AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atal: ಬಯೋಪಿಕ್​ನಲ್ಲಿ ಅಟಲ್​ ಬಿಹಾರಿ ವಾಜಪೇಯಿ ಪಾತ್ರ ಮಾಡಲಿರುವ ಪಂಕಜ್​ ತ್ರಿಪಾಠಿ? ಹೆಚ್ಚಿತು ನಿರೀಕ್ಷೆ

Pankaj Tripathi | Atal Bihari Vajpayee: ಬಯೋಪಿಕ್​ನಲ್ಲಿ ನಟಿಸಿರುವುದು ನಿಜಕ್ಕೂ ಸವಾಲಿನ ಕೆಲಸ. ಅದರಲ್ಲೂ ಅಟಲ್​ ಬಿಹಾರಿ ವಾಜಪೇಯಿ ಅವರಂತಹ ವ್ಯಕ್ತಿಗಳ ಪಾತ್ರದಲ್ಲಿ ನಟಿಸುವುದು ಎಂದರೆ ಸುಲಭವಲ್ಲ.

Atal: ಬಯೋಪಿಕ್​ನಲ್ಲಿ ಅಟಲ್​ ಬಿಹಾರಿ ವಾಜಪೇಯಿ ಪಾತ್ರ ಮಾಡಲಿರುವ ಪಂಕಜ್​ ತ್ರಿಪಾಠಿ? ಹೆಚ್ಚಿತು ನಿರೀಕ್ಷೆ
ಪಂಕಜ್ ತ್ರಿಪಾಠಿ, ಅಟಲ್ ಬಿಹಾರಿ ವಾಜಪೇಯಿ
TV9 Web
| Updated By: ಮದನ್​ ಕುಮಾರ್​|

Updated on: Jul 11, 2022 | 8:28 AM

Share

ನಟ ಪಂಕಜ್​ ತ್ರಿಪಾಠಿ (Pankaj Tripathi) ಅವರ ಪ್ರತಿಭೆ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಅವರು ಈಗಾಗಲೇ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಪಡಿಸಿದ್ದಾರೆ. ಅನೇಕ ಸೂಪರ್​ ಹಿಟ್​ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಬಾಲಿವುಡ್​ನಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ಪೋಷಕ ಪಾತ್ರಗಳ ಮೂಲಕ ಪಂಕಜ್​ ತ್ರಿಪಾಠಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಅವರಿಗೆ ಬಂಪರ್​ ಆಫರ್​ ಸಿಕ್ಕಿದೆ. ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ (Atal Bihari Vajpayee) ಕುರಿತು ತಯಾರಾಗುತ್ತಿರುವ ಬಯೋಪಿಕ್​ನಲ್ಲಿ ಮುಖ್ಯ ಪಾತ್ರ ನಿಭಾಯಿಸಲು ಪಂಕಜ್​ ತ್ರಿಪಾಠಿಗೆ ಅಫರ್​ ನೀಡಲಾಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಕೆಲವೇ ದಿನಗಳ ಹಿಂದೆ ಈ ಬಯೋಪಿಕ್ (Biopic) ಬಗ್ಗೆ ಘೋಷಣೆ ಆಗುತ್ತು. ಈಗ ಪಾತ್ರವರ್ಗದ ಆಯ್ಕೆ ಬಗ್ಗೆ ಗುಸುಗುಸು ಕೇಳಿಬಂದಿದೆ.

ಬಯೋಪಿಕ್​ನಲ್ಲಿ ನಟಿಸಿರುವುದು ನಿಜಕ್ಕೂ ಸವಾಲಿನ ಕೆಲಸ. ಅದರಲ್ಲೂ ಅಟಲ್​ ಬಿಹಾರಿ ವಾಜಪೇಯಿ ಅವರಂತಹ ವ್ಯಕ್ತಿಗಳ ಪಾತ್ರದಲ್ಲಿ ನಟಿಸುವುದು ಎಂದರೆ ಸುಲಭವಲ್ಲ. ಹಾಗಾಗಿ ಅದಕ್ಕೆ ಸೂಕ್ತ ಆಗುವಂತಹ ನಟರನ್ನೇ ಆಯ್ಕೆ ಮಾಡಿಕೊಳ್ಳಬೇಕು. ಪಂಕಜ್​ ತ್ರಿಪಾಠಿ ಆಯ್ಕೆ ಕುರಿತು ನಿರ್ಮಾಪಕರು ಇನ್ನಷ್ಟೇ ಅಧಿಕೃತ ಮಾಹಿತಿ ಹಂಚಿಕೊಳ್ಳಬೇಕಿದೆ. ಈ ಸಿನಿಮಾ ಮೇಲೆ ಪ್ರೇಕ್ಷಕರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

‘ಅಟಲ್​’ ಎಂದು ಈ ಸಿನಿಮಾಗೆ ಹೆಸರು ಇಡಲಾಗಿದೆ. ‘ಮೇ ರಹೂ ಯಾ ನಾ ರಹೂ ಯೇ ದೇಶ್​​ ರೆಹ್ನಾ ಚಾಹಿಯೇ: ಅಟಲ್​’ ಎಂಬುದು ಈ ಚಿತ್ರದ ಪೂರ್ತಿ ಶೀರ್ಷಿಕೆ. ‘ನಾನು ಇರಲಿ, ಇಲ್ಲದೇ ಇರಲಿ. ಈ ದೇಶ ಇರಬೇಕು’ ಎಂಬುದು ಈ ವಾಕ್ಯದ ಅರ್ಥ. ದೇಶದ ಬಗ್ಗೆ ಅಟಲ್​ ಬಿಹಾರಿ ವಾಜಪೇಯಿ ಅವರು ಹೊಂದಿದ್ದ ದೂರದೃಷ್ಟಿ ಮತ್ತು ಅವರ ವೈಯಕ್ತಿಕ ಜೀವನದ ಬಗ್ಗೆ ಈ ಸಿನಿಮಾದಲ್ಲಿ ವಿವರಿಸಲಾಗುತ್ತದೆ ಎಂಬ ನಿರೀಕ್ಷೆ ಇದೆ.

ಇದನ್ನೂ ಓದಿ
Image
ಲತಾ ಮಂಗೇಶ್ಕರ್​ ಕುರಿತು ಬರಲಿದೆ ಬಯೋಪಿಕ್​; ರೇಸ್​ನಲ್ಲಿದ್ದಾರೆ ಖ್ಯಾತ ನಿರ್ದೇಶಕರು
Image
ಕಪಿಲ್​ ಶರ್ಮಾ ಕುರಿತು ಬಯೋಪಿಕ್​; ಅಧಿಕೃತ ಘೋಷಣೆ ಮಾಡಿದ ಚಿತ್ರತಂಡ
Image
ದ್ರಾವಿಡ್​ ಬಯೋಪಿಕ್​ನಲ್ಲಿ ಸುದೀಪ್ ಮುಖ್ಯಭೂಮಿಕೆ? ಹಕ್ಕು ತಂದ್ರೆ ಸಿನಿಮಾ ಮಾಡ್ತೀನಿ ಎಂದ ಕಬೀರ್​ ಖಾನ್
Image
ಪುನೀತ್​ ಕುರಿತು ಸಿದ್ಧವಾಗಲಿದೆ ಬಯೋಪಿಕ್​? ನಿರ್ದೇಶಕ ಸಂತೋಷ್​ ಆನಂದ್​ರಾಮ್​ ನೀಡಿದ್ರು ಸೂಚನೆ

ಉಲ್ಲೇಖ್​ ಎನ್​.ಪಿ. ಅವರು ಬರೆದ ‘The Untold Vajpayee: Politician and Paradox’ ಕೃತಿಯನ್ನು ಆಧರಿಸಿ ಈ ಸಿನಿಮಾ ತಯಾರಾಗಲಿದೆ. ಈ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ? ಅಟಲ್​ ಬಿಹಾರಿ ವಾಜಪೇಯಿ ಅವರ ಪಾತ್ರಕ್ಕೆ ಬಣ್ಣ ಹಚ್ಚಲಿರುವುದು ಯಾರು? ಇನ್ನುಳಿದ ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ? ಈ ಎಲ್ಲ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: ಸರೋಜಿನಿ ನಾಯ್ಡು ಬಯೋಪಿಕ್​ನಲ್ಲಿ ಶಾಂತಿಪ್ರಿಯಾ, ಸೋನಲ್​: ಪ್ಯಾನ್​ ಇಂಡಿಯಾ ಚಿತ್ರಕ್ಕೆ ಕನ್ನಡಿಗನ ನಿರ್ದೇಶನ

ವಿನೋದ್​ ಭಾನುಶಾಲಿ ಮತ್ತು ಸಂದೀಪ್​ ಸಿಂಗ್​ ಅವರು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. 2023ರ ಆರಂಭದಲ್ಲಿ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಲಿದೆ. ಅದೇ ವರ್ಷ ಕ್ರಿಸ್​ಮಸ್​ ಹಬ್ಬಕ್ಕೆ (ಡಿ.25) ಬಯೋಪಿಕ್​ ರಿಲೀಸ್​ ಆಗಲಿದೆ. ಅಂದು ಅಟಲ್​ ಬಿಹಾರಿ ವಾಜಪೇಯಿ ಅವರ 99ನೇ ವರ್ಷದ ಜನ್ಮದಿನ ಎಂಬುದು ವಿಶೇಷ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!