AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ವೀಕೆಂಡ್​​ ಕಲೆಕ್ಷನ್​ನಲ್ಲಿ ‘ಕೆಜಿಎಫ್ 2’ ಚಿತ್ರವನ್ನು ಹಿಂದಿಕ್ಕಲಿದೆ ‘ಪಠಾಣ್​’

‘ಕೆಜಿಎಫ್ 2’ ಸಿನಿಮಾ ಕಳೆದ ಏಪ್ರಿಲ್ 14ರಂದು ರಿಲೀಸ್ ಆಗಿತ್ತು. ಈ ಚಿತ್ರದ ಹಿಂದಿ ವರ್ಷನ್​ ನಾಲ್ಕು ದಿನಗಳಲ್ಲಿ (ಮೊದಲ ವೀಕೆಂಡ್​) 190 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಪಠಾಣ್​’ ಚಿತ್ರ ಎರಡು ದಿನಕ್ಕೆ 123 ಕೋಟಿ ಗಳಿಕೆ ಮಾಡಿದೆ.

ಮೊದಲ ವೀಕೆಂಡ್​​ ಕಲೆಕ್ಷನ್​ನಲ್ಲಿ ‘ಕೆಜಿಎಫ್ 2’ ಚಿತ್ರವನ್ನು ಹಿಂದಿಕ್ಕಲಿದೆ ‘ಪಠಾಣ್​’
ಶಾರುಖ್ ಖಾನ್-ಯಶ್
ರಾಜೇಶ್ ದುಗ್ಗುಮನೆ
|

Updated on:Jan 28, 2023 | 10:07 AM

Share

‘ಪಠಾಣ್​’ ಸಿನಿಮಾ (Pathan Movie Collection) ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಕೇವಲ ಎರಡೇ ದಿನಕ್ಕೆ ಈ ಚಿತ್ರ 123 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ರೀತಿಯ ಅಬ್ಬರದ ಕಲೆಕ್ಷನ್​ನ ಯಾವ ಚಿತ್ರವೂ ಮಾಡಿರಲಿಲ್ಲ. ಶಾರುಖ್ ಚಿತ್ರ ಒಂದೊಂದೇ ದಾಖಲೆಗಳನ್ನು ಪುಡಿ ಮಾಡುತ್ತಿದೆ. ಮೊದಲ ಹಾಗೂ ಎರಡನೇ ದಿನದ ಕಲೆಕ್ಷನ್ ವಿಚಾರದಲ್ಲಿ ‘ಕೆಜಿಎಫ್ 2’ (KGF Chapter 2) ಹಿಂದಿ ವರ್ಷನ್​ ಮಾಡಿದ ದಾಖಲೆಯನ್ನು ‘508071,507901,507836,508231​’ ಸಿನಿಮಾ ಮುರಿದಿತ್ತು. ಈಗ ಮೊದಲ ವೀಕೆಂಡ್ ಕಲೆಕ್ಷನ್​ನಲ್ಲೂ ‘ಕೆಜಿಎಫ್ 2’ (ಹಿಂದಿ) ದಾಖಲೆಯನ್ನು ಪಠಾಣ್ ಪುಡಿ ಮಾಡುವ ಸೂಚನೆ ಸಿಕ್ಕಿದೆ.

‘ಕೆಜಿಎಫ್ 2’ ಸಿನಿಮಾ ಕಳೆದ ಏಪ್ರಿಲ್ 14ರಂದು ರಿಲೀಸ್ ಆಗಿತ್ತು. ಈ ಚಿತ್ರದ ಹಿಂದಿ ವರ್ಷನ್​ ನಾಲ್ಕು ದಿನಗಳಲ್ಲಿ (ಮೊದಲ ವೀಕೆಂಡ್​) 190 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಪಠಾಣ್​’ ಚಿತ್ರ ಎರಡು ದಿನಕ್ಕೆ 123 ಕೋಟಿ ಗಳಿಕೆ ಮಾಡಿದೆ. ಜನವರಿ 27ಕ್ಕೆ ಈ ಸಿನಿಮಾ 30 ಕೋಟಿ ರೂ. ಬಾಚಿಕೊಂಡಿದೆ ಎನ್ನಲಾಗುತ್ತಿದೆ. ಈ ಮೂಲಕ ಚಿತ್ರದ ಕಲೆಕ್ಷನ್ 150 ಕೋಟಿ ರೂಪಾಯಿ ದಾಟಿದೆ. ಶನಿವಾರ (ಜನವರಿ 28) ಹಾಗೂ ಭಾನುವಾರ (ಜನವರಿ 29) ಕೂಡ ಸಿನಿಮಾ ಅಬ್ಬರಿಸುವ ಸೂಚನೆ ಸಿಕ್ಕಿದೆ. ಈ ಮೂಲಕ ಮೊದಲ ವಾರಾಂತ್ಯಕ್ಕೆ ಸಿನಿಮಾದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿ ದಾಟುವ ಸಾಧ್ಯತೆ ಇದೆ. ಈ ಮೂಲಕ ‘ಕೆಜಿಎಫ್ 2’ ಹಿಂದಿಯಲ್ಲಿ ಮಾಡಿದ ದಾಖಲೆಯನ್ನು ‘ಪಠಾಣ್​’ ಬ್ರೇಕ್ ಮಾಡಲಿದೆ.

ಶಾರುಖ್ ಖಾನ್ ಅವರು ‘ಜೀರೋ’ ಸೋಲಿನ ನಂತರದಲ್ಲಿ ನಾಲ್ಕು ವರ್ಷ ಬ್ರೇಕ್ ಪಡೆದಿದ್ದರು. ಈಗ ಅವರು ದೊಡ್ಡ ಮಟ್ಟದಲ್ಲಿ ಕಂಬ್ಯಾಕ್ ಮಾಡಿದ್ದಾರೆ. ‘ಪಠಾಣ್​’ ಚಿತ್ರಕ್ಕೆ ಶಾರುಖ್ ಖಾನ್ ಅಬ್ಬರದ ಪ್ರಚಾರ ಮಾಡಿದ್ದರು. ಸಿದ್ದಾರ್ಥ್ ಆನಂದ್ ಅವರ ನಿರ್ದೇಶನ ಕೈ ಹಿಡಿದಿದೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: Shah Rukh Khan: ಎರಡು ದಿನಕ್ಕೆ ವಿಶ್ವಾದ್ಯಂತ 219 ಕೋಟಿ ರೂ. ಗಳಿಸಿದ ‘ಪಠಾಣ್​’; ಶಾರುಖ್​ ಚಿತ್ರಕ್ಕೆ ಜಯಭೇರಿ

ಶಾರುಖ್ ಖಾನ್ ಇನ್ನೂ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಜವಾನ್​’ ಚಿತ್ರಕ್ಕೆ ಅಟ್ಲೀ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಪ್ರಗತಿಯಲ್ಲಿದೆ. ರಾಜ್​ಕುಮಾರ್ ಹಿರಾನಿ ಅವರ ‘ಡಂಕಿ’ ಚಿತ್ರದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿದೆ. ಈ ಎರಡೂ ಚಿತ್ರಗಳು ಈ ವರ್ಷವೇ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:55 am, Sat, 28 January 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು