AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇರಾ ಫೇರಿ 3’ ಫ್ಯಾನ್ಸ್​ಗೆ ಬಾಬುರಾವ್ ಶಾಕ್; ಚಿತ್ರದಿಂದ ಹೊರ ನಡೆದ ಪರೇಶ್ ರಾವಲ್

ಬಾಲಿವುಡ್‌ನ ಯಶಸ್ವಿ ಹೇರಾ ಫೇರಿ ಫ್ರಾಂಚೈಸ್‌ನ ಮೂರನೇ ಭಾಗದಿಂದ ಪರೇಶ್ ರಾವಲ್ ಹೊರನಡೆದಿದ್ದಾರೆ. ಭಿನ್ನಾಭಿಪ್ರಾಯಗಳಿಂದಾಗಿ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ. ಅಕ್ಷಯ್ ಕುಮಾರ್ ಚಿತ್ರದಲ್ಲಿದ್ದಾರೆ. ಪರೇಶ್ ರಾವಲ್ ಅವರ ಬಾಬುರಾವ್ ಪಾತ್ರದ ಅನುಪಸ್ಥಿತಿಯಿಂದ ಚಿತ್ರದ ಭವಿಷ್ಯ ಅನಿಶ್ಚಿತವಾಗಿದೆ. ಈ ಸುದ್ದಿ ಅಭಿಮಾನಿಗಳಲ್ಲಿ ನಿರಾಶೆಯನ್ನುಂಟುಮಾಡಿದೆ.

‘ಹೇರಾ ಫೇರಿ 3’ ಫ್ಯಾನ್ಸ್​ಗೆ ಬಾಬುರಾವ್ ಶಾಕ್; ಚಿತ್ರದಿಂದ ಹೊರ ನಡೆದ ಪರೇಶ್ ರಾವಲ್
ಪರೇಶ್ ರಾವಲ್
ರಾಜೇಶ್ ದುಗ್ಗುಮನೆ
|

Updated on: May 17, 2025 | 11:16 AM

Share

ಬಾಲಿವುಡ್​ನ ಯಶಸ್ವಿ ಫ್ರಾಂಚೈಸ್​ಗಳಲ್ಲಿ ‘ಹೇರಾ ಫೇರಿ’ (Hera Pheri) ಕೂಡ ಒಂದು. ಅಕ್ಷಯ್ ಕುಮರ್, ಸುನೀಲ್ ಶೆಟ್ಟಿ, ಪರೇಶ್ ರಾವಲ್ ಈ ಚಿತ್ರದಲ್ಲಿ ನಟಿಸಿದ್ದರು. ಈಗ ‘ಹೇರಾ ಫೇರಿ 3’ ಸಿನಿಮಾ ಬರುತ್ತಿದೆ. ಅಕ್ಷಯ್ ಕುಮಾರ್ ಆರಂಭದಲ್ಲಿ ಸಿನಿಮಾ ಮಾಡಲು ಒಪ್ಪಿರಲಿಲ್ಲ. ಆದರೆ, ಅವರ ಮನ ಒಲಿಸಿ ನಿರ್ಮಾಪಕರು ಚಿತ್ರಕ್ಕೆ ಅವರನ್ನು ಕರೆದುಕೊಂಡು ಬಂದಿದ್ದರು. ಈ ಬನ್ನೆಲ್ಲೇ ಬಾಬುರಾವ್ ಪಾತ್ರ ಮಾಡಿದ್ದ ಪರೇಶ್ ರಾವಲ್ ಚಿತ್ರದಿಂದ ಹೊರ ನಡೆದಿದ್ದಾರೆ. ಇದು ಅನೇಕರಿಗೆ ಶಾಕ್ ಎನಿಸಿದೆ.

ಬಾಬುರಾವ್ ಪಾತ್ರ ತುಂಬಾನೇ ಐಕಾನಿಕ್ ಎನಿಸಿಕೊಂಡಿದೆ. ಈ ಪಾತ್ರಕ್ಕೆ ಪರೇಶ್ ಬಿಟ್ಟು ಬೇರೆ ಯಾರು ಕೂಡ ಸರಿ ಹೊಂದುವುದಿಲ್ಲ. ‘ಹೇರಾ ಫೇರಿ’ ಹಾಗೂ ‘ಫಿರ್ ಹೇರಾ ಫೇರಿ’ ಚಿತ್ರಗಳಲ್ಲಿ ಇದು ಸಾಬೀತಾಗಿದೆ. ಮೂರನೇ ಪಾರ್ಟ್​ನಿಂದ ಪರೇಶ್ ಹೊರ ನಡೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಇದು ನಿಜವಾಗಿದೆ. ಅವರು ಸಿನಿಮಾದಿಂದ ಹೊರ ನಡೆದ ವಿಚಾರವನ್ನು ಖಚಿತಪಡಿಸಿದ್ದಾರೆ.

ಬಾಲಿವುಡ್ ಹಂಗಾಮಾಗೆ ನೀಡಿದ ಸಂದರ್ಶನದಲ್ಲಿ ಪರೇಶ್ ರಾವಲ್ ಅವರಿಗೆ ಈ ಬಗ್ಗೆ ಕೇಳಲಾಗಿದೆ. ಇದಕ್ಕೆ ಅವರು ‘ಅದೇ ಸತ್ಯ’ ಎಂದು ಹೇಳಿದ್ದಾರೆ. ಹಾಗಾದರೆ ಅವರು ಹೊರ ಹೋಗಿದ್ದು ಏಕೆ? ಇದಕ್ಕೆ ಮೂಲಗಳಿಂದ ಉತ್ತರ ಸಿಕ್ಕಿದೆ. ಸಿನಿಮಾ ನಿರ್ದೇಶಕರು ಹಾಗೂ ಪರೇಶ್ ಮಧ್ಯೆ ಕಥೆಯ ವಿಚಾರದಲ್ಲಿ ಕೆಲವು ಭಿನ್ನಾಭಿಪ್ರಾಯಗಳು ಬಂದಿವೆ. ಇದರ ಬಲದಾವಣೆಗೆ ತಂಡ ಒಪ್ಪದ ಕಾರಣ ಪರೇಶ್ ಅವರು ಸಿನಿಮಾದಿಂದಲೇ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ
Image
ಅಮಿತಾಭ್​ಗೆ 200 ಜನರಿಂದ ರಕ್ತದಾನ; ಅವರ ಜೀವನವನ್ನೇ ನಾಶ ಮಾಡಿತು ಆ ಘಟನೆ
Image
ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ಮಾಡ ಹೊರಟ ರಾಜಮೌಳಿಗೆ ಹಿನ್ನಡೆ
Image
ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ
Image
ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

ಆರಂಭದಲ್ಲಿ ಅಕ್ಷಯ್ ಕುಮಾರ್ ಅವರನ್ನು ಸಿನಿಮಾದಿಂದ ಹೊರಗಿಟ್ಟು ಕಾರ್ತಿಕ್ ಆರ್ಯನ್ ಅವರನ್ನು ಸಿನಿಮಾಗೆ ಸೇರ್ಪಡೆ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಆದರೆ, ಈ ಆಲೋಚನೆ ಕೈ ಬಿಟ್ಟ ನಿರ್ಮಾಪಕರು ಅಕ್ಷಯ್​ ಕುಮಾರ್​ನ ಮನ ಒಲಿಸಿದ್ದರು. ಈಗ ಬಾಬುರಾವ್ ಪಾತ್ರದಲ್ಲಿ ಬೇರೆಯವರನ್ನು ಕಲ್ಪನೆ ಮಾಡಿಕೊಳ್ಳುವುದು ಅಭಿಮಾನಿಗಳಿಗೆ ಕಷ್ಟ ಎನಿಸುತ್ತಿದೆ.

ಇದನ್ನೂ ಓದಿ: ‘ಹೇರಾ ಫೇರಿ 3’ ಚಿತ್ರದಲ್ಲಿ ನಟಿಸಬೇಕಿತ್ತು ಕಾರ್ತಿಕ್ ಆರ್ಯನ್; ಆಮೇಲೇನಾಯ್ತು?

‘ಅಂದಾಜ್ ಅಪ್ನಾ ಅಪ್ನಾ’ ರೀ ರಿಲೀಸ್ ಸಂದರ್ಭದಲ್ಲಿ ಅಭಿಮಾನಿಯಿಬ್ಬರು ಈ ಬಗ್ಗೆ ಪ್ರಶ್ನೆ ಮಾಡಿದ್ದರು. ‘ಹೇರಾ ಫೇರಿ 3’ ಸಿನಿಮಾ ಬಗ್ಗೆ ಅಪ್​ಡೇಟ್ ಕೇಳಿದ್ದರು. ‘ಸೂನ್ ಸೂನ್! ಬಿಫೋರ್​ ದಿ ನೆಕ್ಸ್ಟ್​ ಮಾನ್ಸೂನ್’ ಎಂದಿದ್ದರು. ಅಂದರೆ, ಮಾನ್ಸೂನ್ ಒಳಗೆ ಮಾಹಿತಿ ಸಿಗುತ್ತದೆ ಎಂದಿದ್ದರು. ಈಗ ಅದೇ ರೀತಿ ಆಗಿದೆ. ಈಗ ಪರೇಶ್ ಅವರೇ ಸಿನಿಮಾದಿಂದ ಹೊರ ನಡೆದಿರುವುದರಿಂದ ಚಿತ್ರ ಸೆಟ್ಟೇರುವುದೇ ಅನುಮಾನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?