AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನಿಮೂನ್​ ಫೋಟೋ ಅಲ್ಲ’; ಬೋಲ್ಡ್ ಫೋಟೋ ಹಾಕಿ ಸ್ಪಷ್ಟನೆ ಕೊಟ್ಟ ನಟಿ

ಇತ್ತೀಚೆಗೆ ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೆಸ್ ಹೋಟೆಲ್​ನಲ್ಲಿ ಪರಿಣೀತಿ-ರಾಘವ್ ಛಡ್ಡಾ ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಮುಗಿದ ಬಳಿಕ ಅವರು ಗರ್ಲ್ಸ್​ ಜೊತೆ ಸೇರಿ ಒಂದು ಟ್ರಿಪ್ ತೆರಳಿದಂತಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಹನಿಮೂನ್​ ಫೋಟೋ ಅಲ್ಲ’; ಬೋಲ್ಡ್ ಫೋಟೋ ಹಾಕಿ ಸ್ಪಷ್ಟನೆ ಕೊಟ್ಟ ನಟಿ
ಪರಿಣೀತಿ
ರಾಜೇಶ್ ದುಗ್ಗುಮನೆ
|

Updated on: Oct 17, 2023 | 11:44 AM

Share

ನಟಿ ಪರಿಣೀತಿ ಚೋಪ್ರಾ (Parineeti Chopra) ಅವರು ಇತ್ತೀಚೆಗಷ್ಟೇ ಮದುವೆ ಆಗಿದ್ದಾರೆ. ಆಪ್ ನಾಯಕ ರಾಘವ್ ಛಡ್ಡಾ ಅವರನ್ನು ಪರಿಣೀತಿ ವರಿಸಿದ್ದಾರೆ. ಮದುವೆ ಆದ ಬಳಿಕ ಅನೇಕ ಸೆಲೆಬ್ರಿಟಿಗಳು ವಿದೇಶಕ್ಕೆ ತೆರುತ್ತಾರೆ. ಮದುವೆ ಆದ ಕೆಲವೇ ದಿನಗಳಲ್ಲಿ ಪರಿಣೀತಿ ಅವರು ಬೀಚ್​ಸೈಡ್​ ಸ್ವಿಮಿಂಗ್ ಪೂಲ್ ಪಕ್ಕದಲ್ಲಿ ನಿಂತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅವರು ಹನಿಮೂನ್ ಫೋಟೋ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಛಡ್ಡಾ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಆಗುವ ಮೂಲಕ ಇವರು ತಮ್ಮ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಇತ್ತೀಚೆಗೆ ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೆಸ್ ಹೋಟೆಲ್​ನಲ್ಲಿ ಇವರು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಮುಗಿದ ಬಳಿಕ ಅವರು ಗರ್ಲ್ಸ್​ ಜೊತೆ ಸೇರಿ ಒಂದು ಟ್ರಿಪ್ ತೆರಳಿದಂತಿದೆ. ಈ ಫೋಟೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಮುದ್ರ ತೀರದಲ್ಲಿರುವ ಸ್ವಿಮಿಂಗ್​ಪೂಲ್​ನಲ್ಲಿ ಬೋಲ್ಡ್ ಡ್ರೆಸ್ ಹಾಕಿ ನಿಂತಿದ್ದಾರೆ ಪರಿಣೀತಿ. ಅವರ ಕೈಯಲ್ಲಿ ಇನ್ನೂ ಮೆಹಂದಿ ಹಾಗೆಯೇ ಇದೆ. ಈ ಫೋಟೋ ನೋಡಿದ ಅನೇಕರು ಇದು ಅವರ ಹನಿಮೂನ್ ಸಂದರ್ಭದಲ್ಲಿ ತೆಗೆದ ಫೋಟೋ ಎಂದು ಭಾವಿಸಿದ್ದಾರೆ. ಈ ಕಾರಣಕ್ಕೆ ಇದಕ್ಕೆ ಅವರು ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ‘ಹನಿಮೂನ್​​ ಅಲ್ಲ. ಅತ್ತಿಗೆ ತೆಗೆದ ಫೋಟೋ’ ಎಂದು ಅವರು ಬರೆದುಕೊಂಡಿದ್ದಾರೆ.

View this post on Instagram

A post shared by @parineetichopra

ಇದನ್ನೂ ಓದಿ: ಹೇಗಿತ್ತು ನೋಡಿ ಪರಿಣೀತಿ ಚೋಪ್ರಾ ಮದುವೆ; ಫೋಟೋ ಮೂಲಕ ವಿವರಿಸಿದ ನಟಿ

ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್​ಗಳು ಬಂದಿವೆ. ‘ನೀವು ಮೊದಲೇ ಹೇಳಿದ್ದು ಉತ್ತಮವಾಯಿತು. ಇಲ್ಲದಿದ್ದರೆ ನಾನಾ ರೀತಿಯಲ್ಲಿ ಈ ಫೋಟೋ ಬಗ್ಗೆ ಸುದ್ದಿ ಆಗುತ್ತಿತ್ತು’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಅನೇಕರು ‘ಪತಿಯನ್ನು ಬಿಟ್ಟು ಹೋದ್ರಾ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ