AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗದಿದ್ರೂ ಗಂಡ-ಹೆಂಡ್ತಿ ಥರ ಪವಿತ್ರವಾಗಿತ್ತು ಆ ಸಂಬಂಧ; ಸಿದ್ದಾರ್ಥ್​-ಶೆಹನಾಜ್​ ಬಗ್ಗೆ ಹೊರಬಿತ್ತು ಸುದ್ದಿ

‘ಶೆಹನಾಜ್ ಗಿಲ್​​ ಮತ್ತು ಸಿದ್ದಾರ್ಥ್​ ಶುಕ್ಲಾ ಸಂಬಂಧವು ಗಂಡ-ಹೆಂಡತಿ ಸಂಬಂಧಕ್ಕಿಂತ ಏನೂ ಕಡಿಮೆ ಆಗಿರಲಿಲ್ಲ. ಅದನ್ನು ಬರೀ ಸ್ನೇಹ ಎನ್ನಲು ಸಾಧ್ಯವಿಲ್ಲ’ ಎಂದು ಬಿಗ್​ ಬಾಸ್​ ಮಾಜಿ ಸ್ಪರ್ಧಿ ಪವಿತ್ರ ಪೂನಿಯಾ ಹೇಳಿದ್ದಾರೆ.

ಮದುವೆ ಆಗದಿದ್ರೂ ಗಂಡ-ಹೆಂಡ್ತಿ ಥರ ಪವಿತ್ರವಾಗಿತ್ತು ಆ ಸಂಬಂಧ; ಸಿದ್ದಾರ್ಥ್​-ಶೆಹನಾಜ್​ ಬಗ್ಗೆ ಹೊರಬಿತ್ತು ಸುದ್ದಿ
ಸಿದ್ದಾರ್ಥ್​ ಶುಕ್ಲಾ, ಶೆಹನಾಜ್​ ಗಿಲ್
TV9 Web
| Edited By: |

Updated on: Sep 06, 2021 | 12:18 PM

Share

ನಟ ಸಿದ್ದಾರ್ಥ್​ ಶುಕ್ಲಾ ಅವರು ಅಕಾಲಿಕ ಮರಣ ಹೊಂದಿರುವುದು ಅಭಿಮಾನಿಗಳಿಗೆ ನಂಬಲಾಗುತ್ತಿಲ್ಲ. ಸೆ.2ರಂದು ಅವರು ಹೃದಯಾಘಾತದಿಂದ ಮೃತಪಟ್ಟರು. ಸಿದ್ದಾರ್ಥ್​ ಜೊತೆ ಆಪ್ತವಾಗಿದ್ದ ಅವರ ಪ್ರೇಯಸಿ ಶೆಹನಾಜ್ ಗಿಲ್​ ಈಗ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತೆ ಅವರು ದುಃಖದಲ್ಲಿದ್ದಾರೆ. ಸಿದ್ದಾರ್ಥ್​ ಮತ್ತು ಶೆಹನಾಜ್​ ಗಿಲ್​ ಊಹಿಸಲಾಗದಷ್ಟು ತುಂಬ ಆಪ್ತವಾಗಿದ್ದರು ಎಂಬ ವಿಚಾರ ಈಗ ಬಹಿರಂಗ ಆಗಿದೆ. ಆ ಬಗ್ಗೆ ಬಿಗ್​ ಬಾಸ್​ ಮಾಜಿ ಸ್ಪರ್ಧಿ ಪವಿತ್ರ ಪೂನಿಯಾ ಅವರು ಬಾಯಿ ಬಿಟ್ಟಿದ್ದಾರೆ. ಸಿದ್ದಾರ್ಥ್​ ನಿಧನದ ಬಗ್ಗೆ ಮಾತನಾಡಿರುವ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಬಿಗ್​ ಬಾಸ್​ 14ನೇ ಸೀಸನ್​ನಲ್ಲಿ ಪವಿತ್ರ ಪೂನಿಯಾ ಭಾಗವಹಿಸಿದ್ದರು. ಆ ಸೀಸನ್​ನಲ್ಲಿ ಸಿದ್ದಾರ್ಥ್​ ಅವರು ಸೀನಿಯರ್​ ಆಗಿ ಪಾಲ್ಗೊಂಡಿದ್ದರು. ಸಿದ್ದಾರ್ಥ್​ ಮತ್ತು ಶೆಹನಾಜ್​ ನಡುವಿನ ಆಪ್ತತೆ ಹೇಗಿತ್ತು ಎಂಬುದನ್ನು ಪವಿತ್ರ ಅವರು ಹತ್ತಿರದಿಂದ ಕಂಡಿದ್ದಾರೆ. ‘ಇಂದು ಶೆಹನಾಜ್​ ಅವರನ್ನು ನೋಡಿದರೆ ಜೀವ ನಡುಗುತ್ತದೆ. ಸಿದ್ದಾರ್ಥ್​ ಮತ್ತು ಶೆಹನಾಜ್​ ರೀತಿ ಪ್ರೇಮಿಗಳಾಗಿರಬೇಕು ಅಂತ ಅನೇಕರು ಬಯಸುತ್ತಾರೆ. ಅವರ ಸಂಬಂಧ ಅಷ್ಟು ಚೆನ್ನಾಗಿತ್ತು’ ಎಂದು ಪವಿತ್ರ ಹೇಳಿದ್ದಾರೆ.

‘ಶೆಹನಾಜ್​ ಮತ್ತು ಸಿದ್ದಾರ್ಥ್​ ಸಂಬಂಧವು ಗಂಡ-ಹೆಂಡತಿ ಸಂಬಂಧಕ್ಕಿಂತ ಏನೂ ಕಡಿಮೆ ಆಗಿರಲಿಲ್ಲ. ಅದನ್ನು ಬರೀ ಸ್ನೇಹ ಎನ್ನಲು ಸಾಧ್ಯವಿಲ್ಲ. ಗರ್ಲ್​ಫ್ರೆಂಡ್​-ಭಾಯ್​ಫ್ರೆಂಡ್​ ಸಂಬಂಧ ಎನ್ನಲೂ ಆಗುವುದಿಲ್ಲ. ರೋಮಿಯೋ-ಜೂಲಿಯಟ್​ ರೀತಿ ಶೆಹನಾಜ್​-ಸಿದ್ದಾರ್ಥ್​ ಸಂಬಂಧವನ್ನು ಕೂಡ ಜನರು ಕೊನೆಯವರೆಗೆ ನೆನಪಿಟ್ಟುಕೊಳ್ಳುತ್ತಾರೆ’ ಎಂದು ಪವಿತ್ರ ಹೇಳಿದ್ದಾರೆ.

ಸಿದ್ದಾರ್ಥ್​ ನಿಧನದ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಕೆಲವರು ಸೆಲೆಬ್ರಿಟಿಗಳು ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಒಂದಷ್ಟು ವಿವರಗಳು ಹೊರಬಂದಿವೆ. ಮೂಲಗಳ ಪ್ರಕಾರ, ಬುಧವಾರ (ಸೆ.1) ರಾತ್ರಿ 9.30ಕ್ಕೆ ಸಿದ್ದಾರ್ಥ್​ ಶುಕ್ಲಾ ಅವರು ಮನೆಗೆ ಬಂದಿದ್ದರು. ಆಗ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ತಾಯಿ ಮತ್ತು ಗೆಳತಿ ಶೆಹನಾಜ್​ ಗಿಲ್​ ಅವರು ನಿಂಬು ಪಾನಿ ಮತ್ತು ಐಸ್​ ಕ್ರೀಮ್ ನೀಡಿದರು. ಬಳಿಕ ವಿಶ್ರಾಂತಿ ಪಡೆದುಕೊಳ್ಳುವಂತೆ ಹೇಳಿದರು ಎಂಬ ಮಾಹಿತಿ ಕೇಳಿಬಂದಿದೆ.

ಎಷ್ಟು ಸಮಯ ಕಳೆದರೂ ಸಿದ್ದಾರ್ಥ್​ಗೆ ನಿದ್ದೆ ಬರಲಿಲ್ಲ. ಹಾಗಾಗಿ ತಮ್ಮ ಜೊತೆಯೇ ಇರುವಂತೆ ಗೆಳತಿ ಶೆಹನಾಜ್​ಗೆ ಅವರು ಕೇಳಿಕೊಂಡರು. ಮಧ್ಯ ರಾತ್ರಿ 1.30ರ ಸುಮಾರಿಗೆ ಶೆಹನಾಜ್​ ಅವರ ಮಡಿಲ ಮೇಲೆ ಸಿದ್ದಾರ್ಥ್​ ನಿದ್ರಿಸಿದರು. ಬಳಿಕ ಅವರನ್ನು ಪಕ್ಕಕ್ಕೆ ಸರಿಸಿ ಶೆಹನಾಜ್​ ಕೂಡ ಮಲಗಲು ತೆರಳಿದರು. ಬೆಳಗ್ಗೆ 7.30ರ ಸುಮಾರಿಗೆ ಶೆಹನಾಜ್​ಗೆ ಎಚ್ಚರವಾಗಿ ನೋಡಿದಾಗ ಸಿದ್ದಾರ್ಥ್​ ರಾತ್ರಿ ನಿದ್ರಿಸುತ್ತಿದ್ದ ಭಂಗಿಯಲ್ಲೇ ಮಲಗಿದ್ದರು. ಯಾವುದೇ ರೀತಿ ಚಲನೆ ಇಲ್ಲದಿರುವುದು ಗಮನಿಸಿದಾಗ ಅವರು ಮೃತರಾಗಿರುವುದು ತಿಳಿಯಿತು ಎನ್ನಲಾಗಿದೆ. ಆದರೆ ಈ ಬಗ್ಗೆ ಶೆಹನಾಜ್​ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

Sidharth Shukla: ಸಿದ್ದಾರ್ಥ್​ ಶುಕ್ಲಾ ಸಾವಿನ ಸಮಯದ ಬಗ್ಗೆ ಮೂಡಿದೆ ಶಂಕೆ; ಹಿಂದೂಸ್ತಾನಿ ಭಾವು ಹೇಳಿದ ಇನ್ನೊಂದು ಕಥೆ

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?