AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ಮದುವೆಗೆ ಕ್ಷಣಗಣನೆ; ಮೊಬೈಲ್ ಬಳಕೆ ಬ್ಯಾನ್

ಮೂಲಗಳ ಪ್ರಕಾರ 100ಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ಮದುವೆ ನಡೆಯುವ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಮದುವೆ ನಡೆಯುವ ಸ್ಥಳ ಇರುವುದು ಸರೋವರದ ಮಧ್ಯೆ. ಹೀಗಾಗಿ, ಸರೋವರದಲ್ಲಿ ಬೋಟ್​ ಮೂಲಕ ಭದ್ರತೆ ನೀಡಲು ನಿರ್ಧರಿಸಲಾಗಿದೆ.

ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ಮದುವೆಗೆ ಕ್ಷಣಗಣನೆ; ಮೊಬೈಲ್ ಬಳಕೆ ಬ್ಯಾನ್
ರಾಘವ್-ಪರಿಣೀತಿ
ರಾಜೇಶ್ ದುಗ್ಗುಮನೆ
|

Updated on: Sep 23, 2023 | 11:53 AM

Share

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ (Parineeti Chopra) ಹಾಗೂ ರಾಘವ್ ಚಡ್ಡಾ ಭಾನುವಾರ (ಸೆಪ್ಟೆಂಬರ್ 24) ಉದಯಪುರದಲ್ಲಿ ಮದುವೆ ಆಗಲಿದ್ದಾರೆ. ಶುಕ್ರವಾರ (ಸೆಪ್ಟೆಂಬರ್ 22) ಈ ಜೋಡಿ ಉದಯಪುರ ತಲುಪಿದೆ. ಮದುವೆ ನಡೆಯುವ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ಭರ್ಜರಿ ಸೆಕ್ಯುರಿಟಿ ನಿಯೋಜನೆ ಮಾಡಲಾಗಿದೆ. ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಮದುವೆ ನಡೆಯಲಿದೆ. ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ಮದುವೆಗೆ ಹಾಜರಿ ಹಾಕುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ 100ಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ಮದುವೆ ನಡೆಯುವ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಮದುವೆ ನಡೆಯುವ ಸ್ಥಳ ಇರುವುದು ಸರೋವರದ ಮಧ್ಯೆ. ಹೀಗಾಗಿ, ಸರೋವರದಲ್ಲಿ ಬೋಟ್​ ಮೂಲಕ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಮದುವೆ ನಡೆಯುವ ಸ್ಥಳಕ್ಕೆ ಅತಿಥಿಗಳು ಬೋಟ್ ಮೂಲಕವೇ ಹೋಗಲಿದ್ದಾರೆ.

ಮದುವೆ ತುಂಬಾನೇ ಖಾಸಗಿಯಾಗಿ ನಡೆಯಲಿದೆ. ಈ ಕಾರಣದಿಂದ ವಿಶೇಷ ಒಪ್ಪಂದ ಕೂಡ ಮಾಡಿಕೊಳ್ಳಲಾಗಿದೆ. ಹೋಟೆಲ್ ಒಳಗೆ ಇರುವ ಸಿಬ್ಬಂದಿ ಮದುವೆ ಮುಗಿಯುವವರೆಗೆ ಅಲ್ಲಿಯೇ ಇರಬೇಕು. ಅವರು ಮೊಬೈಲ್​ ಬಳಕೆ ಮಾಡುವಂತಿಲ್ಲ. ಹೊರಗಿನಿಂದ ಯಾರೇ ಹೊಸಬರು ಬಂದರೂ ಹೋಟೆಲ್ ಒಳಗೆ ಬಿಟ್ಟುಕೊಳ್ಳಬಾರದು ಎನ್ನುವ ಕಂಡಿಷನ್ ಹಾಕಲಾಗಿದೆ. ಮೂರು ದಿನಗಳ ಕಾಲ ಹೋಟೆಲ್ ಬುಕ್ ಆಗಿದೆ.

ಇನ್ನು, ಮೊಬೈಲ್ ಹಾಗೂ ಕ್ಯಾಮೆರಾ ಬಳಕೆ ಸಂಪೂರ್ಣವಾಗಿ ನಿಷೇಧಗೊಂಡಿದೆ. ಇಂದಿನಿಂದ (ಸೆಪ್ಟೆಂಬರ್ 23) ಮದುವೆ ಕಾರ್ಯ ನಡೆಯಲಿದೆ. ಮೆಹೆಂದಿ, ಸಂಗೀತ ಕಾರ್ಯಕ್ರಮಗಳು ನಡೆಯಲಿವೆ. ಇನ್ನು ಪರಿಣೀತಿ ಅವರ ದೆಹಲಿ ಮನೆಯಲ್ಲೂ ಭರ್ಜರಿ ರಿಸೆಪ್ಷನ್ ಆಯೋಜನೆಗೊಂಡಿದೆ.

ಇದನ್ನೂ ಓದಿ: ತಂಗಿ ಮದುವೆಗೆ ದೂರದಿಂದಲೇ ವಿಶ್​ ಮಾಡಿ ಸುಮ್ಮನಾದ ಪ್ರಿಯಾಂಕಾ ಚೋಪ್ರಾ

ಇನ್ನು, ಮದುವೆಗೆ ಪ್ರಿಯಾಂಕಾ ಚೋಪ್ರಾ ಅವರು ಹಾಜರಿ ಹಾಕುತ್ತಿಲ್ಲ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಪರಿಣೀತಿ ಫೋಟೋ ಹಾಕಿ ವಿಶ್ ಮಾಡಿದ್ದಾರೆ. ಪರಿಣೀತಿ ಹಾಗೂ ರಾಘವ್ ಚಡ್ಡಾ ಪರಸ್ಪರ ಪ್ರೀತಿಸುತ್ತಿದ್ದರು. ಈಗ ಇವರು ಮದುವೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಹಲವು ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್