AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ತಕ್ಷಣ ನೋಡಿ ಇದು ಶಾರುಖ್​ ಖಾನ್​ ಅಂದುಕೊಳ್ಳಬೇಡಿ; ಈ ವ್ಯಕ್ತಿಯ ಕಥೆ ಬೇರೆಯೇ ಇದೆ

Shah Rukh Khan's look alike: ಶಾರುಖ್​ ಖಾನ್ ಅವರ ಬಗ್ಗೆ ಪ್ರತಿ ದಿನ ಒಂದಿಲ್ಲೊಂದು ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಅಪರೂಪದ ವಿಡಿಯೋಗಳು  ಕೂಡ ವೈರಲ್​ ಆಗುತ್ತವೆ.

Shah Rukh Khan: ತಕ್ಷಣ ನೋಡಿ ಇದು ಶಾರುಖ್​ ಖಾನ್​ ಅಂದುಕೊಳ್ಳಬೇಡಿ; ಈ ವ್ಯಕ್ತಿಯ ಕಥೆ ಬೇರೆಯೇ ಇದೆ
ಸೂರಜ್​ ಕುಮಾರ್​
ಮದನ್​ ಕುಮಾರ್​
|

Updated on: Jun 05, 2023 | 7:55 PM

Share

ನಟ ಶಾರುಖ್​ ಖಾನ್​ (​Shah Rukh Khan) ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ‘ಪಠಾಣ್​’ ಸಿನಿಮಾ ಗೆದ್ದ ಬಳಿಕ ಅವರ ಚಾರ್ಮ್​ ಹೆಚ್ಚಾಗಿದೆ. ಅವರ ಬಗ್ಗೆ ಪ್ರತಿ ದಿನ ಒಂದಿಲ್ಲೊಂದು ಸುದ್ದಿ ಕೇಳಿಬರುತ್ತಲೇ ಇರುತ್ತದೆ. ಹಳೆಯ ವಿಡಿಯೋಗಳು  (​Shah Rukh Khan Video) ಕೂಡ ವೈರಲ್​ ಆಗುತ್ತವೆ. ಅದೇ ರೀತಿ ಈಗ ಒಂದು ವಿಡಿಯೋ ವೈರಲ್​ ಆಗಿದೆ. ಆದರೆ ಅದರಲ್ಲಿ ಇರುವುದು ಶಾರುಖ್​ ಖಾನ್​ ಅಲ್ಲ! ಒಮ್ಮೆಲೇ ನೋಡಿದರೆ ಶಾರುಖ್​ ಖಾನ್​ ರೀತಿ ಕಾಣುವ ಈ ವ್ಯಕ್ತಿಯೇ ಬೇರೆ. ಇವರ ಹೆಸರು ಸೂರಜ್​ ಕುಮಾರ್ (Suraj Kumar)​. ಎಲ್ಲರೂ ಇವರನ್ನು ಚೋಟಾ ಶಾರುಖ್​ ಖಾನ್​ ಎಂದು ಕರೆಯುತ್ತಾರೆ. ಇತ್ತೀಚೆಗೆ ಅವರು ದೆಹಲಿಯಲ್ಲಿ ತಮ್ಮ ಕುಟುಂಬದ ಜೊತೆ ಕಾಣಿಸಿಕೊಂಡಿದ್ದರು. ಆ ವಿಡಿಯೋವನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದನ್ನು ನೋಡಿದ ಎಲ್ಲರೂ ಇದು ಶಾರುಖ್​ ಖಾನ್​​ ಅವರ ಹಳೇ ವಿಡಿಯೋ ಎಂದು ತಿಳಿದುಕೊಂಡಿದ್ದಾರೆ.

ಒಬ್ಬರ ರೀತಿ ಹಲವರು ಇರುತ್ತಾರೆ ಎಂಬುದಕ್ಕೆ ಈಗಾಗಲೇ ಅನೇಕ ಉದಾಹರಣೆಗಳು ಸಿಕ್ಕಿವೆ. ಫೇಮಸ್​ ನಟ-ನಟಿಯರನ್ನೇ ಹೋಲುವಂತಹ ಸಾಮಾನ್ಯ ಜನರು ಸಾಕಷ್ಟು ಮಂದಿ ಇದ್ದಾರೆ. ಅಂಥವರು ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿರುತ್ತಾರೆ. ಸೂರಜ್​ ಕುಮಾರ್​ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಖಾತೆ ಹೊಂದಿದ್ದಾರೆ. ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು 1.6 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಶಾರುಖ್​ ಖಾನ್​ರ ಫೇಮಸ್​ ಹಾಡುಗಳಿಗೆ ರೀಲ್ಸ್​ ಮಾಡಿ ಅವರು ಹಂಚಿಕೊಳ್ಳುತ್ತಾರೆ.

ಇನ್ನು, ಅಸಲಿ ಶಾರುಖ್​ ಖಾನ್​ ಬಗ್ಗೆ ಮಾತಾಡೋದಾದರೆ ಅವರು ‘ಜವಾನ್​’ ಮತ್ತು ‘ಡಂಕಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗಳ ಮೇಲೆ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಜವಾನ್​’ ಸಿನಿಮಾಗೆ ಅಟ್ಲಿ ಕುಮಾರ್​ ನಿರ್ದೇಶನ ಮಾಡುತ್ತಿದ್ದು, ರಾಜ್​ಕುಮಾರ್​ ಹಿರಾನಿ ಅವರ ನಿರ್ದೇಶನದಲ್ಲಿ ‘ಡಂಕಿ’ ಸಿನಿಮಾ ಮೂಡಿಬರುತ್ತಿದೆ. ಶಾರುಖ್​ ಖಾನ್​ ಮಗ ಆರ್ಯನ್ ಖಾನ್ ಅವರು ಹೊಸ ವೆಬ್​ ಸೀರಿಸ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚಿತ್ರರಂಗದ ಬಗ್ಗೆಯೇ ಈ ವೆಬ್ ಸರಣಿ ಸಿದ್ಧಗೊಳ್ಳಲಿದೆ ಇದರಲ್ಲಿ ರಣವೀರ್ ಸಿಂಗ್ ಹಾಗೂ ಶಾರುಖ್ ಖಾನ್ ಅತಿಥಿ ಪಾತ್ರ ಮಾಡುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಈ ಸರಣಿಯಲ್ಲಿ ಸ್ಟಾರ್​ಗಳ ದಂಡೇ ಇರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಶಾರುಖ್ ಖಾನ್ ಮ್ಯಾನೇಜರ್ ಪೂಜಾ ಆಗರ್ಭ ಶ್ರೀಮಂತೆ; ವರ್ಷಕ್ಕೆ ಸಿಗೋ ಸಂಭಾವನೆ ಇಷ್ಟೊಂದಾ?

ಶಾರುಖ್ ಖಾನ್ ಬಾಲಿವುಡ್​ನ ಸೂಪರ್​ಸ್ಟಾರ್​. ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರಿಗೆ ಅಭಿಮಾನಿಗಳ ಬಗ್ಗೆ ವಿಶೇಷ ಪ್ರೀತಿ ಇದೆ. ಇತ್ತೀಚೆಗೆ ಇದಕ್ಕೆ ಹೊಸ ಉದಾಹರಣೆ ಸಿಕ್ಕಿತ್ತು. ಶಾರುಖ್ ಅಭಿಮಾನಿ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರಿಗೆ ಶಾರುಖ್ ವಿಡಿಯೋ ಕಾಲ್ ಮಾಡಿದರು. ಈ ಮೂಲಕ ಅಭಿಮಾನಿಯ ಆಸೆ ಈಡೇರಿಸಿದರು. ಸದ್ಯ ಶಾರುಖ್ ಖಾನ್ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ತೋರಿಸಿರುವ ಪ್ರೀತಿ ಕಂಡು ಶಾರುಖ್ ಖಾನ್ ಖುಷಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್