AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan 2nd Day Collections: ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಪಠಾಣ್​’ ಅಬ್ಬರ; ಬೈಕಾಟ್ ಎಂದವರು ತತ್ತರ

Pathan Movie 2nd Day Box Office Collection: ‘ಬೈಕಾಟ್ ಪಠಾಣ್​’ ಎಂದು ಒಂದಷ್ಟು ಮಂದಿ ಬೊಬ್ಬೆ ಹೊಡೆದರು. ಆದರೆ, ಸಿನಿಮಾ ಅಬ್ಬರಕ್ಕೆ ಈ ಬೈಕಾಟ್ ಟ್ರೆಂಡ್ ಮೂಲೆಗುಂಪಾಗಿದೆ. ಸಿನಿಮಾ ಬೈಕಾಟ್ ಟ್ರೆಂಡ್​​ನ ಮೆಟ್ಟಿ ನಿಂತು ಕಲೆಕ್ಷನ್ ಮಾಡುತ್ತಿದೆ.

Pathaan 2nd Day Collections: ಎರಡನೇ ದಿನವೂ ಬಾಕ್ಸ್ ಆಫೀಸ್​ನಲ್ಲಿ ‘ಪಠಾಣ್​’ ಅಬ್ಬರ; ಬೈಕಾಟ್ ಎಂದವರು ತತ್ತರ
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
| Edited By: |

Updated on:Jan 27, 2023 | 3:44 PM

Share

‘ಪಠಾಣ್​’ ಸಿನಿಮಾ (Pathan Movie) ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಜನವರಿ 25ಕ್ಕೆ ರಿಲೀಸ್ ಆದ ಈ ಚಿತ್ರ ಶಾರುಖ್ ಖಾನ್​ (Shah Rukh Khan) ವೃತ್ತಿ ಜೀವನದ ಯಶಸ್ವಿ ಸಿನಿಮಾ ಎನಿಸಿಕೊಂಡಿದೆ. ಈ ಚಿತ್ರ ಬುಧವಾರ (ಜನವರಿ 25) ಭಾರತದಲ್ಲಿ ಬರೋಬ್ಬರಿ 55 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ಈಗ ಜನವರಿ 26ರ ಲೆಕ್ಕ ಸಿಕ್ಕಿದೆ. ಈ ಸಿನಿಮಾ ಎರಡನೇ ದಿನವೂ ಅಬ್ಬರಿಸಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಎರಡೇ ದಿನಕ್ಕೆ 120 ಕೋಟಿ ರೂಪಾಯಿ ದಾಟಿದೆ. ಶಾರುಖ್ ಖಾನ್ ಹಾಗೂ ಮಾಸ್ ಸಿನಿಮಾಗಳನ್ನು ಮಾಡಿ ಫೇಮಸ್ ಆದ ಸಿದ್ದಾರ್ಥ್ ಆನಂದ್ ಕೈ ಜೋಡಿಸಿದಾಗಲೇ ಸಿನಿಪ್ರಿಯರಿಗೆ ನಿರೀಕ್ಷೆ ಮೂಡಿತ್ತು. ಈ ನಿರೀಕ್ಷೆಯನ್ನು ‘ಪಠಾಣ್​’ ಸುಳ್ಳು ಮಾಡಿಲ್ಲ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಚಿತ್ರ ಅಬ್ಬರದ ಕಲೆಕ್ಷನ್ ಮಾಡಿದೆ. ಎರಡನೇ ದಿನ ಚಿತ್ರಕ್ಕೆ 68 ಕೋಟಿ ರೂಪಾಯಿ ಹರಿದು ಬಂದಿದೆ. ಈ ಮೂಲಕ ಸಿನಿಮಾದ ಒಟ್ಟಾರೆ ಕಲೆಕ್ಷನ್ 123 ಕೋಟಿ ರೂಪಾಯಿ ದಾಟಿದೆ.

‘ಪಠಾಣ್​’ ಚಿತ್ರದ ‘ಬೇಷರಂ ರಂಗ್​..’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ಬಿಕಿನಿ ಹಾಕಿದ್ದು ವಿವಾದ ಹುಟ್ಟಿಕೊಳ್ಳಲು ಪ್ರಮುಖ ಕಾರಣ ಆಗಿತ್ತು. ಈ ಬೆನ್ನಲ್ಲೇ ‘ಬೈಕಾಟ್ ಪಠಾಣ್​’ ಎಂದು ಒಂದಷ್ಟು ಮಂದಿ ಬೊಬ್ಬೆ ಹೊಡೆದರು. ಆದರೆ, ಸಿನಿಮಾ ಅಬ್ಬರಕ್ಕೆ ಈ ಬೈಕಾಟ್ ಟ್ರೆಂಡ್ ಮೂಲೆಗುಂಪಾಗಿದೆ. ಸಿನಿಮಾ ಬೈಕಾಟ್ ಟ್ರೆಂಡ್​​ನ ಮೆಟ್ಟಿ ನಿಂತು ಕಲೆಕ್ಷನ್ ಮಾಡುತ್ತಿದೆ.

ಇದನ್ನೂ ಓದಿ
Image
Pathan Trailer: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್
Image
Pathan Trailer: ಶಾರುಖ್ ಖಾನ್ ಚಿತ್ರಕ್ಕೆ ಮತ್ತೊಂದು ಪೆಟ್ಟು; ಆನ್​​ಲೈನ್​ನಲ್ಲಿ ‘ಪಠಾಣ್​’ ಚಿತ್ರದ ಟ್ರೇಲರ್ ಲೀಕ್​?
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು

ಶಾರುಖ್ ಖಾನ್​ಗೆ ಗೆಲುವು ಸಿಗದೆ ಹಲವು ವರ್ಷಗಳೇ ಕಳೆದಿದ್ದವು. ಈ ಕಾರಣಕ್ಕೆ ನಾಲ್ಕು ವರ್ಷ ಅವರು ನಟನೆಯಿಂದ ದೂರ ಉಳಿದಿದ್ದರು. ಅವರು ಒಳ್ಳೆಯ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕಾದಿದ್ದರು. ಅದೇ ರೀತಿ ಅವರು ದೊಡ್ಡ ಮಟ್ಟದಲ್ಲೇ ಕಂಬ್ಯಾಕ್ ಮಾಡಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ:  ‘ಪಠಾಣ್​’ ಚಿತ್ರಕ್ಕಾಗಿ ಶಾರುಖ್ ಖಾನ್ ಪಡೆದ ಸಂಭಾವನೆ ಇಷ್ಟೇನಾ? ಅಕ್ಷಯ್​ ಕುಮಾರ್​​ಗಿಂತ ಕಡಿಮೆ  

ಚಿತ್ರದ ಕಲೆಕ್ಷನ್ ಹೀಗೆಯೇ ಮುಂದುವರಿದರೆ ಇನ್ನು ಕೆಲವೇ ದಿನಗಳಲ್ಲಿ ‘ಪಠಾಣ್’ ಸಿನಿಮಾ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಶನಿವಾರ (ಜನವರಿ 28) ಹಾಗೂ ಭಾನುವಾರ (ಜನವರಿ 29) ವೀಕೆಂಡ್ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಾರೆ. ಅದು ಸಿನಿಮಾಗೆ ವರದಾನವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:39 pm, Fri, 27 January 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ