AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಮೋದಿ ತಾಯಿ ನಿಧನಕ್ಕೆ ಶಾರುಖ್​ ಖಾನ್​ ಸಂತಾಪ; ‘ಪಠಾಣ್’ ಹೀರೋ ಹೇಳಿದ್ದಿಷ್ಟು..

PM Narendra Modi | Heeraben Modi: ಶಾರುಖ್​ ಖಾನ್​ ಮಾತ್ರವಲ್ಲದೇ ಬಾಲಿವುಡ್​ನ ಹಲವು ಸೆಲೆಬ್ರಿಟಿಗಳು ತಮ್ಮ ಸಂತಾಪದ ನುಡಿಗಳನ್ನು ತಿಳಿಸಿದ್ದಾರೆ. ಶಾರುಖ್​ ಅವರ ಪೋಸ್ಟ್​ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Shah Rukh Khan: ಮೋದಿ ತಾಯಿ ನಿಧನಕ್ಕೆ ಶಾರುಖ್​ ಖಾನ್​ ಸಂತಾಪ; ‘ಪಠಾಣ್’ ಹೀರೋ ಹೇಳಿದ್ದಿಷ್ಟು..
ಶಾರುಖ್ ಖಾನ್, ನರೇಂದ್ರ ಮೋದಿ, ಹೀರಾಬೆನ್ ಮೋದಿ
TV9 Web
| Edited By: |

Updated on:Dec 31, 2022 | 7:05 PM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ತಾಯಿ ಹೀರಾಬೆನ್​ ಮೋದಿ ನಿಧನಕ್ಕೆ ದೇಶದ ಅನೇಕ ಸೆಲೆಬ್ರಿಟಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಹಾಗೂ ಜನಸಾಮಾನ್ಯರು ಕೂಡ ಸಂತಾಪ ಸೂಚಿಸಿದ್ದಾರೆ. ಶುಕ್ರವಾರ (ಡಿ.30) ಹೀರಾಬೆನ್​ ಮೋದಿ (Heeraben Modi) ಅವರು ಕೊನೆಯುಸಿರು ಎಳೆದರು. ತಾಯಿಯ ಅಂತ್ಯಕ್ರಿಯೆಯಲ್ಲಿ ಮೋದಿ ಪಾಲ್ಗೊಂಡರು. ಬಳಿಕ ಶನಿವಾರ (ಡಿ.31) ಅವರು ದೆಹಲಿಗೆ ವಾಪಸ್​ ಆಗಿದ್ದಾರೆ. ಈ ಸಂದರ್ಭದಲ್ಲಿ ನಟ ಶಾರುಖ್​ ಖಾನ್​ ಕೂಡ ಸೋಶಿಯಲ್​ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ‘ತಾಯಿಯನ್ನು ಕಳೆದುಕೊಂಡ ನರೇಂದ್ರ ಮೋದಿ ಅವರಿಗೆ ನಮ್ಮ ಸಂತಾಪಗಳು. ಅವರಿಗಾಗಿ ನಮ್ಮ ಕುಟುಂಬ ಪ್ರಾರ್ಥಿಸುತ್ತದೆ. ತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಶಾರುಖ್​ ಖಾನ್ (Shah Rukh Khan)​ ಟ್ವೀಟ್​ ಮಾಡಿದ್ದಾರೆ.

ಈ ಹಿಂದೆ ಒಂದೆರಡು ಬಾರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗುವ ಅವಕಾಶ ಶಾರುಖ್​ ಖಾನ್​ಗೆ ಸಿಕ್ಕಿತ್ತು. 2019ರಲ್ಲಿ ಮಹಾತ್ಮ ಗಾಂಧಿ ಅವರ 150ನೇ ಜಯಂತಿ ಪ್ರಯುಕ್ತ ಬಾಲಿವುಡ್ ಸೆಲೆಬ್ರಿಟಿಗಳನ್ನು ಮೋದಿ ಭೇಟಿ ಮಾಡಿದ್ದರು. ಆಗ ಅವರ ಜೊತೆ ಶಾರುಖ್​ ಖಾನ್​ ಮಾತುಕತೆ ನಡೆಸಿದ್ದರು. ಈ ವರ್ಷ ಮೋದಿ ಜನ್ಮದಿನಕ್ಕೆ ಶಾರುಖ್​ ಅವರು ವಿಶ್​ ಮಾಡಿದ್ದರು. ಈಗ ತಾಯಿಯನ್ನು ಕಳೆದುಕೊಂಡ ಪ್ರಧಾನ ಮಂತ್ರಿಗೆ ಕಿಂಗ್​ ಖಾನ್​ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಇದನ್ನೂ ಓದಿ: Jhoome Jo Pathaan: ‘ಪಠಾಣ್​’ ಚಿತ್ರದ 2ನೇ ಹಾಡಿನಲ್ಲಿ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ ಮಿಂಚಿಂಗ್​

ಶಾರುಖ್​ ಖಾನ್​ ಮಾತ್ರವಲ್ಲದೇ ಬಾಲಿವುಡ್​ನ ಹಲವು ಸೆಲೆಬ್ರಿಟಿಗಳು ತಮ್ಮ ಸಂತಾಪದ ನುಡಿಗಳನ್ನು ತಿಳಿಸಿದ್ದಾರೆ. ಅಕ್ಷಯ್​ ಕುಮಾರ್​, ಅನುಪಮ್​ ಖೇರ್​, ಕಂಗನಾ ರಣಾವತ್​, ವಿವೇಕ್​ ಅಗ್ನಿಹೋತ್ರಿ, ಜಾಕಿ ಶ್ರಾಫ್​, ಸ್ವರಾ ಭಾಸ್ಕರ್​, ಸೋನು ಸೂದ್​ ಸೇರಿದಂತೆ ಅನೇಕರು ಟ್ವೀಟ್​ ಮಾಡಿದ್ದಾರೆ. ಶಾರುಖ್​ ಅವರ ಪೋಸ್ಟ್​ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

‘ಪಠಾಣ್​’ ಬಿಡುಗಡೆಗೆ ಶಾರುಖ್​ ಖಾನ್​ ಸಜ್ಜು:

ನಾಲ್ಕು ವರ್ಷದ ಬಳಿಕ ಶಾರುಖ್​ ಖಾನ್​ ಅವರು ದೊಡ್ಡ ಪರದೆಯಲ್ಲಿ ಅಭಿಮಾನಿಗಳಿಗೆ ದರ್ಶನ ನೀಡಲು ಬರುತ್ತಿದ್ದಾರೆ. ಅವರ ನಟನೆಯ ‘ಪಠಾಣ್​’ ಸಿನಿಮಾ 2023ರ ಜನವರಿ 25ರಂದು ಬಿಡುಗಡೆ ಆಗುತ್ತಿದೆ. ಹೈ ಬಜೆಟ್​ನಲ್ಲಿ ನಿರ್ಮಾಣವಾದ ಈ ಚಿತ್ರ ಮೂಲಕ ಶಾರುಖ್​ ಖಾನ್​ ಅವರು ಗ್ರ್ಯಾಂಡ್​ ಕಮ್​ಬ್ಯಾಕ್​ ಮಾಡಲಿದ್ದಾರೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಚಿತ್ರ ಮೊದಲ ದಿನ ಎಷ್ಟು ಕೋಟಿ ಕಲೆಕ್ಷನ್​ ಮಾಡಲಿದೆ? ಶಾರುಖ್​ ಖಾನ್​ಗೆ ನೇರ ಪ್ರಶ್ನೆ

ಬಿಡುಗಡೆಗೂ ಮುನ್ನ ‘ಪಠಾಣ್​’ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಈ ಚಿತ್ರದ ‘ಬೇಷರಂ ರಂಗ್​..’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿಸಿ ಧರಿಸಿರುವುದನ್ನು ಒಂದು ವರ್ಗದ ನೆಟ್ಟಿಗರು ವಿರೋಧಿಸಿದ್ದಾರೆ. ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂಬ ಅಭಿಯಾನ ಕೂಡ ಸೋಶಿಯಲ್​ ಮೀಡಿಯಾದಲ್ಲಿ ನಡೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:05 pm, Sat, 31 December 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್