AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇರಾ ಫೇರಿ 3’ ಫ್ಯಾನ್ಸ್​ಗೆ ಬಾಬುರಾವ್ ಶಾಕ್; ಚಿತ್ರದಿಂದ ಹೊರ ನಡೆದ ಪರೇಶ್ ರಾವಲ್

ಬಾಲಿವುಡ್‌ನ ಯಶಸ್ವಿ ಹೇರಾ ಫೇರಿ ಫ್ರಾಂಚೈಸ್‌ನ ಮೂರನೇ ಭಾಗದಿಂದ ಪರೇಶ್ ರಾವಲ್ ಹೊರನಡೆದಿದ್ದಾರೆ. ಭಿನ್ನಾಭಿಪ್ರಾಯಗಳಿಂದಾಗಿ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ. ಅಕ್ಷಯ್ ಕುಮಾರ್ ಚಿತ್ರದಲ್ಲಿದ್ದಾರೆ. ಪರೇಶ್ ರಾವಲ್ ಅವರ ಬಾಬುರಾವ್ ಪಾತ್ರದ ಅನುಪಸ್ಥಿತಿಯಿಂದ ಚಿತ್ರದ ಭವಿಷ್ಯ ಅನಿಶ್ಚಿತವಾಗಿದೆ. ಈ ಸುದ್ದಿ ಅಭಿಮಾನಿಗಳಲ್ಲಿ ನಿರಾಶೆಯನ್ನುಂಟುಮಾಡಿದೆ.

‘ಹೇರಾ ಫೇರಿ 3’ ಫ್ಯಾನ್ಸ್​ಗೆ ಬಾಬುರಾವ್ ಶಾಕ್; ಚಿತ್ರದಿಂದ ಹೊರ ನಡೆದ ಪರೇಶ್ ರಾವಲ್
ಪರೇಶ್ ರಾವಲ್
ರಾಜೇಶ್ ದುಗ್ಗುಮನೆ
|

Updated on: May 17, 2025 | 11:16 AM

Share

ಬಾಲಿವುಡ್​ನ ಯಶಸ್ವಿ ಫ್ರಾಂಚೈಸ್​ಗಳಲ್ಲಿ ‘ಹೇರಾ ಫೇರಿ’ (Hera Pheri) ಕೂಡ ಒಂದು. ಅಕ್ಷಯ್ ಕುಮರ್, ಸುನೀಲ್ ಶೆಟ್ಟಿ, ಪರೇಶ್ ರಾವಲ್ ಈ ಚಿತ್ರದಲ್ಲಿ ನಟಿಸಿದ್ದರು. ಈಗ ‘ಹೇರಾ ಫೇರಿ 3’ ಸಿನಿಮಾ ಬರುತ್ತಿದೆ. ಅಕ್ಷಯ್ ಕುಮಾರ್ ಆರಂಭದಲ್ಲಿ ಸಿನಿಮಾ ಮಾಡಲು ಒಪ್ಪಿರಲಿಲ್ಲ. ಆದರೆ, ಅವರ ಮನ ಒಲಿಸಿ ನಿರ್ಮಾಪಕರು ಚಿತ್ರಕ್ಕೆ ಅವರನ್ನು ಕರೆದುಕೊಂಡು ಬಂದಿದ್ದರು. ಈ ಬನ್ನೆಲ್ಲೇ ಬಾಬುರಾವ್ ಪಾತ್ರ ಮಾಡಿದ್ದ ಪರೇಶ್ ರಾವಲ್ ಚಿತ್ರದಿಂದ ಹೊರ ನಡೆದಿದ್ದಾರೆ. ಇದು ಅನೇಕರಿಗೆ ಶಾಕ್ ಎನಿಸಿದೆ.

ಬಾಬುರಾವ್ ಪಾತ್ರ ತುಂಬಾನೇ ಐಕಾನಿಕ್ ಎನಿಸಿಕೊಂಡಿದೆ. ಈ ಪಾತ್ರಕ್ಕೆ ಪರೇಶ್ ಬಿಟ್ಟು ಬೇರೆ ಯಾರು ಕೂಡ ಸರಿ ಹೊಂದುವುದಿಲ್ಲ. ‘ಹೇರಾ ಫೇರಿ’ ಹಾಗೂ ‘ಫಿರ್ ಹೇರಾ ಫೇರಿ’ ಚಿತ್ರಗಳಲ್ಲಿ ಇದು ಸಾಬೀತಾಗಿದೆ. ಮೂರನೇ ಪಾರ್ಟ್​ನಿಂದ ಪರೇಶ್ ಹೊರ ನಡೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಇದು ನಿಜವಾಗಿದೆ. ಅವರು ಸಿನಿಮಾದಿಂದ ಹೊರ ನಡೆದ ವಿಚಾರವನ್ನು ಖಚಿತಪಡಿಸಿದ್ದಾರೆ.

ಬಾಲಿವುಡ್ ಹಂಗಾಮಾಗೆ ನೀಡಿದ ಸಂದರ್ಶನದಲ್ಲಿ ಪರೇಶ್ ರಾವಲ್ ಅವರಿಗೆ ಈ ಬಗ್ಗೆ ಕೇಳಲಾಗಿದೆ. ಇದಕ್ಕೆ ಅವರು ‘ಅದೇ ಸತ್ಯ’ ಎಂದು ಹೇಳಿದ್ದಾರೆ. ಹಾಗಾದರೆ ಅವರು ಹೊರ ಹೋಗಿದ್ದು ಏಕೆ? ಇದಕ್ಕೆ ಮೂಲಗಳಿಂದ ಉತ್ತರ ಸಿಕ್ಕಿದೆ. ಸಿನಿಮಾ ನಿರ್ದೇಶಕರು ಹಾಗೂ ಪರೇಶ್ ಮಧ್ಯೆ ಕಥೆಯ ವಿಚಾರದಲ್ಲಿ ಕೆಲವು ಭಿನ್ನಾಭಿಪ್ರಾಯಗಳು ಬಂದಿವೆ. ಇದರ ಬಲದಾವಣೆಗೆ ತಂಡ ಒಪ್ಪದ ಕಾರಣ ಪರೇಶ್ ಅವರು ಸಿನಿಮಾದಿಂದಲೇ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ
Image
ಅಮಿತಾಭ್​ಗೆ 200 ಜನರಿಂದ ರಕ್ತದಾನ; ಅವರ ಜೀವನವನ್ನೇ ನಾಶ ಮಾಡಿತು ಆ ಘಟನೆ
Image
ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ಮಾಡ ಹೊರಟ ರಾಜಮೌಳಿಗೆ ಹಿನ್ನಡೆ
Image
ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ
Image
ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

ಆರಂಭದಲ್ಲಿ ಅಕ್ಷಯ್ ಕುಮಾರ್ ಅವರನ್ನು ಸಿನಿಮಾದಿಂದ ಹೊರಗಿಟ್ಟು ಕಾರ್ತಿಕ್ ಆರ್ಯನ್ ಅವರನ್ನು ಸಿನಿಮಾಗೆ ಸೇರ್ಪಡೆ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಆದರೆ, ಈ ಆಲೋಚನೆ ಕೈ ಬಿಟ್ಟ ನಿರ್ಮಾಪಕರು ಅಕ್ಷಯ್​ ಕುಮಾರ್​ನ ಮನ ಒಲಿಸಿದ್ದರು. ಈಗ ಬಾಬುರಾವ್ ಪಾತ್ರದಲ್ಲಿ ಬೇರೆಯವರನ್ನು ಕಲ್ಪನೆ ಮಾಡಿಕೊಳ್ಳುವುದು ಅಭಿಮಾನಿಗಳಿಗೆ ಕಷ್ಟ ಎನಿಸುತ್ತಿದೆ.

ಇದನ್ನೂ ಓದಿ: ‘ಹೇರಾ ಫೇರಿ 3’ ಚಿತ್ರದಲ್ಲಿ ನಟಿಸಬೇಕಿತ್ತು ಕಾರ್ತಿಕ್ ಆರ್ಯನ್; ಆಮೇಲೇನಾಯ್ತು?

‘ಅಂದಾಜ್ ಅಪ್ನಾ ಅಪ್ನಾ’ ರೀ ರಿಲೀಸ್ ಸಂದರ್ಭದಲ್ಲಿ ಅಭಿಮಾನಿಯಿಬ್ಬರು ಈ ಬಗ್ಗೆ ಪ್ರಶ್ನೆ ಮಾಡಿದ್ದರು. ‘ಹೇರಾ ಫೇರಿ 3’ ಸಿನಿಮಾ ಬಗ್ಗೆ ಅಪ್​ಡೇಟ್ ಕೇಳಿದ್ದರು. ‘ಸೂನ್ ಸೂನ್! ಬಿಫೋರ್​ ದಿ ನೆಕ್ಸ್ಟ್​ ಮಾನ್ಸೂನ್’ ಎಂದಿದ್ದರು. ಅಂದರೆ, ಮಾನ್ಸೂನ್ ಒಳಗೆ ಮಾಹಿತಿ ಸಿಗುತ್ತದೆ ಎಂದಿದ್ದರು. ಈಗ ಅದೇ ರೀತಿ ಆಗಿದೆ. ಈಗ ಪರೇಶ್ ಅವರೇ ಸಿನಿಮಾದಿಂದ ಹೊರ ನಡೆದಿರುವುದರಿಂದ ಚಿತ್ರ ಸೆಟ್ಟೇರುವುದೇ ಅನುಮಾನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು