Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಎನ್​ಟಿಆರ್​ನ ಫಾಲೋ ಮಾಡಿಕೊಂಡು ಬಂದ ವ್ಯಕ್ತಿ; ಸಿಟ್ಟಿನಿಂದ ಕೂಗಾಡಿದ ನಟ

ಮುಂಬೈನಲ್ಲಿ ವ್ಯಕ್ತಿಯೊಬ್ಬನು ಜೂನಿಯರ್​ ಎನ್​ಟಿಆರ್​ ಅವರನ್ನು ಫಾಲೋ ಮಾಡಿಕೊಂಡು ಬಂದಿದ್ದಾನೆ. ಅವರು ಉಳಿದುಕೊಂಡಿರುವ ಹೋಟೆಲ್​ ಒಳಗೂ ನುಗ್ಗಲು ಪ್ರಯತ್ನಿಸಿದ್ದಾನೆ. ಇದರಿಂದ ಜೂನಿಯರ್​ ಎನ್​ಟಿಆರ್​ ಅವರಿಗೆ ಸಖತ್​ ಕೋಪ ಬಂದಿದೆ. ಕೂಡಲೇ ಅವರು ಆತನಿಗೆ ಎಚ್ಚರಿಕೆ ನೀಡಿದ್ದಾರೆ. ಸಿಟ್ಟಿನಿಂದ ಅವರು ಕೂಗಾಡಿರುವ ವಿಡಿಯೋ ಈಗ ವೈರಲ್​ ಆಗಿದೆ.

ಜೂ. ಎನ್​ಟಿಆರ್​ನ ಫಾಲೋ ಮಾಡಿಕೊಂಡು ಬಂದ ವ್ಯಕ್ತಿ; ಸಿಟ್ಟಿನಿಂದ ಕೂಗಾಡಿದ ನಟ
ಜೂನಿಯರ್​ ಎನ್​ಟಿಆರ್​
Follow us
ಮದನ್​ ಕುಮಾರ್​
|

Updated on: Apr 26, 2024 | 9:41 PM

ನಟ ಜೂನಿಯರ್​ ಎನ್​ಟಿಆರ್​ (Jr NTR) ಅವರು ಈಗ ಮುಂಬೈನಲ್ಲಿದ್ದಾರೆ. ಇಷ್ಟು ದಿನ ಅವರು ಹೈದರಾಬಾದ್​ನಲ್ಲಿ ಆರಾಮಾಗಿ ಇದ್ದರು. ಆದರೆ ಈಗ ಅವರಿಗೆ ಮುಂಬೈನಲ್ಲಿ ಕೆಲವು ವಿಚಾರಗಳು ಕಿರಿಕಿರಿ ಉಂಟು ಮಾಡುತ್ತಿವೆ. ಜೂನಿಯರ್​ ಎನ್​ಟಿಆರ್​ ಅವರು ಖಾಸಗಿತನ ಬಯಸುತ್ತಾರೆ. ಸಾಧ್ಯವಾದಷ್ಟು ಅವರು ಮಾಧ್ಯಮಗಳ ಕಣ್ಣಿನಿಂದ ದೂರ ಇರಲು ಪ್ರಯತ್ನಿಸುತ್ತಾರೆ. ಇಂಥ ಸ್ವಭಾವದ ಜೂನಿಯರ್​ ಎನ್​ಟಿಆರ್​ಗೆ ಮುಂಬೈನ ಪಾಪರಾಜಿಗಳಿಂದ (Paparazzi) ತೊಂದರೆ ಆಗಿದೆ. ಹಾಗಾಗಿ ಅವರು ಕೋಪ ಮಾಡಿಕೊಂಡು ಕೂಗಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ (Viral Video)​ ಆಗಿದೆ.

ಮುಂಬೈನಲ್ಲಿ ಅನೇಕ ಪಾಪರಾಜಿಗಳು ಕೆಲಸ ಮಾಡುತ್ತಿದ್ದಾರೆ. ಸೆಲೆಬ್ರಿಟಿಗಳು ಹೋದಲ್ಲೆಲ್ಲ ಕ್ಯಾಮೆರಾ ಹಿಡಿದುಕೊಂಡು ಮುಗಿಬೀಳುವುದು ಈ ಪಾಪರಾಜಿಗಳ ಕೆಲಸ. ಕೆಲವು ಸೆಲೆಬ್ರಿಟಿಗಳು ಇದನ್ನು ಎಂಜಾಯ್​ ಮಾಡುತ್ತಾರೆ. ಆದರೆ ಜೂನಿಯರ್​ ಎನ್​ಟಿಆರ್​ ರೀತಿಯ ನಟರಿಗೆ ಇದರಿಂದ ಕಿರಿಕಿರಿ ಆಗುತ್ತದೆ. ‘ವಾರ್​ 2’ ಸಿನಿಮಾದ ಶೂಟಿಂಗ್​ ಸಲುವಾಗಿ ಮುಂಬೈಗೆ ಹೋಗಿರುವ ಜೂನಿಯರ್​ ಎನ್​ಟಿಆರ್​ಗೆ ಪಾಪರಾಜಿಗಳ ವರ್ತನೆಯಿಂದ ಬೇಸರ ಆಗಿದೆ.

ಇದನ್ನೂ ಓದಿ: ‘ವಾರ್​ 2’ ಸಿನಿಮಾ ಸೆಟ್​​ನಿಂದ ಹೃತಿಕ್ ರೋಷನ್, ಜೂನಿಯರ್ ಎನ್​ಟಿಆರ್​​ ಫೋಟೋಸ್ ವೈರಲ್

ಜೂನಿಯರ್​ ಎನ್​ಟಿಆರ್​ ಅವರು ಮೊಬೈಲ್​ ಫೋನ್​ನಲ್ಲಿ ಮಾತನಾಡುತ್ತಾ ಹೋಟೆಲ್​ ಪ್ರವೇಶಿಸುತ್ತಿದ್ದಾರೆ. ಅವರನ್ನು ಫಾಲೋ ಮಾಡಿಕೊಂಡು ಬಂದ ಪಾಪರಾಜಿಯೊಬ್ಬನು ಹೋಟೆಲ್​ ಒಳಗೆ ಬರಲು ಪ್ರಯತ್ನಿಸಿದ್ದಾನೆ. ಅದನ್ನು ಕಂಡು ಜೂನಿಯರ್​ ಎನ್​ಟಿಆರ್ ಕೂಗಾಡಿದ್ದಾರೆ. ‘ಹೇ.. ನಿಲ್ಲಿಸು ಮ್ಯಾನ್​’ ಎಂದು ಅವರು ಕೂಗಾಡಿದ್ದಾರೆ. ಅವರು ಸಿಕ್ಕಾಪಟ್ಟೆ ಕೋಪ ಮಾಡಿಕೊಂಡಿರುವುದು ಈ ವಿಡಿಯೋದಲ್ಲಿ ಕಾಣಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ವೈರಲ್​ ವಿಡಿಯೋ:

‘ವಾರ್​ 2’ ಸಿನಿಮಾ ಮೂಲಕ ಜೂನಿಯರ್​ ಎನ್​ಟಿಆರ್​ ಅವರು ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಹೃತಿಕ್​ ರೋಷನ್​ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ. ಅಯಾನ್​ ಮುಖರ್ಜಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಗೆಲುವಿನ ಬಳಿಕ ಜೂನಿಯರ್​ ಎನ್​ಟಿಆರ್​ ಅವರಿಗೆ ಡಿಮ್ಯಾಂಡ್​ ಹೆಚ್ಚಾಗಿದೆ. ತೆಲುಗಿನ ‘ದೇವರ’ ಸಿನಿಮಾದಲ್ಲಿಯೂ ಅವರು ನಟಿಸಿದ್ದಾರೆ. ಆ ಚಿತ್ರದ ಮೇಲೆ ಕೂಡ ಭಾರಿ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ