AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತ: ನಟ ಪಂಕಜ್​ ತ್ರಿಪಾಠಿ ಬಾವ ನಿಧನ; ಸಹೋದರಿ ಸ್ಥಿತಿ ಗಂಭೀರ

ಬಾಲಿವುಡ್​ ನಟ ಪಂಕಜ್​​ ತ್ರಿಪಾಠಿ ಅವರ ಸಹೋದರಿ ಸರಿತಾ ತಿವಾರಿ ಮತ್ತು ಅವರ ಪತಿ ರಾಜೇಶ್​ ತಿವಾರಿ ಪ್ರಯಾಣಿಸುತ್ತಿದ್ದ ಕಾರು ಅತಿ ವೇಗದಲ್ಲಿ ಬಂದು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಕಾರು ಸಂಪೂರ್ಣ ಜಖಂ ಆಗಿದ್ದು, ರಾಜೇಶ್​ ತಿವಾರಿ ಮೃತಪಟ್ಟಿದ್ದಾರೆ. ಸರಿತಾ ತಿವಾರಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭೀಕರ ಅಪಘಾತ: ನಟ ಪಂಕಜ್​ ತ್ರಿಪಾಠಿ ಬಾವ ನಿಧನ; ಸಹೋದರಿ ಸ್ಥಿತಿ ಗಂಭೀರ
ಪಂಕಜ್​ ತ್ರಿಪಾಠಿ, ಕಾರು ಅಪಘಾತ
ಮದನ್​ ಕುಮಾರ್​
|

Updated on: Apr 21, 2024 | 12:00 PM

Share

ನಟ ಪಂಕಜ್​ ತ್ರಿಪಾಠಿ (Pankaj Tripathi) ಅವರ ತಂದೆ ಕೆಲವೇ ತಿಂಗಳ ಹಿಂದೆ ನಿಧನರಾಗಿದ್ದರು. ಈಗ ಅವರ ಕುಟುಂಬದಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಪಂಕಜ್​ ತ್ರಿಪಾಠಿ ಅವರ ಬಾವ (Pankaj Tripathi Brother-in-law) ಕೊನೆಯುಸಿರು ಎಳೆದಿದ್ದಾರೆ. ಪಂಕಜ್​ ತ್ರಿಪಾಠಿ ಅವರ ಸಹೋದರಿಗೆ (Pankaj Tripathi sister) ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿ ಎಂದು ಹೇಳಲಾಗಿದೆ. ಶನಿವಾರ (ಏಪ್ರಿಲ್​ 20) ಸಂಜೆ ನಾಲ್ಕು ಗಂಟೆಗೆ ಜಾರ್ಖಂಡ್​ನಲ್ಲಿ ಈ ಅಪಘಾತ ಸಂಭವಿಸಿದೆ. ಪಂಕಜ್​ ತ್ರಿಪಾಠಿ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಆ ದೇವರ ನೀಡಲಿ ಎಂದು ಅಭಿಮಾನಿಗಳು, ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಪಂಕಜ್​​ ತ್ರಿಪಾಠಿ ಅವರ ಸಹೋದರಿ ಸರಿತಾ ತಿವಾರಿ ಹಾಗೂ ಅವರ ಪತಿ ರಾಜೇಶ್​ ತಿವಾರಿ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಅತಿ ವೇಗದಲ್ಲಿ ಇದ್ದಿದ್ದರಿಂದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಅಪಘಾತದ ತೀವ್ರತೆಗೆ ರಾಜೇಶ್​ ತಿವಾರಿ ನಿಧನರಾಗಿದ್ದಾರೆ. ಕಾರಿನ ಒಳಗಿದ್ದ ರಾಜೇಶ್​ ಮತ್ತು ಸರಿತಾ ಅವರನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರತೆಗೆದಿದ್ದಾರೆ.

ಅಪಘಾತದ ಬಳಿಕ ಧನ್​ಬಾದ್​ ಮೆಡಿಕಲ್​ ಕಾಲೇಜ್ ಆಸ್ಪತ್ರೆಗೆ ರಾಜೇಶ್​ ತಿವಾರಿ ಹಾಗೂ ಸರಿತಾ ತಿವಾರಿ ಅವರನ್ನು ದಾಖಲಿಸಲಾಯಿತು. ಅಷ್ಟು ಹೊತ್ತಿಗಾಗಲೇ ರಾಜೇಶ್​ ತಿವಾರಿ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದರು. ಸರಿತಾ ತಿವಾರಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿ ಸ್ಥಿತಿ ಸದ್ಯಕ್ಕಂತೂ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ. ಈ ಘಟನೆಯಿಂದ ಪಂಕಜ್​ ತ್ರಿಪಾಠಿ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ: ಈಜು ಕಲಿಯಲು ಕೀಟಗಳನ್ನು ತಿಂದಿದ್ದ ನಟ; ಅಚ್ಚರಿ ವಿಚಾರ ತಿಳಿಸಿದ ಪಂಕಜ್​ ತ್ರಿಪಾಠಿ

ಪಂಕಜ್​ ತ್ರಿಪಾಠಿ ಅವರ ಬಾವ ರಾಜೇಶ್​ ತಿವಾರಿ ಅವರು ಭಾರತೀಯ ರೇಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಚಿತ್ತರಂಜನ್​ನಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ತಮ್ಮ ಹಳ್ಳಿಯಿಂದ ಚಿತ್ತರಂಜನ್​ಗೆ ವಾಪಸ್​ ಬರುವ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 2023ರ ಆಗಸ್ಟ್​ ತಿಂಗಳಲ್ಲಿ ಪಂಕಜ್​ ತ್ರಿಪಾಠಿ ಅವರ ತಂದೆ ನಿಧನರಾಗಿದ್ದರು. ಆ ನೋವು ಮರೆಯುವ ಮುನ್ನವೇ ಅವರ ಕುಟುಂಬದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸರಿತಾ ತಿವಾರಿ ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!