AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಅವರು ನನ್ನ ಕೈ ಕತ್ತರಿಸುತ್ತಾರೆ ಎನ್ನುವ ಭಯ ಈಗಲೂ ಇದೆ‘; ಶಾರುಖ್ ಖಾನ್​ಗೆ ಇದೆ ಫೋಬಿಯಾ

ಶಾರುಖ್ ಖಾನ್ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೂ ಅವರಿಗೆ ಇರುವ ಫೋಬಿಯಾ ಕಡಿಮೆ ಆಗಿಲ್ಲ. ಈ ಬಗ್ಗೆ ಅವರು ಸಂದರ್ಶನದಲ್ಲಿ ಅವರು ಮಾತನಾಡಿದ್ದರು.

Shah Rukh Khan: ‘ಅವರು ನನ್ನ ಕೈ ಕತ್ತರಿಸುತ್ತಾರೆ ಎನ್ನುವ ಭಯ ಈಗಲೂ ಇದೆ‘; ಶಾರುಖ್ ಖಾನ್​ಗೆ ಇದೆ ಫೋಬಿಯಾ
ಶಾರುಖ್ ಖಾನ್
TV9 Web
| Edited By: |

Updated on: Apr 23, 2023 | 6:30 AM

Share

ಮುಖ್ಯಾಂಶಗಳು

  • ಶಾರುಖ್ ಖಾನ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಕಿರುತೆರೆ ಮೂಲಕ
  • ಬಾಲಿವುಡ್ ಚಿತ್ರರಂಗವನ್ನು ಅವರು ಆಳುತ್ತಿದ್ದಾರೆ
  • ಕೈ ಕತ್ತರಿಸುತ್ತಾರೆ ಎನ್ನುವ ಭಯ ಅವರಿಗೆ ಈಗಲೂ ಇದೆ

ಶಾರುಖ್ ಖಾನ್ ಅವರು ಬಾಲಿವುಡ್ ಚಿತ್ರರಂಗವನ್ನು ಆಳುತ್ತಿದ್ದಾರೆ. ಅವರ ನಟನೆಯ ‘ಪಠಾಣ್’ ಸಿನಿಮಾ (Pathaan Movie) ಇತ್ತೀಚೆಗೆ ರಿಲೀಸ್ ಆಗಿ ಗೆದ್ದು ಬೀಗಿದೆ. ನಾಲ್ಕು ವರ್ಷಗಳ ಬಳಿಕ ದೊಡ್ಡ ಪರದೆಗೆ ಮರಳಿದ ಅವರು ಸಾಕಷ್ಟು ಸದ್ದು ಮಾಡಿದ್ದಾರೆ. ಶಾರುಖ್ ಖಾನ್ (Shah Rukh Khan) ಜೀರೋದಿಂದ ಹೀರೋ ಆದವರು. ಮೊದಲ ಬಾರಿಗೆ ಮುಂಬೈಗೆ ಬಂದಾಗ ಅವರ ಬಳಿ ಮರಳಿ ಹೋಗಲು ಹಣ ಇರಲಿಲ್ಲ. ಈಗ ಅವರು ಸಾವಿರಾರು ಕೋಟಿ ರೂಪಾಯಿ ಒಡೆಯ. ಶಾರುಖ್ ಖಾನ್ ಇಷ್ಟು ದೊಡ್ಡ ಸ್ಟಾರ್ ಆದರೂ ಅವರಿಗೆ ಒಂದು ಭಯ ಈಗಲೂ ಕಾಡುತ್ತದೆ. ಆ ಫೋಬಿಯಾದಿಂದ ಹೊರ ಬರೋಕೆ ಅವರಿಗೆ ಸಾಧ್ಯವಾಗಲೇ ಇಲ್ಲ.

ಶಾರುಖ್ ಖಾನ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಕಿರುತೆರೆ ಮೂಲಕ. ನಟಿಸಿದ ಮೊದಲ ಧಾರಾವಾಹಿ ‘ಫೌಜಿ’ ಅವರಿಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತು. ನಂತರ ಹಲವು ಧಾರಾವಾಹಿಗಳಲ್ಲಿ ನಟಿಸಿದರು. 1992ರಲ್ಲಿ ಹಿರಿತೆರೆಗೆ ಕಾಲಿಟ್ಟರು. ಅಲ್ಲಿಂದ ಇಲ್ಲಿವರೆಗೆ ಶಾರುಖ್ ಖಾನ್ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೂ ಅವರಿಗೆ ಇರುವ ಫೋಬಿಯಾ ಕಡಿಮೆ ಆಗಿಲ್ಲ. ಈ ಬಗ್ಗೆ ಅವರು ಸಂದರ್ಶನದಲ್ಲಿ ಅವರು ಮಾತನಾಡಿದ್ದರು.

ಶಾರುಖ್ ಖಾನ್ ಅವರ ಐಕಾನಿಕ್ ಸ್ಟೈಲ್ ಒಂದಿದೆ. ಅಪ್ಪುಗೆ ನೀಡುವ ರೀತಿಯಲ್ಲಿ ಕೈ ಮೇಲೆತ್ತುತ್ತಾರೆ. ಅನೇಕ ಸಿನಿಮಾಗಳಲ್ಲಿ ಈ ಸ್ಟೈಲ್​ನ ಅವರು ಮಾಡಿದ್ದಾರೆ. ಆದರೆ, ಇದನ್ನು ಮಾಡೋಕೆ ಅವರಿಗೆ ಭಯ ಇದೆಯಂತೆ. ಅನುಪಮ್ ಖೇರ್ ಶೋನಲ್ಲಿ ಈ ಬಗ್ಗೆ ಶಾರುಖ್ ಮಾತನಾಡಿದ್ದರು.  ‘ನನಗೆ ಕತ್ತಲೆ ಬಗ್ಗೆ ಭಯ ಇಲ್ಲ. ಎತ್ತರದಲ್ಲಿ ನಿಂತರೆ, ಆಳ ನೋಡಿದರೆ ನನಗೆ ಭಯ ಆಗುವುದಿಲ್ಲ. ಆದರೆ, ಕೈ ಮೇಲೆತ್ತಿದಾಗ ಭಯ ಆಗುತ್ತದೆ. ಯಾರಾದರೂ ಅದನ್ನು ಕತ್ತರಿಸಿಬಿಟ್ಟರೆ ಅನಿಸುತ್ತದೆ. ಇದೊಂದು ವಿಚಿತ್ರ ಭಯ. ನನಗೆ ಈಗಲೂ ಅದು ಅತಿಯಾಗಿ ಕಾಡುತ್ತದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಸಾಲಿನಲ್ಲಿ ಸ್ಥಾನ ಪಡೆದ ಶಾರುಖ್ ಖಾನ್ ಹಾಗೂ ರಾಜಮೌಳಿ 

ಶಾರುಖ್ ಖಾನ್ ಅವರು ಸದ್ಯ ‘ಜವಾನ್​’ ಹಾಗೂ ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಜವಾನ್’ ಸಿನಿಮಾಗೆ ಅಟ್ಲೀ ನಿರ್ದೇಶನ ಇದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕೆ ಭರದಿಂದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರಕ್ಕೆ ನಯನತಾರಾ ನಾಯಕಿ. ‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಇದೆ. ಈ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ