AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ಮದುವೆಗೆ ಕ್ಷಣಗಣನೆ; ಮೊಬೈಲ್ ಬಳಕೆ ಬ್ಯಾನ್

ಮೂಲಗಳ ಪ್ರಕಾರ 100ಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ಮದುವೆ ನಡೆಯುವ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಮದುವೆ ನಡೆಯುವ ಸ್ಥಳ ಇರುವುದು ಸರೋವರದ ಮಧ್ಯೆ. ಹೀಗಾಗಿ, ಸರೋವರದಲ್ಲಿ ಬೋಟ್​ ಮೂಲಕ ಭದ್ರತೆ ನೀಡಲು ನಿರ್ಧರಿಸಲಾಗಿದೆ.

ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ಮದುವೆಗೆ ಕ್ಷಣಗಣನೆ; ಮೊಬೈಲ್ ಬಳಕೆ ಬ್ಯಾನ್
ರಾಘವ್-ಪರಿಣೀತಿ
ರಾಜೇಶ್ ದುಗ್ಗುಮನೆ
|

Updated on: Sep 23, 2023 | 11:53 AM

Share

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ (Parineeti Chopra) ಹಾಗೂ ರಾಘವ್ ಚಡ್ಡಾ ಭಾನುವಾರ (ಸೆಪ್ಟೆಂಬರ್ 24) ಉದಯಪುರದಲ್ಲಿ ಮದುವೆ ಆಗಲಿದ್ದಾರೆ. ಶುಕ್ರವಾರ (ಸೆಪ್ಟೆಂಬರ್ 22) ಈ ಜೋಡಿ ಉದಯಪುರ ತಲುಪಿದೆ. ಮದುವೆ ನಡೆಯುವ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ಭರ್ಜರಿ ಸೆಕ್ಯುರಿಟಿ ನಿಯೋಜನೆ ಮಾಡಲಾಗಿದೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನಡೆಯಲಿದೆ. ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ಮದುವೆಗೆ ಹಾಜರಿ ಹಾಕುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ 100ಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ಮದುವೆ ನಡೆಯುವ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಮದುವೆ ನಡೆಯುವ ಸ್ಥಳ ಇರುವುದು ಸರೋವರದ ಮಧ್ಯೆ. ಹೀಗಾಗಿ, ಸರೋವರದಲ್ಲಿ ಬೋಟ್​ ಮೂಲಕ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಮದುವೆ ನಡೆಯುವ ಸ್ಥಳಕ್ಕೆ ಅತಿಥಿಗಳು ಬೋಟ್ ಮೂಲಕವೇ ಹೋಗಲಿದ್ದಾರೆ.

ಮದುವೆ ತುಂಬಾನೇ ಖಾಸಗಿಯಾಗಿ ನಡೆಯಲಿದೆ. ಈ ಕಾರಣದಿಂದ ವಿಶೇಷ ಒಪ್ಪಂದ ಕೂಡ ಮಾಡಿಕೊಳ್ಳಲಾಗಿದೆ. ಹೋಟೆಲ್ ಒಳಗೆ ಇರುವ ಸಿಬ್ಬಂದಿ ಮದುವೆ ಮುಗಿಯುವವರೆಗೆ ಅಲ್ಲಿಯೇ ಇರಬೇಕು. ಅವರು ಮೊಬೈಲ್​ ಬಳಕೆ ಮಾಡುವಂತಿಲ್ಲ. ಹೊರಗಿನಿಂದ ಯಾರೇ ಹೊಸಬರು ಬಂದರೂ ಹೋಟೆಲ್ ಒಳಗೆ ಬಿಟ್ಟುಕೊಳ್ಳಬಾರದು ಎನ್ನುವ ಕಂಡಿಷನ್ ಹಾಕಲಾಗಿದೆ. ಮೂರು ದಿನಗಳ ಕಾಲ ಹೋಟೆಲ್ ಬುಕ್ ಆಗಿದೆ.

ಇನ್ನು, ಮೊಬೈಲ್ ಹಾಗೂ ಕ್ಯಾಮೆರಾ ಬಳಕೆ ಸಂಪೂರ್ಣವಾಗಿ ನಿಷೇಧಗೊಂಡಿದೆ. ಇಂದಿನಿಂದ (ಸೆಪ್ಟೆಂಬರ್ 23) ಮದುವೆ ಕಾರ್ಯ ನಡೆಯಲಿದೆ. ಮೆಹೆಂದಿ, ಸಂಗೀತ ಕಾರ್ಯಕ್ರಮಗಳು ನಡೆಯಲಿವೆ. ಇನ್ನು ಪರಿಣೀತಿ ಅವರ ದೆಹಲಿ ಮನೆಯಲ್ಲೂ ಭರ್ಜರಿ ರಿಸೆಪ್ಷನ್ ಆಯೋಜನೆಗೊಂಡಿದೆ.

ಇದನ್ನೂ ಓದಿ: ತಂಗಿ ಮದುವೆಗೆ ದೂರದಿಂದಲೇ ವಿಶ್​ ಮಾಡಿ ಸುಮ್ಮನಾದ ಪ್ರಿಯಾಂಕಾ ಚೋಪ್ರಾ

ಇನ್ನು, ಮದುವೆಗೆ ಪ್ರಿಯಾಂಕಾ ಚೋಪ್ರಾ ಅವರು ಹಾಜರಿ ಹಾಕುತ್ತಿಲ್ಲ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಪರಿಣೀತಿ ಫೋಟೋ ಹಾಕಿ ವಿಶ್ ಮಾಡಿದ್ದಾರೆ. ಪರಿಣೀತಿ ಹಾಗೂ ರಾಘವ್ ಚಡ್ಡಾ ಪರಸ್ಪರ ಪ್ರೀತಿಸುತ್ತಿದ್ದರು. ಈಗ ಇವರು ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಹಲವು ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?