AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೈಯಾರಾ’ ಅಬ್ಬರಕ್ಕೆ ಹೆದರಿದ ಸ್ಟಾರ್ ಹೀರೋಗಳು; ಮತ್ತೊಂದು ಸಿನಿಮಾ ಮುಂದಕ್ಕೆ

ಪ್ರತಿ ದಿನವೂ ‘ಸೈಯಾರಾ’ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಹಾಗಾಗಿ ಆ ಸಿನಿಮಾದ ಎದುರು ಬಿಡುಗಡೆ ಆಗಲು ಬೇರೆ ಚಿತ್ರಗಳು ಹೆದರುತ್ತಿವೆ. ‘ಸನ್ ಆಫ್ ಸರ್ದಾರ್ 2’ ಬಳಿಕ ‘ಪರಮ್ ಸುಂದರಿ’ ಸಿನಿಮಾ ಕೂಡ ಹಿಂದೇಟು ಹಾಕಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ..

‘ಸೈಯಾರಾ’ ಅಬ್ಬರಕ್ಕೆ ಹೆದರಿದ ಸ್ಟಾರ್ ಹೀರೋಗಳು; ಮತ್ತೊಂದು ಸಿನಿಮಾ ಮುಂದಕ್ಕೆ
Param Sundari, Saiyaara, Son Of Sardar 2
ಮದನ್​ ಕುಮಾರ್​
|

Updated on: Jul 23, 2025 | 10:02 PM

Share

ಬಾಕ್ಸ್ ಆಫೀಸ್​ನಲ್ಲಿ ‘ಸೈಯಾರಾ’ (Saiyaara) ಸಿನಿಮಾ ಬಂಗಾರದ ಬೆಳೆ ತೆಗೆಯುತ್ತಿದೆ. ಹೊಸ ಕಲಾವಿದರು ನಟಿಸಿದ ಈ ಸಿನಿಮಾ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಮೋಹಿತ್ ಸೂರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅಹಾನ್ ಪಾಂಡೆ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದ ಎದುರು ಪೈಪೋಟಿ ನೀಡಲಾಗದೇ ಸ್ಟಾರ್ ಹೀರೋಗಳ ಸಿನಿಮಾಗಳು ಕೂಡ ಹಿಂದೇಟು ಹಾಕುತ್ತಿವೆ. ಈ ಮೊದಲು ‘ಸನ್ ಆಫ್ ಸರ್ದಾರ್ 2’ (Son Of Sardar 2) ಸಿನಿಮಾದ ರಿಲೀಸ್ ದಿನಾಂಕ ಮುಂದೂಡಲಾಗಿತ್ತು. ಈಗ ‘ಪರಮ್ ಸುಂದರಿ’ (Param Sundari) ಸಿನಿಮಾದ ಬಿಡುಗಡೆ ಕೂಡ ಮುಂದಕ್ಕೆ ಹೋಗಿದೆ!

‘ಪರಮ್ ಸುಂದರಿ’ ಸಿನಿಮಾದಲ್ಲಿ ಸ್ಟಾರ್ ನಟ ಸಿದ್ದಾರ್ಥ್ ಮಲ್ಹೋತ್ರಾ ಅವರು ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಅಭಿನಯಿಸಿದ್ದಾರೆ. ಈ ಚಿತ್ರವನ್ನು ಜುಲೈ 25ಕ್ಕೆ ಬಿಡುಗಡೆ ಮಾಡಬೇಕು ಎಂದು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಈಗ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡುವ ತೀರ್ಮಾನಕ್ಕೆ ಬರಲಾಗಿದೆ.

ಅಷ್ಟರಮಟ್ಟಿಗೆ ‘ಸೈಯ್ಯಾರಾ’ ಸಿನಿಮಾ ಅಬ್ಬರಿಸುತ್ತಿದೆ. ಈ ಸಿನಿಮಾ ಜುಲೈ 18ರಂದು ಬಿಡುಗಡೆ ಆಯಿತು. ರಿಲೀಸ್ ಆದ ದಿನದಿಂದಲೂ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ಐದು ದಿನಕ್ಕೆ ಈ ಸಿನಿಮಾದ ಒಟ್ಟು ಕಲೆಕ್ಷನ್ 133.75 ಕೋಟಿ ರೂಪಾಯಿ ಆಗಿದೆ. ಹೊಸ ನಟನ ಸಿನಿಮಾ ಈ ಪರಿ ಕಲೆಕ್ಷನ್ ಮಾಡುತ್ತಿರುವುದು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

ಮೊದಲ ವಾರ ‘ಸೈಯಾರಾ’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಎರಡನೇ ವೀಕೆಂಡ್​ನಲ್ಲಿ ಕೂಡ ಈ ಸಿನಿಮಾದ ಕಲೆಕ್ಷನ್ ಹೆಚ್ಚಲಿದೆ. ಇಂಥ ಸಿನಿಮಾದ ಎದುರು ಪೈಪೋಟಿಗೆ ಬೀಳುವ ಹೊಸ ಚಿತ್ರಕ್ಕೆ ಖಂಡಿತಾ ನಷ್ಟ ಆಗಲಿದೆ. ಆದ್ದರಿಂದ ‘ಪರಮ್ ಸುಂದರಿ’, ‘ಸನ್ ಆಫ್ ಸರ್ದಾರ್ 2’ ಸಿನಿಮಾಗಳು ಜುಲೈ 25ರ ಬದಲಿಗೆ ಹೊಸ ಬಿಡುಗಡೆ ದಿನಾಂಕವನ್ನು ಆಯ್ಕೆ ಮಾಡಿಕೊಳ್ಳುತ್ತಿವೆ.

ಇದನ್ನೂ ಓದಿ: ಬ್ಲಾಕ್ ಬಸ್ಟರ್ ‘ಸೈಯಾರಾ’ ಸಿನಿಮಾಕ್ಕೆ ಟಾಂಗ್ ಕೊಟ್ಟ ಶ್ರದ್ಧಾ ಕಪೂರ್

‘ಸನ್ ಆಫ್ ಸರ್ದಾರ್ 2’ ಸಿನಿಮಾದಲ್ಲಿ ಅಜಯ್ ದೇವಗನ್ ಅವರು ನಟಿಸಿದ್ದಾರೆ. ಹಾಗಿದ್ದರೂ ಕೂಡ ಅವರು ಹೊಸ ನಟನ ಸಿನಿಮಾದ ಎದುರು ಪೈಪೋಟಿಗೆ ಇಳಿಯಲು ಹಿಂದೇಟು ಹಾಕಿದ್ದಾರೆ. ಆಗಸ್ಟ್ 1ರಂದು ‘ಸನ್ ಆಫ್ ಸರ್ದಾರ್ 2’ ಬಿಡುಗಡೆ ಆಗಲಿದೆ. ‘ಪರಮ್ ಸುಂದರಿ’ ಸಿನಿಮಾ ಆಗಸ್ಟ್ 29 ಅಥವಾ ಸೆಪ್ಟೆಂಬರ್ 5ರಂದು ತೆರೆ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು