕ್ಷಕರಿಬ್ಬರು ಚರ್ಚೆ ಮಾಡಿದ್ದಾರೆ. ಒಟ್ಟಿನಲ್ಲಿ ಪಾಕಿಸ್ತಾನದ ಪ್ರೇಕ್ಷಕರಿಗೆ ‘ಧುರಂಧರ್’ ಸಿನಿಮಾದಲ್ಲಿ ಇಂಥ ಹಲವು ತಪ್ಪುಗಳು ಕಾಣಿಸಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ