AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathan Trailer: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್

ಜಾನ್ ಅಬ್ರಾಹಂ ‘ಪಠಾಣ್​’ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರುಖ್ ರಾ ಏಜೆಂಟ್​ ಆಗಿ ಮಿಂಚಿದ್ದಾರೆ. ಟ್ರೇಲರ್​ನ ಉದ್ದಕ್ಕೂ ಸಾಕಷ್ಟು ಆ್ಯಕ್ಷನ್​ಗಳಿವೆ.

Pathan Trailer: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್
‘ಪಠಾಣ್​’ ಚಿತ್ರದಲ್ಲಿ ಶಾರುಖ್ ಖಾನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 10, 2023 | 11:57 AM

Share

ಶಾರುಖ್ ಖಾನ್ (Shah Rukh Khan) ನಟನೆಯ ಸಿನಿಮಾ ಎಂದರೆ ಒಂದಷ್ಟು ಆ್ಯಕ್ಷನ್ ಇರಲೇಬೇಕು. ‘ಡಾನ್​’, ‘ಡಾನ್​ 2’ ಸೇರಿ ಶಾರುಖ್ ನಟನೆಯ ಹಲವು ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇತ್ತು. ಈಗ ‘ಪಠಾಣ್​’ (Pathan Movie) ಚಿತ್ರದ ಮೂಲಕ ಶಾರುಖ್ ಖಾನ್ ಮತ್ತೆ ಆ್ಯಕ್ಷನ್ ಅವತಾರದೊಂದಿಗೆ ಮರಳುತ್ತಿದ್ದಾರೆ. ಇಂದು (ಜನವರಿ 10) ಬೆಳಗ್ಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಶಾರುಖ್ ಖಾನ್ ಅವರು 2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಬ್ರೇಕ್ ಪಡೆದುಕೊಂಡಿದ್ದರು. ನಾಲ್ಕು ವರ್ಷದ ಬಳಿಕ ಅವರು ‘ಪಠಾಣ್​’ ಮೂಲಕ ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ. ಅವರು ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಆರಂಭದಲ್ಲಿ ‘ಪಠಾಣ್​ ವನವಾಸ ಮುಗಿಸಿ ಬರುವ ಟೈಮ್ ಆಯಿತು’ ಎಂಬ ಡೈಲಾಗ್ ಬರುತ್ತದೆ. ಈ ಸಾಲು ಶಾರುಖ್​​ಗೆ ಹೊಂದುತ್ತದೆ ಎಂದು ಫ್ಯಾನ್ಸ್ ಹೇಳಿದ್ದಾರೆ.

ಜಾನ್ ಅಬ್ರಾಹಂ ‘ಪಠಾಣ್​’ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರುಖ್ ರಾ ಏಜೆಂಟ್​ ಆಗಿ ಮಿಂಚಿದ್ದಾರೆ. ಟ್ರೇಲರ್​ನ ಉದ್ದಕ್ಕೂ ಸಾಕಷ್ಟು ಆ್ಯಕ್ಷನ್​ಗಳಿವೆ. ಶಾರುಖ್ ಹಾಗೂ ಜಾನ್ ಅಬ್ರಾಹಂ ಮುಖಾಮುಖಿ ಆಗಿ ಫೈಟ್ ಮಾಡಿದ್ದಾರೆ. ಕಾರ್ ಚೇಸಿಂಗ್ ದೃಶ್ಯಗಳು ಮೈನವೇರೇಳಿಸಿದೆ. ಸಿದ್ದಾರ್ಥ್ ಆನಂದ್ ಅವರು ‘ವಾರ್​’ ಅಂತಹ ಆ್ಯಕ್ಷನ್ ಸಿನಿಮಾ ಮಾಡಿ ಫೇಮಸ್ ಆದವರು. ಅವರು ‘ಪಠಾಣ್​’ ಚಿತ್ರ ಮಾಡಿದ್ದಾರೆ. ಇಲ್ಲಿಯೂ ಭರಪೂರ ಆ್ಯಕ್ಷನ್ ದೃಶ್ಯ ಇಟ್ಟಿದ್ದಾರೆ.

ಜಾನ್ ಅಬ್ರಾಹಂ ಔಟ್​ಪುಟ್ ಎಕ್ಸ್ ಹೆಸರಿನ ಉಗ್ರ ಸಂಘಟನೆ ನಡೆಸುತ್ತಿರುತ್ತಾರೆ. ಕಾಂಟ್ರ್ಯಾಕ್ಟ್ ತೆಗೆದುಕೊಂಡು ಈ ಸಂಘಟನೆ ದಾಳಿ ಮಾಡುತ್ತಿರುತ್ತದೆ. ಈ ಸಂಘಟನೆ ಭಾರತವನ್ನು ಟಾರ್ಗೆಟ್ ಮಾಡುತ್ತದೆ. ಈ ದಾಳಿಯನ್ನು ತಪ್ಪಿಸಲು ಶಾರುಖ್ ಹೋರಾಡುತ್ತಾರೆ. ಇದು ಸಿನಿಮಾದ ಕಥೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

ಜನವರಿ 25ರಂದು ‘ಪಠಾಣ್​’ ರಿಲೀಸ್ ಆಗಲಿದೆ. ರಿಲೀಸ್ ಆದ ಕೆಲವೇ ನಿಮಿಷಕ್ಕೆ ಟ್ರೇಲರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಇದು ಚಿತ್ರದ ಮೇಲಿರುವ ನಿರೀಕ್ಷೆ ಎಷ್ಟು ಎಂಬುದನ್ನು ತೋರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 am, Tue, 10 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ