AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ಮದುವೆಗೆ ಕ್ಷಣಗಣನೆ; ಮೊಬೈಲ್ ಬಳಕೆ ಬ್ಯಾನ್

ಮೂಲಗಳ ಪ್ರಕಾರ 100ಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ಮದುವೆ ನಡೆಯುವ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಮದುವೆ ನಡೆಯುವ ಸ್ಥಳ ಇರುವುದು ಸರೋವರದ ಮಧ್ಯೆ. ಹೀಗಾಗಿ, ಸರೋವರದಲ್ಲಿ ಬೋಟ್​ ಮೂಲಕ ಭದ್ರತೆ ನೀಡಲು ನಿರ್ಧರಿಸಲಾಗಿದೆ.

ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ಮದುವೆಗೆ ಕ್ಷಣಗಣನೆ; ಮೊಬೈಲ್ ಬಳಕೆ ಬ್ಯಾನ್
ರಾಘವ್-ಪರಿಣೀತಿ
ರಾಜೇಶ್ ದುಗ್ಗುಮನೆ
|

Updated on: Sep 23, 2023 | 11:53 AM

Share

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ (Parineeti Chopra) ಹಾಗೂ ರಾಘವ್ ಚಡ್ಡಾ ಭಾನುವಾರ (ಸೆಪ್ಟೆಂಬರ್ 24) ಉದಯಪುರದಲ್ಲಿ ಮದುವೆ ಆಗಲಿದ್ದಾರೆ. ಶುಕ್ರವಾರ (ಸೆಪ್ಟೆಂಬರ್ 22) ಈ ಜೋಡಿ ಉದಯಪುರ ತಲುಪಿದೆ. ಮದುವೆ ನಡೆಯುವ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ಭರ್ಜರಿ ಸೆಕ್ಯುರಿಟಿ ನಿಯೋಜನೆ ಮಾಡಲಾಗಿದೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನಡೆಯಲಿದೆ. ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ಮದುವೆಗೆ ಹಾಜರಿ ಹಾಕುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ 100ಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ಮದುವೆ ನಡೆಯುವ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಮದುವೆ ನಡೆಯುವ ಸ್ಥಳ ಇರುವುದು ಸರೋವರದ ಮಧ್ಯೆ. ಹೀಗಾಗಿ, ಸರೋವರದಲ್ಲಿ ಬೋಟ್​ ಮೂಲಕ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಮದುವೆ ನಡೆಯುವ ಸ್ಥಳಕ್ಕೆ ಅತಿಥಿಗಳು ಬೋಟ್ ಮೂಲಕವೇ ಹೋಗಲಿದ್ದಾರೆ.

ಮದುವೆ ತುಂಬಾನೇ ಖಾಸಗಿಯಾಗಿ ನಡೆಯಲಿದೆ. ಈ ಕಾರಣದಿಂದ ವಿಶೇಷ ಒಪ್ಪಂದ ಕೂಡ ಮಾಡಿಕೊಳ್ಳಲಾಗಿದೆ. ಹೋಟೆಲ್ ಒಳಗೆ ಇರುವ ಸಿಬ್ಬಂದಿ ಮದುವೆ ಮುಗಿಯುವವರೆಗೆ ಅಲ್ಲಿಯೇ ಇರಬೇಕು. ಅವರು ಮೊಬೈಲ್​ ಬಳಕೆ ಮಾಡುವಂತಿಲ್ಲ. ಹೊರಗಿನಿಂದ ಯಾರೇ ಹೊಸಬರು ಬಂದರೂ ಹೋಟೆಲ್ ಒಳಗೆ ಬಿಟ್ಟುಕೊಳ್ಳಬಾರದು ಎನ್ನುವ ಕಂಡಿಷನ್ ಹಾಕಲಾಗಿದೆ. ಮೂರು ದಿನಗಳ ಕಾಲ ಹೋಟೆಲ್ ಬುಕ್ ಆಗಿದೆ.

ಇನ್ನು, ಮೊಬೈಲ್ ಹಾಗೂ ಕ್ಯಾಮೆರಾ ಬಳಕೆ ಸಂಪೂರ್ಣವಾಗಿ ನಿಷೇಧಗೊಂಡಿದೆ. ಇಂದಿನಿಂದ (ಸೆಪ್ಟೆಂಬರ್ 23) ಮದುವೆ ಕಾರ್ಯ ನಡೆಯಲಿದೆ. ಮೆಹೆಂದಿ, ಸಂಗೀತ ಕಾರ್ಯಕ್ರಮಗಳು ನಡೆಯಲಿವೆ. ಇನ್ನು ಪರಿಣೀತಿ ಅವರ ದೆಹಲಿ ಮನೆಯಲ್ಲೂ ಭರ್ಜರಿ ರಿಸೆಪ್ಷನ್ ಆಯೋಜನೆಗೊಂಡಿದೆ.

ಇದನ್ನೂ ಓದಿ: ತಂಗಿ ಮದುವೆಗೆ ದೂರದಿಂದಲೇ ವಿಶ್​ ಮಾಡಿ ಸುಮ್ಮನಾದ ಪ್ರಿಯಾಂಕಾ ಚೋಪ್ರಾ

ಇನ್ನು, ಮದುವೆಗೆ ಪ್ರಿಯಾಂಕಾ ಚೋಪ್ರಾ ಅವರು ಹಾಜರಿ ಹಾಕುತ್ತಿಲ್ಲ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಪರಿಣೀತಿ ಫೋಟೋ ಹಾಕಿ ವಿಶ್ ಮಾಡಿದ್ದಾರೆ. ಪರಿಣೀತಿ ಹಾಗೂ ರಾಘವ್ ಚಡ್ಡಾ ಪರಸ್ಪರ ಪ್ರೀತಿಸುತ್ತಿದ್ದರು. ಈಗ ಇವರು ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಹಲವು ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ