AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಹೀರೋಗಳಿಂದ ದೇಶಭಕ್ತಿ ನಿರೀಕ್ಷಿಸಬೇಡಿ: ಗರಂ ಆದ ಪವನ್ ಕಲ್ಯಾಣ್

ಯಾವುದೇ ಮುಲಾಜಿಲ್ಲದೇ ಬಾಲಿವುಡ್ ಹೀರೋಗಳನ್ನು ಪವನ್ ಕಲ್ಯಾಣ್ ಅವರು ಟೀಕಿಸಿದ್ದಾರೆ. ‘ಅವರು ಮನರಂಜನೆ ನೀಡುವವರು ಮಾತ್ರ. ನಿಜವಾದ ಹೀರೋಗಳಲ್ಲ’ ಎಂದು ಹೇಳಿದ್ದಾರೆ. ಹಿಂದಿ ಚಿತ್ರರಂಗದ ನಟರಿಂದ ದೇಶಭಕ್ತಿಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಪವನ್ ಕಲ್ಯಾಣ್ ಗುಡುಗಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ವಿವರ..

ಬಾಲಿವುಡ್ ಹೀರೋಗಳಿಂದ ದೇಶಭಕ್ತಿ ನಿರೀಕ್ಷಿಸಬೇಡಿ: ಗರಂ ಆದ ಪವನ್ ಕಲ್ಯಾಣ್
Pawan Kalyan
ಮದನ್​ ಕುಮಾರ್​
|

Updated on: May 18, 2025 | 1:10 PM

Share

ಟಾಲಿವುಡ್ ನಟ, ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರು ಹಿಂದಿ ಚಿತ್ರರಂಗದ ಹೀರೋಗಳ ಬಗ್ಗೆ ಗರಂ ಆಗಿ ಮಾತನಾಡಿದ್ದಾರೆ. ವಿಜಯವಾಡದಲ್ಲಿ ತಿರಂಗ ಯಾತ್ರೆಯಲ್ಲಿ ಭಾಗಿಯಾದ ಅವರು ಬಾಲಿವುಡ್ (Bollywood) ನಟರ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಅವರು ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ. ದೇಶಭಕ್ತಿಯ ವಿಚಾರದಲ್ಲಿ ಬಾಲಿವುಡ್ ಹೀರೋಗಳು ಮಾದರಿ ಅಲ್ಲ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ. ‘ಆಪರೇಷನ್ ಸಿಂದೂರ್’ (Operation Sindoor) ಬಗ್ಗೆ ಬಿ-ಟೌನ್ ನಟರು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದನ್ನು ಉಲ್ಲೇಖಿಸಿ ಪವನ್ ಕಲ್ಯಾಣ್ ಈ ರೀತಿ ಮಾತನಾಡಿದ್ದಾರೆ.

‘ಬಾಲಿವುಡ್ ಸ್ಟಾರ್​ ನಟರು ಆಪರೇಷನ್ ಸಿಂದೂರ್ ಬಗ್ಗೆ ಒಂದೇ ಒಂದು ಮಾತನ್ನೂ ಹೇಳಲಿಲ್ಲ. ಅವರಿಂದ ದೇಶಭಕ್ತಿ ನಿರೀಕ್ಷಿಸಬೇಡಿ. ಅವರು ನಮ್ಮ ದೇಶವನ್ನು ನಡೆಸುವುದಿಲ್ಲ. ಅವರು ಕೇವಲ ಮನರಂಜನೆ ನೀಡುವವರು ಮಾತ್ರ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮುರಳಿ ನಾಯಕ್ ಅವರಂತಹ ಹುತಾತ್ಮರು ಮಾತ್ರ ನಿಜವಾದ ದೇಶಭಕ್ತರು. ಅಂತಹ ಹೀರೋಗಳಿಂದ ನಾವು ಸ್ಫೂರ್ತಿ ಪಡೆಯಬೇಕು’ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.

ಭಾರತದ ಒಳಗೆ ನಡೆಯುವ ಭಯೋತ್ಪಾದಕ ಚಟುವಟಿಕೆಗಳಿಗೆ ಪಾಕಿಸ್ತಾನ ನೇರವಾಗಿ ಬೆಂಬಲ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಆ ಬಗ್ಗೆಯೂ ಪವನ್ ಕಲ್ಯಾಣ್ ಅವರು ಮಾತಾಡಿದ್ದಾರೆ. ‘ಕೊಯಮತ್ತೂರ್ ಮತ್ತು ಹೈದರಾಬಾದ್​ನಲ್ಲಿ ಹಲವು ವರ್ಷಗಳ ಹಿಂದೆ ಬಾಂಬ್ ಬ್ಲಾಸ್ಟ್ ಆಗಿದ್ದರ ಹಿಂದೆ ಪಾಕಿಸ್ತಾನದ ಕೈವಾಡ ಇತ್ತು. ಈಗ ಆಪರೇಷನ್ ಸಿಂದೂರ್ ಮೂಲಕ ಭಾರತದ ಸೇನೆಯು ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಿದೆ. ಈ ಸಂದರ್ಭದಲ್ಲಿ ಇಡೀ ದೇಶ ಒಗ್ಗಟ್ಟಿನಿಂದ ನಮ್ಮ ಸೈನ್ಯದ ಜೊತೆ ನಿಲ್ಲಬೇಕು’ ಎಂದಿದ್ದಾರೆ ಪವನ್ ಕಲ್ಯಾಣ್.

ಇದನ್ನೂ ಓದಿ
Image
ಅಗ್ನಿ ಅವಘಡದ ಬಳಿಕ ಪವನ್ ಕಲ್ಯಾಣ್ ಮಗನ ಸ್ಥಿತಿ ಹೇಗಿದೆ? ಇಲ್ಲಿದೆ ಮಾಹಿತಿ
Image
ಸಮಸ್ಯೆ ಗಂಭೀರ: ಮಗನ ಆರೋಗ್ಯದ ಬಗ್ಗೆ ಪವನ್ ಕಲ್ಯಾಣ್ ಮಾತು
Image
ಶಾಲೆಯಲ್ಲಿ ಬೆಂಕಿ ಅವಘಡ, ಪವನ್ ಕಲ್ಯಾಣ್ ಪುತ್ರನಿಗೆ ತೀವ್ರ ಗಾಯ
Image
ಪವನ್​ ಕಲ್ಯಾಣ್​ ಚಿತ್ರವನ್ನು ತನ್ನ ರಕ್ತದಲ್ಲಿ ಬಿಡಿಸಿದ ಕಟ್ಟಾಭಿಮಾನಿ

ಪಹಲ್ಗಾಮ್​ನಲ್ಲಿ ಪಾಕ್ ಉಗ್ರರು ನಡೆಸಿದ ದಾಳಿಗೆ ಭಾರತದ ಅನೇಕರು ಮೃತರಾದರು. ಅದಕ್ಕೆ ಪ್ರತಿಯಾಗಿ ಭಾರತ ‘ಆಪರೇಷನ್ ಸಿಂದೂರ್’ ಹೆಸರಿನಲ್ಲಿ ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತು. ಈ ಘಟನೆ ಬಗ್ಗೆ ಬಾಲಿವುಡ್​ನ ಹಲವರು ಮಾತನಾಡಲೇ ಇಲ್ಲ. ಟೀಕೆ ಕೇಳಿಬಂದ ಬಳಿಕ ಕೆಲವು ಹೀರೋಗಳು ತಡವಾಗಿ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಸಿನಿಮಾಗೆ ಬಹಿಷ್ಕಾರದ ಭಯ; ರಾಷ್ಟ್ರ ಧ್ವಜದ ಡಿಪಿ ಹಾಕಿದ ಆಮಿರ್ ಖಾನ್ ನಿರ್ಮಾಣ ಸಂಸ್ಥೆ

ಪಹಲ್ಗಾಮ್ ಉಗ್ರರ ದಾಳಿ ಹಾಗೂ ಆಪರೇಷನ್ ಸಿಂದೂರ್ ಬಗ್ಗೆ ಮೌನ ವಹಿಸಿದ ಹೀರೋಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗಿದೆ. ಅಂತಹ ಹೀರೀಗಳ ಸಿನಿಮಾಗಳನ್ನು ಬಹಿಷ್ಕಾರ ಮಾಡಬೇಕು ಎಂಬ ಒತ್ತಾಯ ಕೂಡ ಕೇಳಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ