AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತ: ನಟ ಪಂಕಜ್​ ತ್ರಿಪಾಠಿ ಬಾವ ನಿಧನ; ಸಹೋದರಿ ಸ್ಥಿತಿ ಗಂಭೀರ

ಬಾಲಿವುಡ್​ ನಟ ಪಂಕಜ್​​ ತ್ರಿಪಾಠಿ ಅವರ ಸಹೋದರಿ ಸರಿತಾ ತಿವಾರಿ ಮತ್ತು ಅವರ ಪತಿ ರಾಜೇಶ್​ ತಿವಾರಿ ಪ್ರಯಾಣಿಸುತ್ತಿದ್ದ ಕಾರು ಅತಿ ವೇಗದಲ್ಲಿ ಬಂದು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಕಾರು ಸಂಪೂರ್ಣ ಜಖಂ ಆಗಿದ್ದು, ರಾಜೇಶ್​ ತಿವಾರಿ ಮೃತಪಟ್ಟಿದ್ದಾರೆ. ಸರಿತಾ ತಿವಾರಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭೀಕರ ಅಪಘಾತ: ನಟ ಪಂಕಜ್​ ತ್ರಿಪಾಠಿ ಬಾವ ನಿಧನ; ಸಹೋದರಿ ಸ್ಥಿತಿ ಗಂಭೀರ
ಪಂಕಜ್​ ತ್ರಿಪಾಠಿ, ಕಾರು ಅಪಘಾತ
ಮದನ್​ ಕುಮಾರ್​
|

Updated on: Apr 21, 2024 | 12:00 PM

Share

ನಟ ಪಂಕಜ್​ ತ್ರಿಪಾಠಿ (Pankaj Tripathi) ಅವರ ತಂದೆ ಕೆಲವೇ ತಿಂಗಳ ಹಿಂದೆ ನಿಧನರಾಗಿದ್ದರು. ಈಗ ಅವರ ಕುಟುಂಬದಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಪಂಕಜ್​ ತ್ರಿಪಾಠಿ ಅವರ ಬಾವ (Pankaj Tripathi Brother-in-law) ಕೊನೆಯುಸಿರು ಎಳೆದಿದ್ದಾರೆ. ಪಂಕಜ್​ ತ್ರಿಪಾಠಿ ಅವರ ಸಹೋದರಿಗೆ (Pankaj Tripathi sister) ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿ ಎಂದು ಹೇಳಲಾಗಿದೆ. ಶನಿವಾರ (ಏಪ್ರಿಲ್​ 20) ಸಂಜೆ ನಾಲ್ಕು ಗಂಟೆಗೆ ಜಾರ್ಖಂಡ್​ನಲ್ಲಿ ಈ ಅಪಘಾತ ಸಂಭವಿಸಿದೆ. ಪಂಕಜ್​ ತ್ರಿಪಾಠಿ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಆ ದೇವರ ನೀಡಲಿ ಎಂದು ಅಭಿಮಾನಿಗಳು, ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಪಂಕಜ್​​ ತ್ರಿಪಾಠಿ ಅವರ ಸಹೋದರಿ ಸರಿತಾ ತಿವಾರಿ ಹಾಗೂ ಅವರ ಪತಿ ರಾಜೇಶ್​ ತಿವಾರಿ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಅತಿ ವೇಗದಲ್ಲಿ ಇದ್ದಿದ್ದರಿಂದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಅಪಘಾತದ ತೀವ್ರತೆಗೆ ರಾಜೇಶ್​ ತಿವಾರಿ ನಿಧನರಾಗಿದ್ದಾರೆ. ಕಾರಿನ ಒಳಗಿದ್ದ ರಾಜೇಶ್​ ಮತ್ತು ಸರಿತಾ ಅವರನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರತೆಗೆದಿದ್ದಾರೆ.

ಅಪಘಾತದ ಬಳಿಕ ಧನ್​ಬಾದ್​ ಮೆಡಿಕಲ್​ ಕಾಲೇಜ್ ಆಸ್ಪತ್ರೆಗೆ ರಾಜೇಶ್​ ತಿವಾರಿ ಹಾಗೂ ಸರಿತಾ ತಿವಾರಿ ಅವರನ್ನು ದಾಖಲಿಸಲಾಯಿತು. ಅಷ್ಟು ಹೊತ್ತಿಗಾಗಲೇ ರಾಜೇಶ್​ ತಿವಾರಿ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದರು. ಸರಿತಾ ತಿವಾರಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿ ಸ್ಥಿತಿ ಸದ್ಯಕ್ಕಂತೂ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ. ಈ ಘಟನೆಯಿಂದ ಪಂಕಜ್​ ತ್ರಿಪಾಠಿ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ: ಈಜು ಕಲಿಯಲು ಕೀಟಗಳನ್ನು ತಿಂದಿದ್ದ ನಟ; ಅಚ್ಚರಿ ವಿಚಾರ ತಿಳಿಸಿದ ಪಂಕಜ್​ ತ್ರಿಪಾಠಿ

ಪಂಕಜ್​ ತ್ರಿಪಾಠಿ ಅವರ ಬಾವ ರಾಜೇಶ್​ ತಿವಾರಿ ಅವರು ಭಾರತೀಯ ರೇಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಚಿತ್ತರಂಜನ್​ನಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ತಮ್ಮ ಹಳ್ಳಿಯಿಂದ ಚಿತ್ತರಂಜನ್​ಗೆ ವಾಪಸ್​ ಬರುವ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 2023ರ ಆಗಸ್ಟ್​ ತಿಂಗಳಲ್ಲಿ ಪಂಕಜ್​ ತ್ರಿಪಾಠಿ ಅವರ ತಂದೆ ನಿಧನರಾಗಿದ್ದರು. ಆ ನೋವು ಮರೆಯುವ ಮುನ್ನವೇ ಅವರ ಕುಟುಂಬದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸರಿತಾ ತಿವಾರಿ ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್