AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಆಗಲ್ಲ’: ರಾಖಿ ಸಾವಂತ್​ಗೆ ಪ್ರಪೋಸ್ ಮಾಡಿ ಉಲ್ಟಾ ಹೊಡೆದ ಪಾಕ್ ಮಾಡೆಲ್

ರಾಖಿ ಸಾವಂತ್ ಅವರು ಪಾಕಿಸ್ತಾನಿ ಮಾಡೆಲ್ ಡೊಡಿ ಖಾನ್ ಅವರನ್ನು ಮದುವೆಯಾಗುವುದಾಗಿ ಘೋಷಿಸಿದ್ದರು. ಆದರೆ, ಡೊಡಿ ಖಾನ್ ಅವರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಅವರು ರಾಖಿಯನ್ನು ಉತ್ತಮ ಸ್ನೇಹಿತೆ ಎಂದು ಕರೆದಿದ್ದಾರೆ ಮತ್ತು ಪಾಕಿಸ್ತಾನದಲ್ಲಿ ಅವರನ್ನು ಬೇರೆ ಯಾರೊಂದಿಗೆ ಮದುವೆ ಮಾಡಿಸುವುದಾಗಿ ಹೇಳಿದ್ದಾರೆ. ರಾಖಿ ಅವರ ಹಿಂದಿನ ಎರಡು ಮದುವೆಗಳು ವಿಫಲವಾಗಿವೆ ಎಂಬುದನ್ನು ಇದು ನೆನಪಿಸುತ್ತದೆ.

‘ಮದುವೆ ಆಗಲ್ಲ’: ರಾಖಿ ಸಾವಂತ್​ಗೆ ಪ್ರಪೋಸ್ ಮಾಡಿ ಉಲ್ಟಾ ಹೊಡೆದ ಪಾಕ್ ಮಾಡೆಲ್
Rakhi Sawant Dodi Khan
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 31, 2025 | 1:08 PM

Share

ರಾಖಿ ಸಾವಂತ್ ಅವರಿಗೆ ವಿವಾದಗಳನ್ನು ಮಾಡಿಕೊಳ್ಳುವುದು ಎಂದರೆ ಎಲ್ಲಿಲ್ಲದ ಖುಷಿ. ತಿಂಗಳಿಗೆ ಒಮ್ಮೆಯಾದರೂ ಅವರ ಹೆಸರಲ್ಲಿ ಒಂದು ಕಿರಿಕ್ ಆಗಬೇಕು, ಒಂದಷ್ಟು ಟ್ರೋಲ್ಗಳು ಹರಿದಾಡಬೇಕು. ಇದು ಅವರ ಟಾರ್ಗೆಟ್ ಎಂಬಂತೆ ಕಾಣುತ್ತಿದೆ. ಇತ್ತೀಚೆಗೆ ರಾಖಿ ಅವರು ಮೂರನೆ ಮದುವೆ ಘೋಷಣೆ ಮಾಡಿದ್ದರು. ಪಾಕಿಸ್ತಾನದ ಮಾಡೆಲ್ ಡೊಡಿ ಖಾನ್ ಜೊತೆ ವಿವಾಹ ಆಗುವುದಾಗಿ ಘೋಷಿಸಿದ್ದರು. ಆದರೆ, ಈ ವಿಚಾರವನ್ನು ಡೊಡಿ ಖಾನ್ ತಳ್ಳಿ ಹಾಕಿದ್ದಾರೆ. ಅವರೇ ಪ್ರಪೋಸ್ ಮಾಡಿ ಉಲ್ಟಾ ಹೊಡೆದಿದ್ದಾರೆ.

ರಾಖಿ ಅವರಿಗೆ ಎರಡು ಮದುವೆ ಆಗಿ ಮುರಿದು ಬಿದ್ದಿವೆ. 2019ರಲ್ಲಿ ಅವರು ರಿತೇಶ್ ಸಿಂಗ್ ಜೊತೆ ವಿವಾಹ ಆದರು. 2022ರಲ್ಲಿ ವಿಚ್ಛೇದನ ಪಡೆದುಕೊಂಡರು. ಬಳಿಕ ಮೈಸೂರು ಮೂಲದ ಆದಿಲ್ ಖಾನ್ ಜೊತೆ ಮದುವೆ ನೆರವೇರಿತು. ಅದು ಕೂಡ ಕಿರಿಕ್ನಲ್ಲಿ ಕೊನೆ ಆಯಿತು. ಇತ್ತೀಚೆಗೆ ಅವರು ಮೂರನೇ ಮದುವೆ ಘೋಷಣೆ ಮಾಡಿದ್ದರು. ಪಾಕ್ ಹುಡುಗನ ಜೊತೆ ಮದುವೆ ಆಗ್ತೀನಿ ಎಂದಿದ್ದರು ಅವರು.

ಮಾಡೆಲ್ ಹೇಳಿದ್ದು ಏನು?

‘ಹೆಲ್ಲೋ ಭಾರತ ಹಾಗೂ ಪಾಕಿಸ್ತಾನ. ನಾನು ಡೊಡಿ ಖಾನ್ ಮಾತನಾಡುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದನ್ನು ನೋಡಿದ್ದೀರಿ. ರಾಖಿ ಸಾವಂತ್ ಅವರಿಗೆ ನಾನು ಪ್ರಪೋಸ್ ಮಾಡಿದ್ದೆ. ಅವರನ್ನು ನಾನು ಚೆನ್ನಾಗಿ ತಿಳಿದಿದ್ದೇನೆ. ಹೀಗಾಗಿ ಪ್ರಪೋಸ್ ಮಾಡಿದೆ. ಅವರನ್ನು ತಿಳಿಯುತ್ತಾ ಹೋದಂತೆ ಅವರಿಗೆ ದೇವರ ಮೇಲೆ ಅಪಾರ ಭಕ್ತಿ ಇದೆ ಎಂದು ಗೊತ್ತಾಯಿತು’ ಎಂದಿದ್ದಾರೆ ಡೊಡಿ ಖಾನ್.

‘ರಾಖಿ ಸಾವಂತ್ ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಾರೆ. ಓರ್ವ ಅವರ ಜೀವನದಲ್ಲಿ ಬಂದ. ಅವರಿಗೆ ಆತ ಏನು ಮಾಡಿದ ಅನ್ನೋದು ನಿಮಗೆ ಗೊತ್ತು. ಅವರು ಸಾಕಷ್ಟು ಸಂಕಷ್ಟ ಎದುರಿಸಿದ್ದಾರೆ. ಅವರು ಇಸ್ಲಾಮ್ನ ಒಪ್ಪಿಕೊಂಡಿದ್ದಾರೆ. ಅವರು ಫಾತಿಮಾ ಎಂದು ಹೆಸರು ಬದಲಿಸಿಕೊಂಡಿದ್ದಾರೆ. ಇದೆಲ್ಲ ಇಷ್ಟ ಆಗಿ ನಾನು ಅವರಿಗೆ ಪ್ರಪೋಸ್ ಮಾಡಿದೆ’ ಎಂದು ಡೊಡಿ ಖಾನ್ ಹೇಳಿದ್ದಾರೆ.

ಇದನ್ನೂ ಓದಿ:ಭಾರತದ ಮಗಳು ನಾನು, ಪಾಕಿಸ್ತಾನಕ್ಕೆ ಸೊಸೆ ಆಗ್ತೀನಿ: ರಾಖಿ ಸಾವಂತ್

‘ಆದರೆ, ಇದು ಜನರಿಗೆ ಸ್ವೀಕಾರಾರ್ಹವಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ನಾನು ಈಗಾಗಲೇ ಸಾಕಷ್ಟು ಸಂದೇಶಗಳನ್ನು ಸ್ವೀಕರಿಸಿದ್ದೇನೆ. ರಾಖಿ ಅವರೇ ನೀವು ನನ್ನ ಉತ್ತಮ ಸ್ನೇಹಿತೆ. ಯಾವಾಗಲೂ ನಿಮ್ಮ ಜೊತೆ ಇರುತ್ತೇನೆ. ನೀವು ನನ್ನ ಪತ್ನಿ ಆಗಲು ಸಾಧ್ಯವಾಗದಿರಬಹುದು. ಆದರೆ, ನೀವು ಪಾಕಿಸ್ತಾನದ ಸೊಸೆಯಾಗುತ್ತೀರಿ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ನಾನು ನಿಮ್ಮನ್ನು ಪಾಕಿಸ್ತಾನದವರ ಜೊತೆ ಮದುವೆ ಮಾಡುತ್ತೇನೆ’ ಎಂದು ಭರವಸೆ ನೀಡಿದ್ದಾರೆ.

ಸ್ವತಃ ಡೊಡಿ ಖಾನ್ ಅವರು ರಾಖಿ ಸಾವಂತ್ಗೆ ಮದುವೆಯ ಪ್ರಪೋಸ್ ಮಾಡಿದ್ದರು. ಈ ವಿಡಿಯೋವನ್ನು ರಾಖಿ ಸಾವಂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ‘ದಿಬ್ಬಣ ತೆಗೆದುಕೊಂಡು ಭಾರತಕ್ಕೆ ಬರಲೇ ಅಥವಾ ದುಬೈಗೆ ಬರಲೇ’ ಎಂದು ಡೊಡಿ ಖಾನ್ ಕೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್