AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗದಿದ್ರೂ ಗಂಡ-ಹೆಂಡ್ತಿ ಥರ ಪವಿತ್ರವಾಗಿತ್ತು ಆ ಸಂಬಂಧ; ಸಿದ್ದಾರ್ಥ್​-ಶೆಹನಾಜ್​ ಬಗ್ಗೆ ಹೊರಬಿತ್ತು ಸುದ್ದಿ

‘ಶೆಹನಾಜ್ ಗಿಲ್​​ ಮತ್ತು ಸಿದ್ದಾರ್ಥ್​ ಶುಕ್ಲಾ ಸಂಬಂಧವು ಗಂಡ-ಹೆಂಡತಿ ಸಂಬಂಧಕ್ಕಿಂತ ಏನೂ ಕಡಿಮೆ ಆಗಿರಲಿಲ್ಲ. ಅದನ್ನು ಬರೀ ಸ್ನೇಹ ಎನ್ನಲು ಸಾಧ್ಯವಿಲ್ಲ’ ಎಂದು ಬಿಗ್​ ಬಾಸ್​ ಮಾಜಿ ಸ್ಪರ್ಧಿ ಪವಿತ್ರ ಪೂನಿಯಾ ಹೇಳಿದ್ದಾರೆ.

ಮದುವೆ ಆಗದಿದ್ರೂ ಗಂಡ-ಹೆಂಡ್ತಿ ಥರ ಪವಿತ್ರವಾಗಿತ್ತು ಆ ಸಂಬಂಧ; ಸಿದ್ದಾರ್ಥ್​-ಶೆಹನಾಜ್​ ಬಗ್ಗೆ ಹೊರಬಿತ್ತು ಸುದ್ದಿ
ಸಿದ್ದಾರ್ಥ್​ ಶುಕ್ಲಾ, ಶೆಹನಾಜ್​ ಗಿಲ್
TV9 Web
| Edited By: |

Updated on: Sep 06, 2021 | 12:18 PM

Share

ನಟ ಸಿದ್ದಾರ್ಥ್​ ಶುಕ್ಲಾ ಅವರು ಅಕಾಲಿಕ ಮರಣ ಹೊಂದಿರುವುದು ಅಭಿಮಾನಿಗಳಿಗೆ ನಂಬಲಾಗುತ್ತಿಲ್ಲ. ಸೆ.2ರಂದು ಅವರು ಹೃದಯಾಘಾತದಿಂದ ಮೃತಪಟ್ಟರು. ಸಿದ್ದಾರ್ಥ್​ ಜೊತೆ ಆಪ್ತವಾಗಿದ್ದ ಅವರ ಪ್ರೇಯಸಿ ಶೆಹನಾಜ್ ಗಿಲ್​ ಈಗ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತೆ ಅವರು ದುಃಖದಲ್ಲಿದ್ದಾರೆ. ಸಿದ್ದಾರ್ಥ್​ ಮತ್ತು ಶೆಹನಾಜ್​ ಗಿಲ್​ ಊಹಿಸಲಾಗದಷ್ಟು ತುಂಬ ಆಪ್ತವಾಗಿದ್ದರು ಎಂಬ ವಿಚಾರ ಈಗ ಬಹಿರಂಗ ಆಗಿದೆ. ಆ ಬಗ್ಗೆ ಬಿಗ್​ ಬಾಸ್​ ಮಾಜಿ ಸ್ಪರ್ಧಿ ಪವಿತ್ರ ಪೂನಿಯಾ ಅವರು ಬಾಯಿ ಬಿಟ್ಟಿದ್ದಾರೆ. ಸಿದ್ದಾರ್ಥ್​ ನಿಧನದ ಬಗ್ಗೆ ಮಾತನಾಡಿರುವ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಬಿಗ್​ ಬಾಸ್​ 14ನೇ ಸೀಸನ್​ನಲ್ಲಿ ಪವಿತ್ರ ಪೂನಿಯಾ ಭಾಗವಹಿಸಿದ್ದರು. ಆ ಸೀಸನ್​ನಲ್ಲಿ ಸಿದ್ದಾರ್ಥ್​ ಅವರು ಸೀನಿಯರ್​ ಆಗಿ ಪಾಲ್ಗೊಂಡಿದ್ದರು. ಸಿದ್ದಾರ್ಥ್​ ಮತ್ತು ಶೆಹನಾಜ್​ ನಡುವಿನ ಆಪ್ತತೆ ಹೇಗಿತ್ತು ಎಂಬುದನ್ನು ಪವಿತ್ರ ಅವರು ಹತ್ತಿರದಿಂದ ಕಂಡಿದ್ದಾರೆ. ‘ಇಂದು ಶೆಹನಾಜ್​ ಅವರನ್ನು ನೋಡಿದರೆ ಜೀವ ನಡುಗುತ್ತದೆ. ಸಿದ್ದಾರ್ಥ್​ ಮತ್ತು ಶೆಹನಾಜ್​ ರೀತಿ ಪ್ರೇಮಿಗಳಾಗಿರಬೇಕು ಅಂತ ಅನೇಕರು ಬಯಸುತ್ತಾರೆ. ಅವರ ಸಂಬಂಧ ಅಷ್ಟು ಚೆನ್ನಾಗಿತ್ತು’ ಎಂದು ಪವಿತ್ರ ಹೇಳಿದ್ದಾರೆ.

‘ಶೆಹನಾಜ್​ ಮತ್ತು ಸಿದ್ದಾರ್ಥ್​ ಸಂಬಂಧವು ಗಂಡ-ಹೆಂಡತಿ ಸಂಬಂಧಕ್ಕಿಂತ ಏನೂ ಕಡಿಮೆ ಆಗಿರಲಿಲ್ಲ. ಅದನ್ನು ಬರೀ ಸ್ನೇಹ ಎನ್ನಲು ಸಾಧ್ಯವಿಲ್ಲ. ಗರ್ಲ್​ಫ್ರೆಂಡ್​-ಭಾಯ್​ಫ್ರೆಂಡ್​ ಸಂಬಂಧ ಎನ್ನಲೂ ಆಗುವುದಿಲ್ಲ. ರೋಮಿಯೋ-ಜೂಲಿಯಟ್​ ರೀತಿ ಶೆಹನಾಜ್​-ಸಿದ್ದಾರ್ಥ್​ ಸಂಬಂಧವನ್ನು ಕೂಡ ಜನರು ಕೊನೆಯವರೆಗೆ ನೆನಪಿಟ್ಟುಕೊಳ್ಳುತ್ತಾರೆ’ ಎಂದು ಪವಿತ್ರ ಹೇಳಿದ್ದಾರೆ.

ಸಿದ್ದಾರ್ಥ್​ ನಿಧನದ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಲು ಕೆಲವರು ಸೆಲೆಬ್ರಿಟಿಗಳು ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಒಂದಷ್ಟು ವಿವರಗಳು ಹೊರಬಂದಿವೆ. ಮೂಲಗಳ ಪ್ರಕಾರ, ಬುಧವಾರ (ಸೆ.1) ರಾತ್ರಿ 9.30ಕ್ಕೆ ಸಿದ್ದಾರ್ಥ್​ ಶುಕ್ಲಾ ಅವರು ಮನೆಗೆ ಬಂದಿದ್ದರು. ಆಗ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ತಾಯಿ ಮತ್ತು ಗೆಳತಿ ಶೆಹನಾಜ್​ ಗಿಲ್​ ಅವರು ನಿಂಬು ಪಾನಿ ಮತ್ತು ಐಸ್​ ಕ್ರೀಮ್ ನೀಡಿದರು. ಬಳಿಕ ವಿಶ್ರಾಂತಿ ಪಡೆದುಕೊಳ್ಳುವಂತೆ ಹೇಳಿದರು ಎಂಬ ಮಾಹಿತಿ ಕೇಳಿಬಂದಿದೆ.

ಎಷ್ಟು ಸಮಯ ಕಳೆದರೂ ಸಿದ್ದಾರ್ಥ್​ಗೆ ನಿದ್ದೆ ಬರಲಿಲ್ಲ. ಹಾಗಾಗಿ ತಮ್ಮ ಜೊತೆಯೇ ಇರುವಂತೆ ಗೆಳತಿ ಶೆಹನಾಜ್​ಗೆ ಅವರು ಕೇಳಿಕೊಂಡರು. ಮಧ್ಯ ರಾತ್ರಿ 1.30ರ ಸುಮಾರಿಗೆ ಶೆಹನಾಜ್​ ಅವರ ಮಡಿಲ ಮೇಲೆ ಸಿದ್ದಾರ್ಥ್​ ನಿದ್ರಿಸಿದರು. ಬಳಿಕ ಅವರನ್ನು ಪಕ್ಕಕ್ಕೆ ಸರಿಸಿ ಶೆಹನಾಜ್​ ಕೂಡ ಮಲಗಲು ತೆರಳಿದರು. ಬೆಳಗ್ಗೆ 7.30ರ ಸುಮಾರಿಗೆ ಶೆಹನಾಜ್​ಗೆ ಎಚ್ಚರವಾಗಿ ನೋಡಿದಾಗ ಸಿದ್ದಾರ್ಥ್​ ರಾತ್ರಿ ನಿದ್ರಿಸುತ್ತಿದ್ದ ಭಂಗಿಯಲ್ಲೇ ಮಲಗಿದ್ದರು. ಯಾವುದೇ ರೀತಿ ಚಲನೆ ಇಲ್ಲದಿರುವುದು ಗಮನಿಸಿದಾಗ ಅವರು ಮೃತರಾಗಿರುವುದು ತಿಳಿಯಿತು ಎನ್ನಲಾಗಿದೆ. ಆದರೆ ಈ ಬಗ್ಗೆ ಶೆಹನಾಜ್​ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

Sidharth Shukla: ಸಿದ್ದಾರ್ಥ್​ ಶುಕ್ಲಾ ಸಾವಿನ ಸಮಯದ ಬಗ್ಗೆ ಮೂಡಿದೆ ಶಂಕೆ; ಹಿಂದೂಸ್ತಾನಿ ಭಾವು ಹೇಳಿದ ಇನ್ನೊಂದು ಕಥೆ

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ