AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತ: ನಟ ಪಂಕಜ್​ ತ್ರಿಪಾಠಿ ಬಾವ ನಿಧನ; ಸಹೋದರಿ ಸ್ಥಿತಿ ಗಂಭೀರ

ಬಾಲಿವುಡ್​ ನಟ ಪಂಕಜ್​​ ತ್ರಿಪಾಠಿ ಅವರ ಸಹೋದರಿ ಸರಿತಾ ತಿವಾರಿ ಮತ್ತು ಅವರ ಪತಿ ರಾಜೇಶ್​ ತಿವಾರಿ ಪ್ರಯಾಣಿಸುತ್ತಿದ್ದ ಕಾರು ಅತಿ ವೇಗದಲ್ಲಿ ಬಂದು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಕಾರು ಸಂಪೂರ್ಣ ಜಖಂ ಆಗಿದ್ದು, ರಾಜೇಶ್​ ತಿವಾರಿ ಮೃತಪಟ್ಟಿದ್ದಾರೆ. ಸರಿತಾ ತಿವಾರಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭೀಕರ ಅಪಘಾತ: ನಟ ಪಂಕಜ್​ ತ್ರಿಪಾಠಿ ಬಾವ ನಿಧನ; ಸಹೋದರಿ ಸ್ಥಿತಿ ಗಂಭೀರ
ಪಂಕಜ್​ ತ್ರಿಪಾಠಿ, ಕಾರು ಅಪಘಾತ
ಮದನ್​ ಕುಮಾರ್​
|

Updated on: Apr 21, 2024 | 12:00 PM

Share

ನಟ ಪಂಕಜ್​ ತ್ರಿಪಾಠಿ (Pankaj Tripathi) ಅವರ ತಂದೆ ಕೆಲವೇ ತಿಂಗಳ ಹಿಂದೆ ನಿಧನರಾಗಿದ್ದರು. ಈಗ ಅವರ ಕುಟುಂಬದಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಪಂಕಜ್​ ತ್ರಿಪಾಠಿ ಅವರ ಬಾವ (Pankaj Tripathi Brother-in-law) ಕೊನೆಯುಸಿರು ಎಳೆದಿದ್ದಾರೆ. ಪಂಕಜ್​ ತ್ರಿಪಾಠಿ ಅವರ ಸಹೋದರಿಗೆ (Pankaj Tripathi sister) ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿ ಎಂದು ಹೇಳಲಾಗಿದೆ. ಶನಿವಾರ (ಏಪ್ರಿಲ್​ 20) ಸಂಜೆ ನಾಲ್ಕು ಗಂಟೆಗೆ ಜಾರ್ಖಂಡ್​ನಲ್ಲಿ ಈ ಅಪಘಾತ ಸಂಭವಿಸಿದೆ. ಪಂಕಜ್​ ತ್ರಿಪಾಠಿ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿಯನ್ನು ಆ ದೇವರ ನೀಡಲಿ ಎಂದು ಅಭಿಮಾನಿಗಳು, ಆಪ್ತರು ಪ್ರಾರ್ಥಿಸುತ್ತಿದ್ದಾರೆ.

ಪಂಕಜ್​​ ತ್ರಿಪಾಠಿ ಅವರ ಸಹೋದರಿ ಸರಿತಾ ತಿವಾರಿ ಹಾಗೂ ಅವರ ಪತಿ ರಾಜೇಶ್​ ತಿವಾರಿ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಅತಿ ವೇಗದಲ್ಲಿ ಇದ್ದಿದ್ದರಿಂದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಅಪಘಾತದ ತೀವ್ರತೆಗೆ ರಾಜೇಶ್​ ತಿವಾರಿ ನಿಧನರಾಗಿದ್ದಾರೆ. ಕಾರಿನ ಒಳಗಿದ್ದ ರಾಜೇಶ್​ ಮತ್ತು ಸರಿತಾ ಅವರನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರತೆಗೆದಿದ್ದಾರೆ.

ಅಪಘಾತದ ಬಳಿಕ ಧನ್​ಬಾದ್​ ಮೆಡಿಕಲ್​ ಕಾಲೇಜ್ ಆಸ್ಪತ್ರೆಗೆ ರಾಜೇಶ್​ ತಿವಾರಿ ಹಾಗೂ ಸರಿತಾ ತಿವಾರಿ ಅವರನ್ನು ದಾಖಲಿಸಲಾಯಿತು. ಅಷ್ಟು ಹೊತ್ತಿಗಾಗಲೇ ರಾಜೇಶ್​ ತಿವಾರಿ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದರು. ಸರಿತಾ ತಿವಾರಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿ ಸ್ಥಿತಿ ಸದ್ಯಕ್ಕಂತೂ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ. ಈ ಘಟನೆಯಿಂದ ಪಂಕಜ್​ ತ್ರಿಪಾಠಿ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ: ಈಜು ಕಲಿಯಲು ಕೀಟಗಳನ್ನು ತಿಂದಿದ್ದ ನಟ; ಅಚ್ಚರಿ ವಿಚಾರ ತಿಳಿಸಿದ ಪಂಕಜ್​ ತ್ರಿಪಾಠಿ

ಪಂಕಜ್​ ತ್ರಿಪಾಠಿ ಅವರ ಬಾವ ರಾಜೇಶ್​ ತಿವಾರಿ ಅವರು ಭಾರತೀಯ ರೇಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಚಿತ್ತರಂಜನ್​ನಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ತಮ್ಮ ಹಳ್ಳಿಯಿಂದ ಚಿತ್ತರಂಜನ್​ಗೆ ವಾಪಸ್​ ಬರುವ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 2023ರ ಆಗಸ್ಟ್​ ತಿಂಗಳಲ್ಲಿ ಪಂಕಜ್​ ತ್ರಿಪಾಠಿ ಅವರ ತಂದೆ ನಿಧನರಾಗಿದ್ದರು. ಆ ನೋವು ಮರೆಯುವ ಮುನ್ನವೇ ಅವರ ಕುಟುಂಬದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸರಿತಾ ತಿವಾರಿ ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ