AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan 2nd Song: ‘ಪಠಾಣ್​’ ಚಿತ್ರದ 2ನೇ ಹಾಡು ಬಿಡುಗಡೆ ಮಾಡಲು ಸಜ್ಜಾದ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ

Jhoome Jo Pathaan: ‘ಪಠಾಣ್​’ ಸಿನಿಮಾದ ಎರಡನೇ ಹಾಡಿನಲ್ಲಿ ಏನೆಲ್ಲ ಇದೆ ಎಂಬುದು ಡಿಸೆಂಬರ್​ 22ರಂದು ತಿಳಿಯಲಿದೆ. ಈ ಹಾಡಿನ ರಿಲೀಸ್​ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

Pathaan 2nd Song: ‘ಪಠಾಣ್​’ ಚಿತ್ರದ 2ನೇ ಹಾಡು ಬಿಡುಗಡೆ ಮಾಡಲು ಸಜ್ಜಾದ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ
ಶಾರುಖ್ ಖಾನ್, ದೀಪಿಕಾ ಪಡುಕೋಣೆ
TV9 Web
| Edited By: |

Updated on:Dec 20, 2022 | 7:36 PM

Share

ಖ್ಯಾತ ನಟ ಶಾರುಖ್​ ಖಾನ್​ (Shah Rukh Khan) ಅವರ ‘ಪಠಾಣ್​’ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ನೆಗೆಟಿವ್​ ಮತ್ತು ಪಾಸಿಟಿವ್​ ಎರಡೂ ಕಾರಣಕ್ಕಾಗಿ ಈ ಸಿನಿಮಾ ಸುದ್ದಿ ಆಗುತ್ತಿದೆ. ಒಂದು ವರ್ಗದ ಜನರು ಈ ಚಿತ್ರವನ್ನು ಬಹಿಷ್ಕಾರ ಮಾಡಬೇಕು ಎಂದು ಕೂಗಾಡುತ್ತಿದ್ದಾರೆ. ಆದರೆ ಶಾರುಖ್​ ಖಾನ್​ ಅವರ ಅಪ್ಪಟ ಅಭಿಮಾನಿಗಳು ‘ಪಠಾಣ್​’ ಚಿತ್ರದ (Pathaan Movie) ಬಿಡುಗಡೆಗಾಗಿ ಕಾದಿದ್ದಾರೆ. 2023ರ ಜನವರಿ 25ರಂದು ಈ ಚಿತ್ರ ರಿಲೀಸ್​ ಆಗಲಿದೆ. ಕೆಲವೇ ದಿನಗಳ ಹಿಂದೆ ‘ಬೇಷರಂ ರಂಗ್​..’ ಹಾಡು ಬಿಡುಗಡೆ ಆಯಿತು. ಈ ಗೀತೆಯಲ್ಲಿ ದೀಪಿಕಾ ಪಡುಕೋಣೆ (Deepika Padukone) ಕಾಣಿಸಿಕೊಂಡ ರೀತಿ ಸರಿಯಿಲ್ಲ ಎಂದು ನೆಟ್ಟಿಗರು ಬೊಬ್ಬೆ ಹೊಡೆದುಕೊಂಡರು. ಆ ವಿವಾದ ಇನ್ನೂ ಹಸಿಯಾಗಿರುವಾಗಲೇ ‘ಪಠಾಣ್​’ ಸಿನಿಮಾದ ಎರಡನೇ ಹಾಡನ್ನು ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ.

ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಅವರದ್ದು ಹಿಟ್​ ಜೋಡಿ. ‘ಓಂ ಶಾಂತಿ ಓಂ’, ‘ಹ್ಯಾಪಿ ನ್ಯೂ ಇಯರ್​’, ‘ಚೆನ್ನೈ ಎಕ್ಸ್​ಪ್ರೆಸ್​’ ಬಳಿಕ ಇವರಿಬ್ಬರು ‘ಪಠಾಣ್​’ ಸಿನಿಮಾದಲ್ಲಿ ಮತ್ತೊಮ್ಮೆ ಒಂದಾಗಿದ್ದಾರೆ. ಇಬ್ಬರನ್ನು ದೊಡ್ಡ ಪರದೆಯಲ್ಲಿ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ‘ಬೇಷರಂ ರಂಗ್​..’ ಹಾಡಿನಲ್ಲಿ ಇಬ್ಬರ ಕೆಮಿಸ್ಟ್ರಿ ಕಂಡು ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಅದೇ ರೀತಿ, ಈಗ ಎರಡನೇ ಹಾಡಿನ ಮೂಲಕ ರಂಜಿಸಲು ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಸಜ್ಜಾಗಿದ್ದಾರೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Shah Rukh Khan: ‘ಪಠಾಣ್​’ ಚಿತ್ರ ಮೊದಲ ದಿನ ಎಷ್ಟು ಕೋಟಿ ಕಲೆಕ್ಷನ್​ ಮಾಡಲಿದೆ? ಶಾರುಖ್​ ಖಾನ್​ಗೆ ನೇರ ಪ್ರಶ್ನೆ

‘ಜೂಮೇ ಜೋ ಪಠಾಣ್​..’ ಎಂಬ ಈ ಸಾಂಗ್​ ಹೇಗೆ ಮೂಡಿಬಂದಿರಬಹುದು ಎಂಬುದನ್ನು ತಿಳಿಯುವ ಕೌತುಕ ಹೆಚ್ಚಾಗಿದೆ. ಮೊದಲ ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ ಕೇಸರಿ ಬಿಕಿನಿ ಬಗ್ಗೆ ತಕಾರಾರು ವ್ಯಕ್ತವಾಯಿತು. ಎರಡನೇ ಹಾಡಿನಲ್ಲಿ ಏನೆಲ್ಲ ಇದೆ ಎಂಬುದು ಡಿಸೆಂಬರ್​ 22ರಂದು ತಿಳಿಯಲಿದೆ. ಈ ಹಾಡಿನ ರಿಲೀಸ್​ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗುತ್ತಿದೆ.

ಇದನ್ನೂ ಓದಿ: Shah Rukh Khan: ‘ಮದುವೆ ಡೇಟ್​ ಮುಂದೂಡಿಕೊಳ್ಳಿ’: ಅಭಿಮಾನಿಗೆ ಸಲಹೆ ನೀಡಿದ ‘ಪಠಾಣ್​’ ಹೀರೋ ಶಾರುಖ್​ ಖಾನ್​

ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿರುವ ‘ಪಠಾಣ್​’ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ. ಪ್ರತಿಷ್ಠಿತ ‘ಯಶ್​ ರಾಜ್​ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ.

ವಿಲನ್​ ಆಗಿ ಜಾನ್​ ಅಬ್ರಾಹಂ ನಟಿಸಿದ್ದು, ಸ್ಟಾರ್​ ಮೆರುಗು ಹೆಚ್ಚಿದೆ. ಅದ್ದೂರಿ ಬಜೆಟ್​ನಲ್ಲಿ ತಯಾರಾದ ಈ ಸಿನಿಮಾವನ್ನು ವಿವಿಧ ದೇಶಗಳಲ್ಲಿ ಚಿತ್ರಿಸಲಾಗಿದೆ. ಬರೋಬ್ಬರಿ 4 ವರ್ಷಗಳ ಬಳಿಕ ಶಾರುಖ್​ ಖಾನ್​ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಆ ಕಾರಣದಿಂದಲೂ ನಿರೀಕ್ಷೆ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:36 pm, Tue, 20 December 22

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್