AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathan Trailer: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್

ಜಾನ್ ಅಬ್ರಾಹಂ ‘ಪಠಾಣ್​’ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರುಖ್ ರಾ ಏಜೆಂಟ್​ ಆಗಿ ಮಿಂಚಿದ್ದಾರೆ. ಟ್ರೇಲರ್​ನ ಉದ್ದಕ್ಕೂ ಸಾಕಷ್ಟು ಆ್ಯಕ್ಷನ್​ಗಳಿವೆ.

Pathan Trailer: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್
‘ಪಠಾಣ್​’ ಚಿತ್ರದಲ್ಲಿ ಶಾರುಖ್ ಖಾನ್
TV9 Web
| Edited By: |

Updated on:Jan 10, 2023 | 11:57 AM

Share

ಶಾರುಖ್ ಖಾನ್ (Shah Rukh Khan) ನಟನೆಯ ಸಿನಿಮಾ ಎಂದರೆ ಒಂದಷ್ಟು ಆ್ಯಕ್ಷನ್ ಇರಲೇಬೇಕು. ‘ಡಾನ್​’, ‘ಡಾನ್​ 2’ ಸೇರಿ ಶಾರುಖ್ ನಟನೆಯ ಹಲವು ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇತ್ತು. ಈಗ ‘ಪಠಾಣ್​’ (Pathan Movie) ಚಿತ್ರದ ಮೂಲಕ ಶಾರುಖ್ ಖಾನ್ ಮತ್ತೆ ಆ್ಯಕ್ಷನ್ ಅವತಾರದೊಂದಿಗೆ ಮರಳುತ್ತಿದ್ದಾರೆ. ಇಂದು (ಜನವರಿ 10) ಬೆಳಗ್ಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಶಾರುಖ್ ಖಾನ್ ಅವರು 2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಬ್ರೇಕ್ ಪಡೆದುಕೊಂಡಿದ್ದರು. ನಾಲ್ಕು ವರ್ಷದ ಬಳಿಕ ಅವರು ‘ಪಠಾಣ್​’ ಮೂಲಕ ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ. ಅವರು ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಆರಂಭದಲ್ಲಿ ‘ಪಠಾಣ್​ ವನವಾಸ ಮುಗಿಸಿ ಬರುವ ಟೈಮ್ ಆಯಿತು’ ಎಂಬ ಡೈಲಾಗ್ ಬರುತ್ತದೆ. ಈ ಸಾಲು ಶಾರುಖ್​​ಗೆ ಹೊಂದುತ್ತದೆ ಎಂದು ಫ್ಯಾನ್ಸ್ ಹೇಳಿದ್ದಾರೆ.

ಜಾನ್ ಅಬ್ರಾಹಂ ‘ಪಠಾಣ್​’ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರುಖ್ ರಾ ಏಜೆಂಟ್​ ಆಗಿ ಮಿಂಚಿದ್ದಾರೆ. ಟ್ರೇಲರ್​ನ ಉದ್ದಕ್ಕೂ ಸಾಕಷ್ಟು ಆ್ಯಕ್ಷನ್​ಗಳಿವೆ. ಶಾರುಖ್ ಹಾಗೂ ಜಾನ್ ಅಬ್ರಾಹಂ ಮುಖಾಮುಖಿ ಆಗಿ ಫೈಟ್ ಮಾಡಿದ್ದಾರೆ. ಕಾರ್ ಚೇಸಿಂಗ್ ದೃಶ್ಯಗಳು ಮೈನವೇರೇಳಿಸಿದೆ. ಸಿದ್ದಾರ್ಥ್ ಆನಂದ್ ಅವರು ‘ವಾರ್​’ ಅಂತಹ ಆ್ಯಕ್ಷನ್ ಸಿನಿಮಾ ಮಾಡಿ ಫೇಮಸ್ ಆದವರು. ಅವರು ‘ಪಠಾಣ್​’ ಚಿತ್ರ ಮಾಡಿದ್ದಾರೆ. ಇಲ್ಲಿಯೂ ಭರಪೂರ ಆ್ಯಕ್ಷನ್ ದೃಶ್ಯ ಇಟ್ಟಿದ್ದಾರೆ.

ಜಾನ್ ಅಬ್ರಾಹಂ ಔಟ್​ಪುಟ್ ಎಕ್ಸ್ ಹೆಸರಿನ ಉಗ್ರ ಸಂಘಟನೆ ನಡೆಸುತ್ತಿರುತ್ತಾರೆ. ಕಾಂಟ್ರ್ಯಾಕ್ಟ್ ತೆಗೆದುಕೊಂಡು ಈ ಸಂಘಟನೆ ದಾಳಿ ಮಾಡುತ್ತಿರುತ್ತದೆ. ಈ ಸಂಘಟನೆ ಭಾರತವನ್ನು ಟಾರ್ಗೆಟ್ ಮಾಡುತ್ತದೆ. ಈ ದಾಳಿಯನ್ನು ತಪ್ಪಿಸಲು ಶಾರುಖ್ ಹೋರಾಡುತ್ತಾರೆ. ಇದು ಸಿನಿಮಾದ ಕಥೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

ಜನವರಿ 25ರಂದು ‘ಪಠಾಣ್​’ ರಿಲೀಸ್ ಆಗಲಿದೆ. ರಿಲೀಸ್ ಆದ ಕೆಲವೇ ನಿಮಿಷಕ್ಕೆ ಟ್ರೇಲರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಇದು ಚಿತ್ರದ ಮೇಲಿರುವ ನಿರೀಕ್ಷೆ ಎಷ್ಟು ಎಂಬುದನ್ನು ತೋರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 am, Tue, 10 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್