ಜೂ. ಎನ್​ಟಿಆರ್​ನ ಫಾಲೋ ಮಾಡಿಕೊಂಡು ಬಂದ ವ್ಯಕ್ತಿ; ಸಿಟ್ಟಿನಿಂದ ಕೂಗಾಡಿದ ನಟ

ಮುಂಬೈನಲ್ಲಿ ವ್ಯಕ್ತಿಯೊಬ್ಬನು ಜೂನಿಯರ್​ ಎನ್​ಟಿಆರ್​ ಅವರನ್ನು ಫಾಲೋ ಮಾಡಿಕೊಂಡು ಬಂದಿದ್ದಾನೆ. ಅವರು ಉಳಿದುಕೊಂಡಿರುವ ಹೋಟೆಲ್​ ಒಳಗೂ ನುಗ್ಗಲು ಪ್ರಯತ್ನಿಸಿದ್ದಾನೆ. ಇದರಿಂದ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಕೋಪ ಬಂದಿದೆ. ಕೂಡಲೇ ಅವರು ಆತನಿಗೆ ಎಚ್ಚರಿಕೆ ನೀಡಿದ್ದಾರೆ. ಸಿಟ್ಟಿನಿಂದ ಅವರು ಕೂಗಾಡಿರುವ ವಿಡಿಯೋ ಈಗ ವೈರಲ್​ ಆಗಿದೆ.

ಜೂ. ಎನ್​ಟಿಆರ್​ನ ಫಾಲೋ ಮಾಡಿಕೊಂಡು ಬಂದ ವ್ಯಕ್ತಿ; ಸಿಟ್ಟಿನಿಂದ ಕೂಗಾಡಿದ ನಟ
ಜೂನಿಯರ್​ ಎನ್​ಟಿಆರ್​
Follow us
|

Updated on: Apr 26, 2024 | 9:41 PM

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರು ಈಗ ಮುಂಬೈನಲ್ಲಿದ್ದಾರೆ. ಇಷ್ಟು ದಿನ ಅವರು ಹೈದರಾಬಾದ್​ನಲ್ಲಿ ಆರಾಮಾಗಿ ಇದ್ದರು. ಆದರೆ ಈಗ ಅವರಿಗೆ ಮುಂಬೈನಲ್ಲಿ ಕೆಲವು ವಿಚಾರಗಳು ಕಿರಿಕಿರಿ ಉಂಟು ಮಾಡುತ್ತಿವೆ. ಜೂನಿಯರ್​ ಎನ್​ಟಿಆರ್​ ಅವರು ಖಾಸಗಿತನ ಬಯಸುತ್ತಾರೆ. ಸಾಧ್ಯವಾದಷ್ಟು ಅವರು ಮಾಧ್ಯಮಗಳ ಕಣ್ಣಿನಿಂದ ದೂರ ಇರಲು ಪ್ರಯತ್ನಿಸುತ್ತಾರೆ. ಇಂಥ ಸ್ವಭಾವದ ಜೂನಿಯರ್​ ಎನ್​ಟಿಆರ್​ಗೆ ಮುಂಬೈನ ಪಾಪರಾಜಿಗಳಿಂದ (Paparazzi) ತೊಂದರೆ ಆಗಿದೆ. ಹಾಗಾಗಿ ಅವರು ಕೋಪ ಮಾಡಿಕೊಂಡು ಕೂಗಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ (Viral Video)​ ಆಗಿದೆ.

ಮುಂಬೈನಲ್ಲಿ ಅನೇಕ ಪಾಪರಾಜಿಗಳು ಕೆಲಸ ಮಾಡುತ್ತಿದ್ದಾರೆ. ಸೆಲೆಬ್ರಿಟಿಗಳು ಹೋದಲ್ಲೆಲ್ಲ ಕ್ಯಾಮೆರಾ ಹಿಡಿದುಕೊಂಡು ಮುಗಿಬೀಳುವುದು ಈ ಪಾಪರಾಜಿಗಳ ಕೆಲಸ. ಕೆಲವು ಸೆಲೆಬ್ರಿಟಿಗಳು ಇದನ್ನು ಎಂಜಾಯ್​ ಮಾಡುತ್ತಾರೆ. ಆದರೆ ಜೂನಿಯರ್​ ಎನ್​ಟಿಆರ್​ ರೀತಿಯ ನಟರಿಗೆ ಇದರಿಂದ ಕಿರಿಕಿರಿ ಆಗುತ್ತದೆ. ‘ವಾರ್​ 2’ ಸಿನಿಮಾದ ಶೂಟಿಂಗ್​ ಸಲುವಾಗಿ ಮುಂಬೈಗೆ ಹೋಗಿರುವ ಜೂನಿಯರ್​ ಎನ್​ಟಿಆರ್​ಗೆ ಪಾಪರಾಜಿಗಳ ವರ್ತನೆಯಿಂದ ಬೇಸರ ಆಗಿದೆ.

ಇದನ್ನೂ ಓದಿ: ‘ವಾರ್​ 2’ ಸಿನಿಮಾ ಸೆಟ್​​ನಿಂದ ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್​​ ಫೋಟೋಸ್ ವೈರಲ್

ಜೂನಿಯರ್​ ಎನ್​ಟಿಆರ್​ ಅವರು ಮೊಬೈಲ್​ ಫೋನ್​ನಲ್ಲಿ ಮಾತನಾಡುತ್ತಾ ಹೋಟೆಲ್​ ಪ್ರವೇಶಿಸುತ್ತಿದ್ದಾರೆ. ಅವರನ್ನು ಫಾಲೋ ಮಾಡಿಕೊಂಡು ಬಂದ ಪಾಪರಾಜಿಯೊಬ್ಬನು ಹೋಟೆಲ್​ ಒಳಗೆ ಬರಲು ಪ್ರಯತ್ನಿಸಿದ್ದಾನೆ. ಅದನ್ನು ಕಂಡು ಜೂನಿಯರ್​ ಎನ್​ಟಿಆರ್ ಕೂಗಾಡಿದ್ದಾರೆ. ‘ಹೇ.. ನಿಲ್ಲಿಸು ಮ್ಯಾನ್​’ ಎಂದು ಅವರು ಕೂಗಾಡಿದ್ದಾರೆ. ಅವರು ಸಿಕ್ಕಾಪಟ್ಟೆ ಕೋಪ ಮಾಡಿಕೊಂಡಿರುವುದು ಈ ವಿಡಿಯೋದಲ್ಲಿ ಕಾಣಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ವೈರಲ್​ ವಿಡಿಯೋ:

‘ವಾರ್​ 2’ ಸಿನಿಮಾ ಮೂಲಕ ಜೂನಿಯರ್​ ಎನ್​ಟಿಆರ್​ ಅವರು ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಹೃತಿಕ್​ ರೋಷನ್​ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಅಯಾನ್​ ಮುಖರ್ಜಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಗೆಲುವಿನ ಬಳಿಕ ಜೂನಿಯರ್​ ಎನ್​ಟಿಆರ್​ ಅವರಿಗೆ ಡಿಮ್ಯಾಂಡ್​ ಹೆಚ್ಚಾಗಿದೆ. ತೆಲುಗಿನ ‘ದೇವರ’ ಸಿನಿಮಾದಲ್ಲಿಯೂ ಅವರು ನಟಿಸಿದ್ದಾರೆ. ಆ ಚಿತ್ರದ ಮೇಲೆ ಕೂಡ ಭಾರಿ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!