Shah Rukh Khan: ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ತಳ್ಳಿದ ಶಾರುಖ್​ ಖಾನ್​; ‘ಪಠಾಣ್​’ ಗೆದ್ದ ಮೇಲೆ ಸೊಕ್ಕು ಬಂತಾ?

Shah Rukh Khan Viral Video: ಏರ್​ಪೋರ್ಟ್​​ನಲ್ಲಿ ಕೆಲವು ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದ ಶಾರುಖ್​ ಖಾನ್​ ಅವರಿಗೆ ಸಿಟ್ಟು ಬಂದಿದೆ.

Shah Rukh Khan: ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ತಳ್ಳಿದ ಶಾರುಖ್​ ಖಾನ್​; ‘ಪಠಾಣ್​’ ಗೆದ್ದ ಮೇಲೆ ಸೊಕ್ಕು ಬಂತಾ?
ಶಾರುಖ್ ಖಾನ್
Follow us
|

Updated on: May 03, 2023 | 11:10 AM

ನಟ ಶಾರುಖ್​ ಖಾನ್​ ಅವರು ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ವರ್ಷ ಆರಂಭದಲ್ಲಿ ಬಿಡುಗಡೆಯಾದ ‘ಪಠಾಣ್​’ ಸಿನಿಮಾ (Pathaan Movie) ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಅದರಿಂದ ಶಾರುಖ್​ ಖಾನ್​ ಅವರಿಗೆ ಸಿಕ್ಕಾಪಟ್ಟೆ ಲಾಭ ಆಗಿದೆ. ಈ ಗೆಲುವಿನ ಬಳಿಕ ಶಾರುಖ್​ ಖಾನ್​ (Shah Rukh Khan) ಅವರಿಗೆ ಅಹಂ ಬಂದಿದೆಯೇ? ಅವರು ಮನಬಂದಂತೆ ನಡೆದುಕೊಳ್ಳಲು ಶುರುಮಾಡಿದ್ದಾರಾ? ಈ ರೀತಿ ಪ್ರಶ್ನೆ ಮೂಡಲು ಕಾರಣ ಆಗುವಂತಹ ಒಂದು ಘಟನೆ ನಡೆದಿದೆ. ಅಭಿಮಾನಿಗಳ (Shah Rukh Khan Fans) ಜೊತೆ ಶಾರುಖ್​ ಖಾನ್​ ಅವರು ಸಿಟ್ಟಿನಿಂದ ವರ್ತಿಸಿದ್ದಾರೆ. ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ದೂರಕ್ಕೆ ತಳ್ಳಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಈ ಘಟನೆ ನಡೆದಿರುವುದು ಮುಂಬೈ ವಿಮಾನ ನಿಲ್ದಾಣದಲ್ಲಿ. ‘ಡಂಕಿ’ ಸಿನಿಮಾದ ಶೂಟಿಂಗ್​ ಸಲುವಾಗಿ ಕಾಶ್ಮೀರಕ್ಕೆ ತೆರಳಿದ್ದ ಶಾರುಖ್​ ಖಾನ್​ ಅವರು ತಮ್ಮ ಮ್ಯಾನೇಜರ್​ ಪೂಜಾ ದದ್ಲಾನಿ ಜೊತೆ ಮುಂಬೈಗೆ ವಾಪಸ್​ ಬಂದಿದ್ದಾರೆ. ಈ ವೇಳೆ ಅಲ್ಲಿದ್ದ ಕೆಲವು ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಇದರಿಂದ ಶಾರುಖ್​ ಖಾನ್​ ಅವರಿಗೆ ಸಿಟ್ಟು ಬಂದಿದೆ. ಮೊಬೈಲ್​ ಹಿಡಿದುಕೊಂಡು ತಮ್ಮತ್ತ ಬಂದ ವ್ಯಕ್ತಿಯೊಬ್ಬರನ್ನು ಶಾರುಖ್​ ಖಾನ್​ ತಳ್ಳಿದ್ದಾರೆ. ಅಲ್ಲದೇ ಒಂದು ಕ್ಷಣ ಹಿಂದಕ್ಕೆ ತಿರುಗಿ ಸಿಟ್ಟಿನಿಂದ ನೋಡಿದ್ದಾರೆ. ಪಾಪರಾಜಿಗಳ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿದೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ
View this post on Instagram

A post shared by @varindertchawla

ಸೆಲೆಬ್ರಿಟಿಗಳು ಕಂಡಾಗ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಬೇಕು ಎಂದು ಅಭಿಮಾನಿಗಳು ಬಯಸುವುದು ಸಹಜ. ಆದರೆ ಅಲ್ಲಿನ ಪರಿಸ್ಥಿತಿ ಯಾವ ರೀತಿ ಇದೆ ಎಂಬುದನ್ನು ಕೂಡ ಅವರ ಗಮನಿಸಬೇಕು. ಸೆಲೆಬ್ರಿಟಿಗಳು ತುಂಬ ಅವಸರದಲ್ಲಿ ಎಲ್ಲಿಗಾದರೂ ಹೊರಟಿದ್ದರೆ ಸೆಲ್ಫಿ ನೀಡುವ ತಾಳ್ಮೆ ಅವರಿಗೆ ಇರುವುದಿಲ್ಲ. ಅಂಥ ಸಂದರ್ಭದಲ್ಲಿ ಅವರು ಕೋಪ ಮಾಡಿಕೊಂಡ ಅನೇಕ ಉದಾಹರಣೆ ಇದೆ. ಈ ಹಿಂದೆ ಸಲ್ಮಾನ್​ ಖಾನ್​ ಕೂಡ ಸಿಟ್ಟಿನಿಂದ ವರ್ತಿಸಿದ್ದರು.

ಇದನ್ನೂ ಓದಿ: Aryan Khan: ಬಟ್ಟೆ ವ್ಯಾಪಾರ ಶುರು ಮಾಡಿದ ಆರ್ಯನ್​ ಖಾನ್​ಗೆ ಭರ್ಜರಿ ಲಾಭ; ಮಗನ ಬಗ್ಗೆ ಶಾರುಖ್​ ಖಾನ್​ಗೆ ಹೆಮ್ಮೆ

ಶಾರುಖ್​ ಖಾನ್​ ಅವರು ಪ್ರಸ್ತುತ ‘ಡಂಕಿ’ ಮತ್ತು ‘ಜವಾನ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್​ ಹಿರಾನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಆ ಕಾರಣದಿಂದ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಅಟ್ಲಿ ಕುಮಾರ್​ ನಿರ್ದೇಶನದಲ್ಲಿ ‘ಜವಾನ್​’ ಸಿನಿಮಾ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ