AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾಗೆ ಕೇಸರಿ ಬಣ್ಣದ ಬಿಕಿನಿ ನೀಡಿದ್ದು ಹೇಗೆ? ಕಡೆಗೂ ಮೌನ ಮುರಿದ ನಿರ್ದೇಶಕ ಸಿದ್ದಾರ್ಥ್​ ಆನಂದ್​

Pathaan Movie | Siddharth Anand: ಬಿಡುಗಡೆಗೂ ಮುನ್ನ ಎಷ್ಟೇ ವಿರೋಧ ವ್ಯಕ್ತವಾದರೂ ಕೂಡ ‘ಪಠಾಣ್​’ ಸಿನಿಮಾದಲ್ಲಿ ಕೇಸರಿ ಬಿಕಿನಿ ದೃಶ್ಯಕ್ಕೆ ನಿರ್ದೇಶಕರು ಕತ್ತರಿ ಹಾಕಲಿಲ್ಲ. ಆ ಕುರಿತು ಸಿದ್ದಾರ್ಥ್​ ಆನಂದ್​ ಮಾತನಾಡಿದ್ದಾರೆ.

ದೀಪಿಕಾಗೆ ಕೇಸರಿ ಬಣ್ಣದ ಬಿಕಿನಿ ನೀಡಿದ್ದು ಹೇಗೆ? ಕಡೆಗೂ ಮೌನ ಮುರಿದ ನಿರ್ದೇಶಕ ಸಿದ್ದಾರ್ಥ್​ ಆನಂದ್​
ದೀಪಿಕಾ ಪಡುಕೋಣೆ, ಶಾರುಖ್​ ಖಾನ್​, ಸಿದ್ದಾರ್ಥ್​ ಆನಂದ್​
Follow us
ಮದನ್​ ಕುಮಾರ್​
|

Updated on: Apr 01, 2023 | 7:15 AM

ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾಣ್​’ ಸಿನಿಮಾ (Pathaan Movie) ಸೂಪರ್​ ಹಿಟ್​ ಆಗಿದೆ. ವಿಶ್ವಾದ್ಯಂತ ಸಾವಿರಾರು ಕೋಟಿ ರೂಪಾಯಿ ಗಳಿಸಿ ನಿರ್ಮಾಪಕರಿಗೆ ಲಾಭ ತಂದುಕೊಟ್ಟಿದೆ. ಆದರೆ ಈ ಸಿನಿಮಾದ ಬಿಡುಗಡೆಗೂ ಮುನ್ನ ಪರಿಸ್ಥಿತಿ ಬೇರೆಯದೇ ರೀತಿ ಇತ್ತು. ‘ಪಠಾಣ್​’ ಸಿನಿಮಾವನ್ನು ಒಂದು ವರ್ಗದ ನೆಟ್ಟಿಗರು ಬಹಿಷ್ಕಾರ ಮಾಡಲು ಮುಂದಾಗಿದ್ದರು. ಅದಕ್ಕೆ ಕಾರಣ ಆಗಿದ್ದು ದೀಪಿಕಾ ಪಡುಕೋಣೆ (Deepika Padukone) ಧರಿಸಿದ್ದ ಕೇಸರಿ ಬಣ್ಣ ಬಿಕಿನಿ. ಈ ಬಿಕಿನಿ ಧರಿಸಿ ‘ಬೇಷರಂ ರಂಗ್​..’ ಎಂದು ದೀಪಿಕಾ ಹಾಡಿ ಕುಣಿದಿದ್ದನ್ನು ಕೆಲವು ಹಿಂದೂ ಪರ ಸಂಘಟನೆಗಳು ವಿರೋಧಿಸಿದ್ದವು. ಅಷ್ಟಕ್ಕೂ ನಿರ್ದೇಶಕ ಸಿದ್ದಾರ್ಥ್​ ಆನಂದ್ (Siddharth Anand)​ ಅವರು ದೀಪಿಕಾ ಪಡುಕೋಣೆಗೆ ಕೇಸರಿ ಬಣ್ಣದ ಬಿಕಿನಿ ಧರಿಸುವಂತೆ ಸೂಚಿಸಿದ್ದು ಯಾಕೆ? ಈ ಬಗ್ಗೆ ಈಗ ಅವರು ಮೌನ ಮುರಿದಿದ್ದಾರೆ.

ಸಿದ್ದಾರ್ಥ್​ ಆನಂದ್​ ಅವರು ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ. ‘ವಾರ್​’, ‘ಪಠಾಣ್​’ ಸಿನಿಮಾಗಳಿಂದಾಗಿ ಅವರ ಖ್ಯಾತಿ ಹೆಚ್ಚಿದೆ. ಸಾಹಸಮಯ ಸಿನಿಮಾಗಳನ್ನು ಮಾಡುವಲ್ಲಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತು ಮಾಡಿದ್ದಾರೆ. ‘ನೂಸ್​18 ರೈಸಿಂಗ್​ ಇಂಡಿಯಾ ಸಮಿಟ್​ 2023’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದಾರ್ಥ್​ ಆನಂದ್​ ಅವರು ಬಿಕಿನಿ ಕಾಂಟ್ರವರ್ಸಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

‘ನಾವು ಹಾಗೇ ಸುಮ್ಮನೆ ಕಾಸ್ಟ್ಯೂಮ್​ ಸೆಲೆಕ್ಟ್​ ಮಾಡಿದೆವು. ಆ ಬಗ್ಗೆ ಹೆಚ್ಚೇನೂ ಯೋಚಿಸಿರಲಿಲ್ಲ. ಆ ಬಣ್ಣ ತುಂಬ ಚೆನ್ನಾಗಿ ಕಾಣುತ್ತಿತ್ತು. ಸೂರ್ಯನ ಬೆಳಕು ಚೆನ್ನಾಗಿತ್ತು. ಹುಲ್ಲು ಹಚ್ಚ ಹಸಿರಾಗಿತ್ತು. ನೀರು ನೀಲಿಯಾಗಿ ಕಾಣುತ್ತಿತ್ತು. ಅದರ ನಡುವೆ ಕೇಸರಿ ಬಣ್ಣ ತುಂಬ ಚೆನ್ನಾಗಿ ಕಾಣಿಸುತ್ತಿತ್ತು. ತೆರೆ ಮೇಲೆ ಅದನ್ನು ನೋಡಿದಾಗ ನಮ್ಮ ಉದ್ದೇಶ ಕೆಟ್ಟದ್ದಾಗಿರಲಿಲ್ಲ ಎಂಬುದು ಪ್ರೇಕ್ಷಕರಿಗೆ ಅರ್ಥ ಆಗುತ್ತದೆ ಅಂತ ನಾವು ಅಂದುಕೊಂಡಿದ್ದೆವು’ ಎಂದು ಸಿದ್ದಾರ್ಥ್​ ಆನಂದ್​ ಹೇಳಿದ್ದಾರೆ.

ಇದನ್ನೂ ಓದಿ: ‘ಕಥೆಯಿಲ್ಲದ ವಿಡಿಯೋ ಗೇಮ್​ ರೀತಿ ಇದೆ ಪಠಾಣ್​’: ಪಾಕಿಸ್ತಾನದ ಮಂದಿಯಿಂದ ಕೇಳಿಬಂತು ಟೀಕೆ

ಬಿಡುಗಡೆಗೂ ಮುನ್ನ ಎಷ್ಟೇ ವಿರೋಧ ವ್ಯಕ್ತವಾದರೂ ಕೂಡ ‘ಪಠಾಣ್​’ ಸಿನಿಮಾದಲ್ಲಿ ಕೇಸರಿ ಬಿಕಿನಿ ದೃಶ್ಯಕ್ಕೆ ನಿರ್ದೇಶಕರು ಕತ್ತರಿ ಹಾಕಲಿಲ್ಲ. ಅಂದುಕೊಂಡಂತೆಯೇ ಸಿನಿಮಾ ಬಿಡುಗಡೆ ಬಳಿಕ ಯಾವುದೇ ವಿವಾದ ಆಗಲಿಲ್ಲ. ಇದು ರಾಷ್ಟ್ರ ಭಕ್ತಿ ಕಥಾಹಂದರದ ಸಿನಿಮಾ ಆದ್ದರಿಂದ ಜನರು ಸಖತ್​ ಬೆಂಬಲ ಸೂಚಿಸಿದರು. ಅಂತಿಮವಾಗಿ ‘ಪಠಾಣ್​’ ಸಿನಿಮಾ ಗೆದ್ದು ಬೀಗಿತು. ಇಷ್ಟು ವರ್ಷಗಳ ಕಾಲ ಸತತ ಸೋಲಿನಿಂದ ಕಂಗೆಟ್ಟಿದ್ದ ಶಾರುಖ್​ ಖಾನ್​ ಅವರು ಈ ಚಿತ್ರದಿಂದ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡಿದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್