AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathan Collection: ವಾರ ಪೂರ್ತಿ ಅಬ್ಬರಿಸಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದ ‘ಪಠಾಣ್​’

Shah Rukh Khan | Pathan Box Office Collection: ಈವರೆಗೂ ‘ಪಠಾಣ್​’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ 351 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. 2ನೇ ವೀಕೆಂಡ್​​ನಲ್ಲಿ ಮತ್ತೆ ಹಣದ ಹೊಳೆ ಹರಿಯುವ ಸಾಧ್ಯತೆ ದಟ್ಟವಾಗಿದೆ.

Pathan Collection: ವಾರ ಪೂರ್ತಿ ಅಬ್ಬರಿಸಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದ ‘ಪಠಾಣ್​’
ಶಾರುಖ್ ಖಾನ್
Follow us
ಮದನ್​ ಕುಮಾರ್​
|

Updated on:Feb 03, 2023 | 9:07 PM

2022ರಲ್ಲಿ ಸೊರಗಿದ್ದ ಬಾಲಿವುಡ್​ ಈಗ ಮೈ ಕೊಡವಿ ನಿಂತಿದೆ. ಬಾಕ್ಸ್​ ಆಫೀಸ್​ನಲ್ಲಿ ಹಿಂದಿ ಸಿನಿಮಾಗಳು ಮೋಡಿ ಮಾಡಬಹುದು ಎಂಬುದು ಮತ್ತೆ ಸಾಬೀತಾಗಿದೆ. ಶಾರುಖ್ ಖಾನ್​ ನಟನೆಯ ‘ಪಠಾಣ್​’ (Pathan Movie) ಸಿನಿಮಾಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ವರ್ಷ ಆರಂಭದಲ್ಲೇ ತೆರೆಕಂಡ ಈ ಚಿತ್ರ ಭರ್ಜರಿ ಓಪನಿಂಗ್​ ಪಡೆದುಕೊಂಡಿತು. ಒಂದು ವಾರ ಪೂರ್ತಿ ಅಬ್ಬರಿಸಿರುವ ಈ ಸಿನಿಮಾ ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ 350 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ (Pathan Box Office Collection) ಮಾಡಿದೆ. ಈಗ ಎರಡನೇ ವೀಕೆಂಡ್​ನಲ್ಲೂ ಕೂಡ ಅದೇ ರೀತಿ ಹಣ ಸಂಗ್ರಹ ಆಗುವ ನಿರೀಕ್ಷೆ ಇದೆ. ಒಟ್ಟಿನಲ್ಲಿ ಶಾರುಖ್​ ಖಾನ್​ (Shah Rukh Khan) ಅವರಿಗೆ ‘ಪಠಾಣ್​’ ಸಿನಿಮಾದಿಂದ ಮರುಜೀವ ಬಂದಂತೆ ಆಗಿದೆ.

ಶಾರುಖ್​ ಖಾನ್​, ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ, ಡಿಂಪಲ್​ ಕಪಾಡಿಯಾ, ಅಶುತೋಷ್​ ರಾಣಾ ಮುಂತಾದವರು ನಟಿಸಿದ ‘ಪಠಾಣ್​’ ಸಿನಿಮಾ ಜನವರಿ 25ರಂದು ಅದ್ದೂರಿಯಾಗಿ ರಿಲೀಸ್​ ಆಯಿತು. ಮೊದಲ ದಿನ ಈ ಚಿತ್ರ ಗಳಿಸಿದ್ದು ಬರೋಬ್ಬರಿ 55 ಕೋಟಿ ರೂಪಾಯಿ. 2ನೇ ದಿನ 68 ಕೋಟಿ, 3ನೇ ದಿನ 38 ಕೋಟಿ, 4ನೇ ದಿನ 51.50 ಕೋಟಿ, 5ನೇ ದಿನ 58.50 ಕೋಟಿ, 6ನೇ ದಿನ 25.50 ಕೋಟಿ, 7ನೇ ದಿನ 22 ಕೋಟಿ, 8ನೇ 17.50 ಕೋಟಿ ಹಾಗೂ 9ನೇ ದಿನ 15 ಕೋಟಿ ರೂಪಾಯಿ ಗಳಿಸಿತು. ಇದು ನಿಜಕ್ಕೂ ದೊಡ್ಡ ಸಾಧನೆ.

ಇದನ್ನೂ ಓದಿ: Pathaan Sequel: ಬರಲಿದೆ ‘ಪಠಾಣ್​ 2’; ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ ಶಾರುಖ್​ ಖಾನ್​

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಈವರೆಗೂ ‘ಪಠಾಣ್​’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ 351 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. 2ನೇ ವೀಕೆಂಡ್​​ನಲ್ಲಿ ಮತ್ತೆ ಹಣದ ಹೊಳೆ ಹರಿಯುವ ಸಾಧ್ಯತೆ ದಟ್ಟವಾಗಿದೆ. ಈ ಚಿತ್ರ ಅನಾಯಾಸವಾಗಿ ಇನ್ನೆರಡು ದಿನಗಳಲ್ಲಿ 400 ಕೋಟಿ ರೂಪಾಯಿಯ ಗಡಿ ಮುಟ್ಟಲಿದೆ. ತೆಲುಗು ಮತ್ತು ತಮಿಳು ವರ್ಷನ್​ನಿಂದ ಈ ಚಿತ್ರಕ್ಕೆ ಈವರೆಗೆ 13 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಗೆಲುವಿನ ಬಳಿಕ ಮೊದಲ ಬಾರಿ ಸುದ್ದಿಗೋಷ್ಠಿ ನಡೆಸಿದ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ

ಶಾರುಖ್​ ಖಾನ್​ ಅವರು ದೊಡ್ಡ ಗೆಲುವು ಕಾಣದೇ ಬಹಳ ವರ್ಷಗಳೇ ಆಗಿದ್ದವು. ಅವರ ಬ್ಯಾಕ್​ ಟು ಬ್ಯಾಕ್​ ಚಿತ್ರಗಳು ಸೋಲುತ್ತಿದ್ದವು. ಹಾಗಾಗಿ ಅವರು 4 ವರ್ಷ ಬ್ರೇಕ್​ ತೆಗೆದುಕೊಂಡಿದ್ದರು. ಶಾರುಖ್​ ಖಾನ್​ ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡಲಿ ಎಂಬುದು ಫ್ಯಾನ್ಸ್​ ಬಯಕೆ ಆಗಿತ್ತು. ಅದರಂತೆಯೇ ಆಗಿದೆ. ‘ಪಠಾಣ್​’ ಸಿನಿಮಾ ಪ್ರತಿ ದಿನವೂ ಅಬ್ಬರಿಸುತ್ತಿದೆ. ಈ ಚಿತ್ರ ಅಂತಿಮವಾಗಿ ಎಷ್ಟು ಗಳಿಸಲಿದೆ ಎಂಬುದನ್ನು ತಿಳಿಯುವ ಕೌತುಕ ಸಿನಿಪ್ರಿಯರಿಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:07 pm, Fri, 3 February 23

ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!