AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇರಾ ಫೇರಿ 3’ ಫ್ಯಾನ್ಸ್​ಗೆ ಬಾಬುರಾವ್ ಶಾಕ್; ಚಿತ್ರದಿಂದ ಹೊರ ನಡೆದ ಪರೇಶ್ ರಾವಲ್

ಬಾಲಿವುಡ್‌ನ ಯಶಸ್ವಿ ಹೇರಾ ಫೇರಿ ಫ್ರಾಂಚೈಸ್‌ನ ಮೂರನೇ ಭಾಗದಿಂದ ಪರೇಶ್ ರಾವಲ್ ಹೊರನಡೆದಿದ್ದಾರೆ. ಭಿನ್ನಾಭಿಪ್ರಾಯಗಳಿಂದಾಗಿ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ. ಅಕ್ಷಯ್ ಕುಮಾರ್ ಚಿತ್ರದಲ್ಲಿದ್ದಾರೆ. ಪರೇಶ್ ರಾವಲ್ ಅವರ ಬಾಬುರಾವ್ ಪಾತ್ರದ ಅನುಪಸ್ಥಿತಿಯಿಂದ ಚಿತ್ರದ ಭವಿಷ್ಯ ಅನಿಶ್ಚಿತವಾಗಿದೆ. ಈ ಸುದ್ದಿ ಅಭಿಮಾನಿಗಳಲ್ಲಿ ನಿರಾಶೆಯನ್ನುಂಟುಮಾಡಿದೆ.

‘ಹೇರಾ ಫೇರಿ 3’ ಫ್ಯಾನ್ಸ್​ಗೆ ಬಾಬುರಾವ್ ಶಾಕ್; ಚಿತ್ರದಿಂದ ಹೊರ ನಡೆದ ಪರೇಶ್ ರಾವಲ್
ಪರೇಶ್ ರಾವಲ್
ರಾಜೇಶ್ ದುಗ್ಗುಮನೆ
|

Updated on: May 17, 2025 | 11:16 AM

Share

ಬಾಲಿವುಡ್​ನ ಯಶಸ್ವಿ ಫ್ರಾಂಚೈಸ್​ಗಳಲ್ಲಿ ‘ಹೇರಾ ಫೇರಿ’ (Hera Pheri) ಕೂಡ ಒಂದು. ಅಕ್ಷಯ್ ಕುಮರ್, ಸುನೀಲ್ ಶೆಟ್ಟಿ, ಪರೇಶ್ ರಾವಲ್ ಈ ಚಿತ್ರದಲ್ಲಿ ನಟಿಸಿದ್ದರು. ಈಗ ‘ಹೇರಾ ಫೇರಿ 3’ ಸಿನಿಮಾ ಬರುತ್ತಿದೆ. ಅಕ್ಷಯ್ ಕುಮಾರ್ ಆರಂಭದಲ್ಲಿ ಸಿನಿಮಾ ಮಾಡಲು ಒಪ್ಪಿರಲಿಲ್ಲ. ಆದರೆ, ಅವರ ಮನ ಒಲಿಸಿ ನಿರ್ಮಾಪಕರು ಚಿತ್ರಕ್ಕೆ ಅವರನ್ನು ಕರೆದುಕೊಂಡು ಬಂದಿದ್ದರು. ಈ ಬನ್ನೆಲ್ಲೇ ಬಾಬುರಾವ್ ಪಾತ್ರ ಮಾಡಿದ್ದ ಪರೇಶ್ ರಾವಲ್ ಚಿತ್ರದಿಂದ ಹೊರ ನಡೆದಿದ್ದಾರೆ. ಇದು ಅನೇಕರಿಗೆ ಶಾಕ್ ಎನಿಸಿದೆ.

ಬಾಬುರಾವ್ ಪಾತ್ರ ತುಂಬಾನೇ ಐಕಾನಿಕ್ ಎನಿಸಿಕೊಂಡಿದೆ. ಈ ಪಾತ್ರಕ್ಕೆ ಪರೇಶ್ ಬಿಟ್ಟು ಬೇರೆ ಯಾರು ಕೂಡ ಸರಿ ಹೊಂದುವುದಿಲ್ಲ. ‘ಹೇರಾ ಫೇರಿ’ ಹಾಗೂ ‘ಫಿರ್ ಹೇರಾ ಫೇರಿ’ ಚಿತ್ರಗಳಲ್ಲಿ ಇದು ಸಾಬೀತಾಗಿದೆ. ಮೂರನೇ ಪಾರ್ಟ್​ನಿಂದ ಪರೇಶ್ ಹೊರ ನಡೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಇದು ನಿಜವಾಗಿದೆ. ಅವರು ಸಿನಿಮಾದಿಂದ ಹೊರ ನಡೆದ ವಿಚಾರವನ್ನು ಖಚಿತಪಡಿಸಿದ್ದಾರೆ.

ಬಾಲಿವುಡ್ ಹಂಗಾಮಾಗೆ ನೀಡಿದ ಸಂದರ್ಶನದಲ್ಲಿ ಪರೇಶ್ ರಾವಲ್ ಅವರಿಗೆ ಈ ಬಗ್ಗೆ ಕೇಳಲಾಗಿದೆ. ಇದಕ್ಕೆ ಅವರು ‘ಅದೇ ಸತ್ಯ’ ಎಂದು ಹೇಳಿದ್ದಾರೆ. ಹಾಗಾದರೆ ಅವರು ಹೊರ ಹೋಗಿದ್ದು ಏಕೆ? ಇದಕ್ಕೆ ಮೂಲಗಳಿಂದ ಉತ್ತರ ಸಿಕ್ಕಿದೆ. ಸಿನಿಮಾ ನಿರ್ದೇಶಕರು ಹಾಗೂ ಪರೇಶ್ ಮಧ್ಯೆ ಕಥೆಯ ವಿಚಾರದಲ್ಲಿ ಕೆಲವು ಭಿನ್ನಾಭಿಪ್ರಾಯಗಳು ಬಂದಿವೆ. ಇದರ ಬಲದಾವಣೆಗೆ ತಂಡ ಒಪ್ಪದ ಕಾರಣ ಪರೇಶ್ ಅವರು ಸಿನಿಮಾದಿಂದಲೇ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ
Image
ಅಮಿತಾಭ್​ಗೆ 200 ಜನರಿಂದ ರಕ್ತದಾನ; ಅವರ ಜೀವನವನ್ನೇ ನಾಶ ಮಾಡಿತು ಆ ಘಟನೆ
Image
ದಾದಾಸಾಹೇಬ್ ಫಾಲ್ಕೆ ಬಯೋಪಿಕ್ ಮಾಡ ಹೊರಟ ರಾಜಮೌಳಿಗೆ ಹಿನ್ನಡೆ
Image
ಸುಳ್ಳು ಹೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ
Image
ಸಿನಿಮಾ ರಂಗದ ಹರಿಕಾರ ದಾದಾಸಾಹೇಬ್ ಫಾಲ್ಕೆ ಬಯೋಪಿಕ್​ನಲ್ಲಿ ಜೂ.ಎನ್​ಟಿಆರ್?

ಆರಂಭದಲ್ಲಿ ಅಕ್ಷಯ್ ಕುಮಾರ್ ಅವರನ್ನು ಸಿನಿಮಾದಿಂದ ಹೊರಗಿಟ್ಟು ಕಾರ್ತಿಕ್ ಆರ್ಯನ್ ಅವರನ್ನು ಸಿನಿಮಾಗೆ ಸೇರ್ಪಡೆ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಆದರೆ, ಈ ಆಲೋಚನೆ ಕೈ ಬಿಟ್ಟ ನಿರ್ಮಾಪಕರು ಅಕ್ಷಯ್​ ಕುಮಾರ್​ನ ಮನ ಒಲಿಸಿದ್ದರು. ಈಗ ಬಾಬುರಾವ್ ಪಾತ್ರದಲ್ಲಿ ಬೇರೆಯವರನ್ನು ಕಲ್ಪನೆ ಮಾಡಿಕೊಳ್ಳುವುದು ಅಭಿಮಾನಿಗಳಿಗೆ ಕಷ್ಟ ಎನಿಸುತ್ತಿದೆ.

ಇದನ್ನೂ ಓದಿ: ‘ಹೇರಾ ಫೇರಿ 3’ ಚಿತ್ರದಲ್ಲಿ ನಟಿಸಬೇಕಿತ್ತು ಕಾರ್ತಿಕ್ ಆರ್ಯನ್; ಆಮೇಲೇನಾಯ್ತು?

‘ಅಂದಾಜ್ ಅಪ್ನಾ ಅಪ್ನಾ’ ರೀ ರಿಲೀಸ್ ಸಂದರ್ಭದಲ್ಲಿ ಅಭಿಮಾನಿಯಿಬ್ಬರು ಈ ಬಗ್ಗೆ ಪ್ರಶ್ನೆ ಮಾಡಿದ್ದರು. ‘ಹೇರಾ ಫೇರಿ 3’ ಸಿನಿಮಾ ಬಗ್ಗೆ ಅಪ್​ಡೇಟ್ ಕೇಳಿದ್ದರು. ‘ಸೂನ್ ಸೂನ್! ಬಿಫೋರ್​ ದಿ ನೆಕ್ಸ್ಟ್​ ಮಾನ್ಸೂನ್’ ಎಂದಿದ್ದರು. ಅಂದರೆ, ಮಾನ್ಸೂನ್ ಒಳಗೆ ಮಾಹಿತಿ ಸಿಗುತ್ತದೆ ಎಂದಿದ್ದರು. ಈಗ ಅದೇ ರೀತಿ ಆಗಿದೆ. ಈಗ ಪರೇಶ್ ಅವರೇ ಸಿನಿಮಾದಿಂದ ಹೊರ ನಡೆದಿರುವುದರಿಂದ ಚಿತ್ರ ಸೆಟ್ಟೇರುವುದೇ ಅನುಮಾನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ