AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ‘ಪಠಾಣ್​’ ಚಿತ್ರದಲ್ಲಿ ಹಾಟೆಸ್ಟ್​ ಮತ್ತು ಕೂಲೆಸ್ಟ್​ ದೀಪಿಕಾ; ಪಾತ್ರದ ಬಗ್ಗೆ ಮಾಹಿತಿ ನೀಡಿದ ಸಿದ್ದಾರ್ಥ್​ ಆನಂದ್​

Siddharth Anand | Pathaan Movie: ‘ಭಾರತೀಯ ಚಿತ್ರರಂಗದಲ್ಲಿ ದೀಪಿಕಾ ಪಡುಕೋಣೆ ಅವರು ದೊಡ್ಡ ಸ್ಟಾರ್​ ನಟಿ. ಅವರ ಸ್ಟಾರ್​ಡಮ್​ಗೆ ತಕ್ಕಂತೆಯೇ ಈ ಪಾತ್ರವನ್ನು ಚಿತ್ರಿಸಲಾಗಿದೆ’ ಎಂದಿದ್ದಾರೆ ಸಿದ್ದಾರ್ಥ್​ ಆನಂದ್​.

Deepika Padukone: ‘ಪಠಾಣ್​’ ಚಿತ್ರದಲ್ಲಿ ಹಾಟೆಸ್ಟ್​ ಮತ್ತು ಕೂಲೆಸ್ಟ್​ ದೀಪಿಕಾ; ಪಾತ್ರದ ಬಗ್ಗೆ ಮಾಹಿತಿ ನೀಡಿದ ಸಿದ್ದಾರ್ಥ್​ ಆನಂದ್​
ದೀಪಿಕಾ ಪಡುಕೋಣೆ
TV9 Web
| Updated By: ಮದನ್​ ಕುಮಾರ್​|

Updated on: Nov 13, 2022 | 4:08 PM

Share

ನಟಿ ದೀಪಿಕಾ ಪಡುಕೋಣೆ (Deepika Padukone) ಅವರ ಪ್ರತಿಭೆ ಏನು ಎಂಬುದನ್ನು ಹೊಸದಾಗಿ ಹೇಳಬೇಕಾದ್ದಿಲ್ಲ. ಹಲವು ಸಿನಿಮಾಗಳ ಮೂಲಕ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಈಗ ಅವರು ‘ಪಠಾಣ್’ (Pathaan) ಸಿನಿಮಾದಲ್ಲಿ ನಾಲ್ಕನೇ ಬಾರಿಗೆ ನಟ ಶಾರುಖ್​ ಖಾನ್​ ಜೊತೆ ತೆರೆ ಹಂಚಿಕೊಂಡಿದ್ದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಇದು ಹೈವೋಲ್ಟೇಜ್​ ಸಿನಿಮಾ. ಈ ಚಿತ್ರದಲ್ಲಿ ಶಾರುಖ್​ ಖಾನ್​ ಎದುರು ಜಾನ್​ ಅಬ್ರಾಹಂ ಅವರು ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಾದರೆ ದೀಪಿಕಾ ಪಡುಕೋಣೆ ಅವರು ಪಾತ್ರ ಹೇಗಿರಬಹುದು? ಈ ಪ್ರಶ್ನೆಗೆ ನಿರ್ದೇಶಕ ಸಿದ್ದಾರ್ಥ್​ ಆನಂದ್​ (Siddharth Anand) ಅವರೇ ಉತ್ತರ ನೀಡಿದ್ದಾರೆ. ಈ ಸಿನಿಮಾದಲ್ಲಿ ದೀಪಿಕಾ ಅವರು ಹಾಟೆಸ್ಟ್​ ಮತ್ತು ಕೂಲೆಸ್ಟ್​ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕರು ಹೇಳಿದ್ದಾರೆ.

ಶಾರುಖ್​ ಖಾನ್​ ಜನ್ಮದಿನದ ಪ್ರಯುಕ್ತ ನವೆಂಬರ್​ 2ರಂದು ‘ಪಠಾಣ್​’ ಸಿನಿಮಾದ ಟೀಸರ್​ ರಿಲೀಸ್​ ಮಾಡಲಾಯಿತು. ಅದರಲ್ಲಿ ಶಾರುಖ್​ ಅವರ ಆ್ಯಕ್ಷನ್​ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಅಷ್ಟೇ ಅಲ್ಲದೇ, ದೀಪಿಕಾ ಪಡುಕೋಣೆ ಅವರ ಹಾಟ್​ ಲುಕ್​ ಕೂಡ ಗಮನ ಸೆಳೆದಿದೆ. ಹಾಗಂತ ಈ ಸಿನಿಮಾದಲ್ಲಿ ಅವರು ಒಂದೇ ಶೇಡ್​ನ ಪಾತ್ರವಿಲ್ಲ. ಹಾಟ್ ಆಗಿರುವುದರ ಜೊತೆಗೆ ಅವರು ಕೂಲೆಸ್ಟ್​ ಆಗಿಯೂ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕ ಸಿದ್ದಾರ್ಥ್​ ಆನಂದ್​ ಹೇಳಿರುವುದರಿಂದ ಫ್ಯಾನ್ಸ್​ ಮನದಲ್ಲಿನ ಕೌತುಕ ಡಬಲ್​ ಆಗಿದೆ.

‘ಭಾರತೀಯ ಚಿತ್ರರಂಗದಲ್ಲಿ ದೀಪಿಕಾ ಪಡುಕೋಣೆ ಅವರು ದೊಡ್ಡ ಸ್ಟಾರ್​ ನಟಿ. ಅವರ ಸ್ಟಾರ್​ಡಮ್​ಗೆ ತಕ್ಕಂತೆಯೇ ‘ಪಠಾಣ್​’ ಚಿತ್ರದ ಪಾತ್ರವನ್ನು ಚಿತ್ರಿಸಲಾಗಿದೆ. ಬಾಲಿವುಡ್​ ಇತಿಹಾಸದಲ್ಲಿ ಶಾರುಖ್​ ಖಾನ್​ ಮತ್ತು ದೀಪಿಕಾ ಪಡುಕೋಣೆ ಜೋಡಿಯಾಗಿ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಅವರಿಬ್ಬರ ನಡುವಿನ ಕೆಮಿಸ್ಟ್ರಿ ಉತ್ತಮವಾಗಿದೆ. ಅವರ ಜೋಡಿಯೇ ನಮ್ಮ ‘ಪಠಾಣ್​’ ಚಿತ್ರದಲ್ಲಿನ ಬಹುಮುಖ್ಯ ಆಕರ್ಷಣೆ’ ಎಂದು ಸಿದ್ದಾರ್ಥ್​ ಆನಂದ್​ ಹೇಳಿದ್ದಾರೆ.

ಇದನ್ನೂ ಓದಿ
Image
119 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ರಣವೀರ್​-ದೀಪಿಕಾ; ಇದರ ವಿಶೇಷತೆಗಳೇನು?
Image
Brahmastra: ಮಾಜಿ ಪ್ರೇಮಿಯ ಸಿನಿಮಾದಲ್ಲಿ ದೀಪಿಕಾ ಕದ್ದುಮುಚ್ಚಿ ನಟನೆ? ಝೂಮ್​ ಮಾಡಿ ಸಾಕ್ಷಿ ತೋರಿಸಿದ ನೆಟ್ಟಿಗರು
Image
Deepika Padukone: ಹೈದರಾಬಾದ್​ನಲ್ಲಿ ಶೂಟಿಂಗ್ ಬಿಟ್ಟು ಆಸ್ಪತ್ರೆಗೆ ಓಡಿದ ದೀಪಿಕಾ ಪಡುಕೋಣೆ; ಅಂಥದ್ದೇನಾಯ್ತು?
Image
Cannes 2022: ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ ಮಿಂಚಿದ ದೀಪಿಕಾ; ಇಲ್ಲಿವೆ ಫೋಟೋಗಳು

‘ಪಠಾಣ್​’ ಚಿತ್ರಕ್ಕೆ ‘ಯಶ್ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗುತ್ತಿದೆ ಎಂಬುದಕ್ಕೆ ಟೀಸರ್​​ನಲ್ಲಿ ಸಾಕ್ಷಿ ಸಿಕ್ಕಿದೆ. 2023ರ ಜನವರಿ 25ರಂದು ಈ ಸಿನಿಮಾ ದೊಡ್ಡ ಮಟ್ಟದಲ್ಲಿ ರಿಲೀಸ್​ ಆಗಲಿದೆ. ಹಿಂದಿ ಜೊತೆಗೆ ತಮಿಳು ಮತ್ತು ತೆಲುಗಿಗೂ ಡಬ್​ ಆಗಿ ತೆರೆ ಕಾಣಲಿದೆ. ಶಾರುಖ್​ ಖಾನ್​ ಅವರು 4 ವರ್ಷಗಳ ಬಳಿಕ ದೊಡ್ಡ ಪರದೆಮೇಲೆ ಕಾಣಿಸಿಕೊಳ್ಳುತ್ತಿರುವುದರಿಂದ ‘ಪಠಾಣ್​’ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಮೂಡಿದೆ. ಹಿಂದಿಯಲ್ಲಿ ಈ ಚಿತ್ರದ ಟೀಸರ್​ ಈವರೆಗೂ 35 ಮಿಲಿಯನ್​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ