AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathan Trailer: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್

ಜಾನ್ ಅಬ್ರಾಹಂ ‘ಪಠಾಣ್​’ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರುಖ್ ರಾ ಏಜೆಂಟ್​ ಆಗಿ ಮಿಂಚಿದ್ದಾರೆ. ಟ್ರೇಲರ್​ನ ಉದ್ದಕ್ಕೂ ಸಾಕಷ್ಟು ಆ್ಯಕ್ಷನ್​ಗಳಿವೆ.

Pathan Trailer: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್
‘ಪಠಾಣ್​’ ಚಿತ್ರದಲ್ಲಿ ಶಾರುಖ್ ಖಾನ್
TV9 Web
| Edited By: |

Updated on:Jan 10, 2023 | 11:57 AM

Share

ಶಾರುಖ್ ಖಾನ್ (Shah Rukh Khan) ನಟನೆಯ ಸಿನಿಮಾ ಎಂದರೆ ಒಂದಷ್ಟು ಆ್ಯಕ್ಷನ್ ಇರಲೇಬೇಕು. ‘ಡಾನ್​’, ‘ಡಾನ್​ 2’ ಸೇರಿ ಶಾರುಖ್ ನಟನೆಯ ಹಲವು ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇತ್ತು. ಈಗ ‘ಪಠಾಣ್​’ (Pathan Movie) ಚಿತ್ರದ ಮೂಲಕ ಶಾರುಖ್ ಖಾನ್ ಮತ್ತೆ ಆ್ಯಕ್ಷನ್ ಅವತಾರದೊಂದಿಗೆ ಮರಳುತ್ತಿದ್ದಾರೆ. ಇಂದು (ಜನವರಿ 10) ಬೆಳಗ್ಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಶಾರುಖ್ ಖಾನ್ ಅವರು 2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಬ್ರೇಕ್ ಪಡೆದುಕೊಂಡಿದ್ದರು. ನಾಲ್ಕು ವರ್ಷದ ಬಳಿಕ ಅವರು ‘ಪಠಾಣ್​’ ಮೂಲಕ ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ. ಅವರು ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಆರಂಭದಲ್ಲಿ ‘ಪಠಾಣ್​ ವನವಾಸ ಮುಗಿಸಿ ಬರುವ ಟೈಮ್ ಆಯಿತು’ ಎಂಬ ಡೈಲಾಗ್ ಬರುತ್ತದೆ. ಈ ಸಾಲು ಶಾರುಖ್​​ಗೆ ಹೊಂದುತ್ತದೆ ಎಂದು ಫ್ಯಾನ್ಸ್ ಹೇಳಿದ್ದಾರೆ.

ಜಾನ್ ಅಬ್ರಾಹಂ ‘ಪಠಾಣ್​’ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರುಖ್ ರಾ ಏಜೆಂಟ್​ ಆಗಿ ಮಿಂಚಿದ್ದಾರೆ. ಟ್ರೇಲರ್​ನ ಉದ್ದಕ್ಕೂ ಸಾಕಷ್ಟು ಆ್ಯಕ್ಷನ್​ಗಳಿವೆ. ಶಾರುಖ್ ಹಾಗೂ ಜಾನ್ ಅಬ್ರಾಹಂ ಮುಖಾಮುಖಿ ಆಗಿ ಫೈಟ್ ಮಾಡಿದ್ದಾರೆ. ಕಾರ್ ಚೇಸಿಂಗ್ ದೃಶ್ಯಗಳು ಮೈನವೇರೇಳಿಸಿದೆ. ಸಿದ್ದಾರ್ಥ್ ಆನಂದ್ ಅವರು ‘ವಾರ್​’ ಅಂತಹ ಆ್ಯಕ್ಷನ್ ಸಿನಿಮಾ ಮಾಡಿ ಫೇಮಸ್ ಆದವರು. ಅವರು ‘ಪಠಾಣ್​’ ಚಿತ್ರ ಮಾಡಿದ್ದಾರೆ. ಇಲ್ಲಿಯೂ ಭರಪೂರ ಆ್ಯಕ್ಷನ್ ದೃಶ್ಯ ಇಟ್ಟಿದ್ದಾರೆ.

ಜಾನ್ ಅಬ್ರಾಹಂ ಔಟ್​ಪುಟ್ ಎಕ್ಸ್ ಹೆಸರಿನ ಉಗ್ರ ಸಂಘಟನೆ ನಡೆಸುತ್ತಿರುತ್ತಾರೆ. ಕಾಂಟ್ರ್ಯಾಕ್ಟ್ ತೆಗೆದುಕೊಂಡು ಈ ಸಂಘಟನೆ ದಾಳಿ ಮಾಡುತ್ತಿರುತ್ತದೆ. ಈ ಸಂಘಟನೆ ಭಾರತವನ್ನು ಟಾರ್ಗೆಟ್ ಮಾಡುತ್ತದೆ. ಈ ದಾಳಿಯನ್ನು ತಪ್ಪಿಸಲು ಶಾರುಖ್ ಹೋರಾಡುತ್ತಾರೆ. ಇದು ಸಿನಿಮಾದ ಕಥೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

ಜನವರಿ 25ರಂದು ‘ಪಠಾಣ್​’ ರಿಲೀಸ್ ಆಗಲಿದೆ. ರಿಲೀಸ್ ಆದ ಕೆಲವೇ ನಿಮಿಷಕ್ಕೆ ಟ್ರೇಲರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಇದು ಚಿತ್ರದ ಮೇಲಿರುವ ನಿರೀಕ್ಷೆ ಎಷ್ಟು ಎಂಬುದನ್ನು ತೋರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 am, Tue, 10 January 23

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!