AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನಡೆದ ಪರಿಣೀತಿ ಚೋಪ್ರಾ ಮದುವೆ; ಪ್ರಮುಖರೇ ಗೈರು

Parineeti Chopra Wedding: ಸೆಪ್ಟೆಂಬರ್ 22ರಂದು ಸಂಜೆಯೇ ಪರೀಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಅವರು ಉದಯಪುರಕ್ಕೆ ಆಗಮಿಸಿದ್ದರು. ಲೀಲಾ ಪ್ಯಾಲೇಸ್​ ಹೋಟೆಲ್​ನ ಭರ್ಜರಿಯಾಗಿ ಸಿಂಗಾರ ಮಾಡಲಾಗಿತ್ತು. ಮದುವೆ ಸಮಾರಂಭ ಸಾಕಷ್ಟು ಖಾಸಗಿಯಾಗಿ ನಡೆಯಬೇಕು ಎನ್ನುವ ಕಾರಣಕ್ಕೆ ಅತಿಥಿಗಳಿಗೆ ಮೊಬೈಲ್ ಬಳಕೆ ಬ್ಯಾನ್ ಮಾಡಲಾಗಿತ್ತು.

ಅದ್ದೂರಿಯಾಗಿ ನಡೆದ ಪರಿಣೀತಿ ಚೋಪ್ರಾ ಮದುವೆ; ಪ್ರಮುಖರೇ ಗೈರು
ರಾಘವ್-ಪರೀಣಿತಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 24, 2023 | 9:29 PM

Share

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ (Parineeti Chopra) ಹಾಗೂ ಆಪ್ ನಾಯಕ್ ರಾಘವ್ ಚಡ್ಡಾ ಮದುವೆ ರಾಜಸ್ಥಾನದ ಉದಯಪುರದಲ್ಲಿ ಇಂದು (ಸೆಪ್ಟೆಂಬರ್ 24) ಅದ್ದೂರಿಯಾಗಿ ನಡೆದಿದೆ. ಉದಯಪುರದ ಲೀಲಾ ಪ್ಯಾಲೇಸ್ ಹೋಟೆಲ್​ನಲ್ಲಿ ಈ ಮದುವೆ ನಡೆದಿದೆ. ಸಂಜೆ ವೇಳೆಗೆ ಇಬ್ಬರೂ ಮದುವೆ ಆಗಿದ್ದಾರೆ. ಈ ಮದುವೆಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಆದರೆ, ಕೆಲವರು ಪ್ರಮುಖರು ಮದುವೆಗೆ ಗೈರಾಗಿದ್ದಾರೆ. ಇದು ದಂಪತಿಯ ಬೇಸರಕ್ಕೆ ಕಾರಣ ಆಗಿದೆ.

ಸೆಪ್ಟೆಂಬರ್ 22ರಂದು ಸಂಜೆಯೇ ಪರೀಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಅವರು ಉದಯಪುರಕ್ಕೆ ಆಗಮಿಸಿದ್ದರು. ಲೀಲಾ ಪ್ಯಾಲೇಸ್​ ಹೋಟೆಲ್​ನ ಭರ್ಜರಿಯಾಗಿ ಸಿಂಗಾರ ಮಾಡಲಾಗಿತ್ತು. ಮದುವೆ ಸಮಾರಂಭ ಸಾಕಷ್ಟು ಖಾಸಗಿಯಾಗಿ ನಡೆಯಬೇಕು ಎನ್ನುವ ಕಾರಣಕ್ಕೆ ಅತಿಥಿಗಳಿಗೆ ಮೊಬೈಲ್ ಬಳಕೆ ಬ್ಯಾನ್ ಮಾಡಲಾಗಿತ್ತು. ಹಲವು ಸೆಲೆಬ್ರಿಟಿಗಳು ಈ ವಿವಾಹ ಸಮಾರಂಬದಲ್ಲಿ ಭಾಗಿಯಾಗಿದ್ದಾರೆ.

ಹೇಗಿತ್ತು ಮದುವೆ?

ಲೀಲ್ಯಾ ಪ್ಯಾಲೇಸ್​ನ ಸರೋವರದ ಮಧ್ಯೆ ಮದುವೆ ಮಂಟಪ ಇದೆ. ಬೋಟ್ ಮೂಲಕ ಈ ಜೋಡಿ ಮಂಟಪಕ್ಕೆ ತೆರಳಿತು. ಮಧ್ಯಾಹ್ನ 3:30ರ ಸುಮಾರಿಗೆ ಇಬ್ಬರೂ ಮಾಲೆ ಬದಲಾಯಿಸಿಕೊಂಡರು. 4 ಗಂಟೆಗೆ ಈ ಜೋಡಿ ಸಪ್ತಪದಿ ತುಳಿದರು. ಸೆಲೆಬ್ರಿಟಿ ಮದುವೆ ಎನ್ನುವ ಕಾರಣಕ್ಕೆ ಅರೇಜ್​ಮೆಂಟ್​ಗಳು ಅದ್ದೂರಿಯಾಗಿತ್ತು.

ಮದುವೆಗೆ ಬಂದ ಸೆಲೆಬ್ರಿಗಳು

ಸೆಲೆಬ್ರಿಟಿ ಮದುವೆ ಎನ್ನುವ ಕಾರಣಕ್ಕೆ ಅನೇಕ ಪ್ರಮುಖರು ಇದರಲ್ಲಿ ಭಾಗಿ ಆಗಿದ್ದರು. ಸಾನಿಯಾ ಮಿರ್ಜಾ, ಹರ್ಭಜನ್ ಸಿಂಗ್, ಮನಿಶ್ ಮಲ್ಹೋತ್ರಾ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗ್ವಂತ್ ಮಾನ್ ಮೊದಲಾದವರು ಮದುವೆಗೆ ಹಾಜರಿ ಹಾಕಿದ್ದರು.

ಇದನ್ನೂ ಓದಿ: ಪರಿಣೀತಿ ಚೋಪ್ರಾ-ರಾಘವ್ ಚಡ್ಡಾ ಮದುವೆಗೆ ಕ್ಷಣಗಣನೆ; ಮೊಬೈಲ್ ಬಳಕೆ ಬ್ಯಾನ್

ಹಾಜರಿ ಹಾಕದೇ ಇರುವವರು

ಮದುವೆಗೆ ಕೆಲವು ಪ್ರಮುಖರೇ ಹಾಜರಿ ಹಾಕಿಲ್ಲ. ಹೌದು, ಪರಿಣೀತಿ ಚೋಪ್ರಾ ಸಹೋದರಿ ಪ್ರಿಯಾಂಕಾ ಚೋಪ್ರಾ ಅವರು ಹಾಜರಿ ಹಾಕಿಲ್ಲ. ಅವರು ಸೋಶಿಯಲ್ ಮೀಡಿಯಾ ಮೂಲಕ ಅವರು ಸಹೋದರಿಗೆ ವಿಶ್ ಮಾಡಿದ್ದಾರೆ. ಇನ್ನು ಕರಣ್ ಜೋಹರ್ ಕೂಡ ಮದುವೆಗೆ ಬಂದಿಲ್ಲ. ಅವರು ಕುಟುಂಬದಲ್ಲಿ ತೊಂದರೆ ಆಗಿದ್ದರಿಂದ ಬಂದಿಲ್ಲ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?