AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Box Office Collection: ಬಾಕ್ಸ್​ ಆಫೀಸ್​ನಲ್ಲಿ ‘ಪಠಾಣ್​’ ಮೋಡಿ; ಬಂಗಾರದ ಬೆಳೆ ತೆಗೆದ ಶಾರುಖ್​ ಖಾನ್​ ಸಿನಿಮಾ

Pathaan First Day Box Office Collection: ಶಾರುಖ್ ಖಾನ್​ ನಟನೆಯ ‘ಪಠಾಣ್​’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆಯುತ್ತಿದೆ. ಇಷ್ಟು ದಿನ ಸೊರಗಿದ್ದ ಬಾಲಿವುಡ್​ಗೆ ಈಗ ಹೊಸ ಕಳೆ ಬಂದಿದೆ.

Pathaan Box Office Collection: ಬಾಕ್ಸ್​ ಆಫೀಸ್​ನಲ್ಲಿ ‘ಪಠಾಣ್​’ ಮೋಡಿ; ಬಂಗಾರದ ಬೆಳೆ ತೆಗೆದ ಶಾರುಖ್​ ಖಾನ್​ ಸಿನಿಮಾ
ಶಾರುಖ್ ಖಾನ್
ಮದನ್​ ಕುಮಾರ್​
| Edited By: |

Updated on:Jan 26, 2023 | 12:36 PM

Share

ನಿರೀಕ್ಷೆಗೂ ಮೀರಿ ‘ಪಠಾಣ್​’ ಸಿನಿಮಾ (Pathaan Movie) ಅಬ್ಬರಿಸಿದೆ. ಈ ಚಿತ್ರಕ್ಕಾಗಿ ಶಾರುಖ್​ ಖಾನ್​ ಅಭಿಮಾನಿಗಳು ಕಾತರದಿಂದ ಕಾದಿದ್ದರು. ಜನವರಿ 25ರಂದು ತೆರೆಕಂಡ ಈ ಸಿನಿಮಾಗೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮೊದಲ ದಿನವೇ ‘ಪಠಾಣ್​’ ಚಿತ್ರ ಧೂಳೆಬ್ಬಿಸಿದೆ. ಬಾಕ್ಸ್​ ಆಫೀಸ್​ ಕಲೆಕ್ಷನ್​ (Pathaan Box Office Collection) ದೃಷ್ಟಿಯಿಂದ ಈ ಸಿನಿಮಾ ಬ್ಲಾಕ್​ ಬಸ್ಟರ್​ ಎನಿಸಿಕೊಂಡಿದೆ. ಒಂದು ಮೂಲದ ಪ್ರಕಾರ ಈ ಸಿನಿಮಾ ಮೊದಲ ದಿನ 50ರಿಂದ 51.5 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಶಾರುಖ್​ ಖಾನ್​ (Shah Rukh Khan) ವೃತ್ತಿಜೀವನಕ್ಕೆ ‘ಪಠಾಣ್​’ ಸಿನಿಮಾದ ಗೆಲುವಿನಿಂದಾಗಿ ದೊಡ್ಡ ಬೂಸ್ಟ್​ ಸಿಕ್ಕಂತೆ ಆಗಿದೆ. ಎರಡನೇ ದಿನವಾದ ಇಂದು (ಜ.26) ಕೂಡ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

2018ರಲ್ಲಿ ತೆರೆಗೆ ಬಂದ ‘ಜೀರೋ’ ಸಿನಿಮಾದಿಂದ ಶಾರುಖ್​ ಖಾನ್ ಅವರು ಹೀನಾಯವಾಗಿ ಸೋತಿದ್ದರು. ಆ ಬಳಿಕ ಅವರು ನಾಲ್ಕು ವರ್ಷ ಬ್ರೇಕ್​ ತೆಗೆದುಕೊಂಡರು. ಅವರ ಕಮ್​ಬ್ಯಾಕ್​ ಸಿನಿಮಾವಾಗಿ ಮೂಡಿಬಂದ ‘ಪಠಾಣ್​’ ಮೂಲಕ ಗೆಲುವು ಕಾಣುವುದು ತುಂಬ ಅನಿವಾರ್ಯವಾಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕೈ ಹಿಡಿದಿದ್ದಾರೆ. ಫ್ಯಾನ್ಸ್​ ವಲಯದಿಂದ ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬಾಯಿ ಮಾತಿನ ಪ್ರಚಾರದಿಂದಾಗಿ ‘ಪಠಾಣ್​’ ಚಿತ್ರಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

‘ಪಠಾಣ್​’ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಹಾಗೂ ಶಾರುಖ್​ ಖಾನ್​ ಜೋಡಿಯಾಗಿ ನಟಿಸಿದ್ದಾರೆ. ಇದು ಅವರಿಬ್ಬರು ಒಟ್ಟಿಗೆ ಅಭಿನಯಿಸಿದ ನಾಲ್ಕನೇ ಸಿನಿಮಾ. ಈ ಹಿಂದೆ ಅವರು ತೆರೆ ಹಂಚಿಕೊಂಡಿದ್ದ ‘ಓಂ ಶಾಂತಿ ಓಂ’, ‘ಹ್ಯಾಪಿ ನ್ಯೂ ಇಯರ್’, ‘ಚೆನ್ನೈ ಎಕ್ಸ್​ಪ್ರೆಸ್​’ ಸಿನಿಮಾಗಳು ಸೂಪರ್ ಹಿಟ್​ ಆಗಿದ್ದವು. ಆ ಚಿತ್ರಗಳನ್ನು ಮೀರಿಸುವ ರೀತಿಯಲ್ಲಿ ‘ಪಠಾಣ್​’ ಕಲೆಕ್ಷನ್​ ಮಾಡುತ್ತಿದೆ.

ಇದನ್ನೂ ಓದಿ: Pathan Collection: ಮಧ್ಯಾಹ್ನ 3 ಗಂಟೆ ಒಳಗೆ ಅಚ್ಚರಿ ರೀತಿಯಲ್ಲಿ ಕಲೆಕ್ಷನ್​ ಮಾಡಿದ ‘ಪಠಾಣ್​’; ಇಲ್ಲಿದೆ ಪಕ್ಕಾ ಲೆಕ್ಕ

ಇಂದು (ಜನವರಿ 26) ಗಣರಾಜ್ಯೋತ್ಸವ ಆಗಿರುವುದರಿಂದ ರಜೆ ಇದೆ. ಚಿತ್ರಮಂದಿರಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಇಂದು ಕೂಡ ಭರ್ಜರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ. ಶೀಘ್ರದಲ್ಲೇ 100 ಕೋಟಿ ರೂಪಾಯಿ ಕ್ಲಬ್​​ಗೆ ಈ ಸಿನಿಮಾ ಸೇರಲಿದೆ. ಇನ್ನು, ವೀಕೆಂಡ್​ ದಿನಗಳಲ್ಲಿ ಕೂಡ ಸಿಕ್ಕಾಪಟ್ಟೆ ಕಮಾಯಿ ಆಗುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ

ಸಿದ್ದಾರ್ಥ್​ ಆನಂದ್​ ಅವರು ‘ಪಠಾಣ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅವರ ಕೆಲಸಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಹಿಂದೆ ‘ವಾರ್​’ ಚಿತ್ರ ಮಾಡಿ ಗೆದ್ದಿದ್ದ ಅವರು ಈಗ ‘ಪಠಾಣ್​’ ಮೂಲಕ ಮತ್ತೊಂದು ಗೆಲುವು ಪಡೆದಿದ್ದಾರೆ. ಶಾರುಖ್​ ಖಾನ್​ ಅವರ ವೃತ್ತಿಜೀವನದಲ್ಲಿ ಹೊಸ ಇನ್ನಿಂಗ್ಸ್ ಶುರು ಮಾಡುವಲ್ಲಿ ಈ ಚಿತ್ರ ಯಶಸ್ವಿಯಾಗಿದೆ. ಇಷ್ಟು ದಿನ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಈಗ ಹೊಸ ಕಳೆ ಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:55 am, Thu, 26 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್