AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇರ್ಫಾನ್ ಪ್ರೀತಿಸುತ್ತಿದ್ದೆವು, ಗೌತಮ್ ಗಂಭೀರ್ ನನ್ನ ಪ್ರೀತಿಸುತ್ತಿದ್ದ: ನಟಿ ಪಾಯಲ್

Payal Ghosh: ಕನ್ನಡದಲ್ಲಿಯೂ ನಟಿಸಿರುವ ಬಾಲಿವುಡ್ ನಟಿ ಪಾಯಲ್ ಘೋಷ್, ತಾವು ಹಾಗೂ ಇರ್ಫಾಣ್ ಪಠಾಣ್ ಐದು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ. ಆ ಸಮಯದಲ್ಲಿ ಗೌತಮ್ ಗಂಭೀರ್ ನನ್ನನ್ನು ಪ್ರೀತಿಸುತ್ತಿದ್ದ ಎಂದು ಸಹ ಹೇಳಿದ್ದಾರೆ.

ನಾನು ಇರ್ಫಾನ್ ಪ್ರೀತಿಸುತ್ತಿದ್ದೆವು, ಗೌತಮ್ ಗಂಭೀರ್ ನನ್ನ ಪ್ರೀತಿಸುತ್ತಿದ್ದ: ನಟಿ ಪಾಯಲ್
ಪಾಯಲ್ ಘೋಷ್
ಮಂಜುನಾಥ ಸಿ.
|

Updated on: Dec 01, 2023 | 6:41 PM

Share

ಇತ್ತೀಚೆಗಷ್ಟೆ, ನಾನು ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು (Mohammad Shami) ಮದುವೆಯಾಗಲು ತಯಾರಿದ್ದೇನೆ ಎಂದು ಹೇಳಿಕೆ ನೀಡಿದ್ದ ನಟಿ ಪಾಯಲ್ ಘೋಷ್ (Payal Ghosh), ಇದೀಗ ಇರ್ಫಾನ್ ಪಠಾಣ್, ಗೌತಮ್ ಗಂಭೀರ್ ಅವರುಗಳ ಬಗ್ಗೆ ಮಾತನಾಡಿದ್ದಾರೆ. ತನ್ನ ಹಾಗೂ ಇರ್ಫಾನ್ ಪಠಾಣ್ ರ ಸೆಲ್ಫಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪಾಯಲ್ ಘೋಷ್, ನಾನು ಹಾಗೂ ಇರ್ಫಾನ್ ಪಠಾಣ್ ಐದು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದೆವು, ನಾನು ಇರ್ಫಾನ್ ಅನ್ನು ಪ್ರೀತಿಸುತ್ತಿದ್ದ ಸಮಯದಲ್ಲಿ ಗೌತಮ್ ಗಂಭೀರ್ ನನ್ನನ್ನು ಪ್ರಿತಿಸುತ್ತಿದ್ದ, ಪದೇ ಪದೇ ನನಗೆ ಫೋನ್ ಕರೆಗಳನ್ನು ಮಾಡುತ್ತಿದ್ದ ಎಂದಿದ್ದಾರೆ.

‘‘2011 ರಿಂದ ಐದು ವರ್ಷಗಳ ಕಾಲ ನಾನೂ ಹಾಗೂ ಇರ್ಫಾನ್ ಪಠಾಣ್ ಪರಸ್ಪರ ಪ್ರೀತಿಸುತ್ತಿದ್ದೆವು. ಆ ಸಮಯದಲ್ಲಿ ಗೌತಮ್ ಗಂಭೀರ್ ಹಾಗೂ ಅಕ್ಷಯ್ ಕುಮಾರ್ ಸಹ ನನ್ನ ಬೆನ್ನ ಹಿಂದೆ ಬಿದ್ದಿದ್ದರು. ಆದರೆ ನಾನು ಇರ್ಫಾನ್ ಪಠಾಣ್ ಮೇಲೆ ಬಹಳ ಪ್ರೀತಿಯಿತ್ತು, ಅವರನ್ನು ಬಿಟ್ಟು ಬೇರೆ ಯಾರನ್ನೂ ನಾನು ನೋಡಲಿಲ್ಲ. ಗೌತಮ್ ಗಂಭೀರ್ ಪ್ರತಿಬಾರಿ ನನಗೆ ಫೋನ್ ಮಾಡಿದಾಗಲೂ ಆ ಮಿಸ್​ಕಾಲ್​ಗಳನ್ನೆಲ್ಲ ನಾನು ಇರ್ಫಾನ್ ಪಠಾಣ್​ಗೆ ತೋರಿಸುತ್ತಿದ್ದೆ. ಇರ್ಫಾನ್​ಗೂ ಇದು ಬೇಸರ ತಂದಿತ್ತು. ಈ ಬಗ್ಗೆ ಅವರ ಸಹೋದರ ಯೂಸಫ್ ಪಠಾಣ್ ಬಳಿಯೂ ಅವರು ಮಾತನಾಡಿದ್ದರು’’ ಎಂದಿದ್ದಾರೆ ಪಾಯಲ್ ಘೋಷ್.

ಇದನ್ನೂ ಓದಿ:Payal Ghosh: ‘ದೊಡ್ಡ ಸಿನಿಮಾ ಚಾನ್ಸ್​ ಸಿಗಬೇಕು ಅಂದ್ರೆ ಅವರ ಜೊತೆ ಮಲಗಬೇಕು’: ನಟಿ ಪಾಯಲ್​ ಘೋಷ್​ ಶಾಕಿಂಗ್​ ಹೇಳಿಕೆ

‘‘ಈ ವಿಷಯ ಹಾರ್ದಿಕ್ ಪಾಂಡ್ಯಾ ಹಾಗೂ ಕೃನಾಲ್ ಪಾಂಡ್ಯಾ ಅವರುಗಳಿಗೆ ಸಹ ಗೊತ್ತು. ಅವರು ಪುಣೆಯಲ್ಲಿ ರಣಜಿ ಪಂದ್ಯ ಆಡುವಾಗ ನಾನು ಅಲ್ಲಿಗೆ ಹೋಗಿದ್ದೆ. ಆಗ ನನ್ನ ಎದುರೇ ಇರ್ಫಾನ್ ಪಠಾಣ್ ಈ ವಿಷಯವನ್ನು ಪಾಂಡ್ಯಾ ಸಹೋದರರಿಗೆ ಹೇಳಿದ್ದರು. ಆದರೆ ನಾನೂ ಹಾಗೂ ಇರ್ಫಾನ್ ಪಠಾಣ್ 2016ರ ವಿಶ್ವಕಪ್ ಸಮಯದಲ್ಲಿ ಬ್ರೇಕ್ ಅಪ್ ಮಾಡಿಕೊಂಡೆವು. ಬ್ರೇಕ್​ಅಪ್ ಇಂದಾಗಿ ನನ್ನ ಆರೋಗ್ಯವೇ ಹದಗೆಟ್ಟಿತು. ನಾನು ಖಿನ್ನತೆಗೆ ಗುರಿಯಾದೆ, ಕೆಲವು ವರ್ಷಗಳ ಕಾಲ ನನಗೆ ಕೆಲಸ ಮಾಡಲು ಸಹ ಆಗಲಿಲ್ಲ’’ ಎಂದರು.

‘‘ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಸಹ ನನ್ನ ಹಿಂದೆ ಬಿದ್ದಿದ್ದರು. ಆದರೆ ಎಂದೂ ಸಹ ಅವರು ನನ್ನೊಟ್ಟಿಗೆ ಕೆಟ್ಟದಾಗಿ ನಡೆದುಕೊಳ್ಳಲಿಲ್ಲ. ಅವರೊಬ್ಬ ಜಂಟಲ್​ಮ್ಯಾನ್, ನಾನು ಅವರನ್ನು ಬಹಳ ಗೌರವಿಸುತ್ತೀನಿ’’ ಎಂದಿದ್ದಾರೆ ಪಾಯಲ್ ಘೋಷ್. ನಟಿ ಪಾಯಲ್ ಘೋಷ್ ಇಂಥಹಾ ವಿವಾದಾತ್ಮಕ ಹೇಳಿಕೆಗಳನ್ನು ಆಗಾಗ್ಗೆ ನೀಡುತ್ತಲೇ ಇರುತ್ತಾರೆ. ಈ ಹಿಂದೆ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಹಿಂಸಾಚಾರದ ದೂರು ದಾಖಲಿಸಿದ್ದರು, ಆದರೆ ಅನುರಾಗ್ ಅದನ್ನೆಲ್ಲ ತಳ್ಳಿ ಹಾಕಿದ್ದಲ್ಲದೆ ಸೂಕ್ತ ಸಾಕ್ಷ್ಯಗಳನ್ನು ಪೊಲೀಸರಿಗೆ ಒದಗಿಸಿದ್ದರು. ನಟಿ ರೀಚಾ ಚಡ್ಡಾ ಬಗ್ಗೆಯೂ ವಿವಾದಾತ್ಮಕ ಹೇಳಿಕೆ ನೀಡಿದ್ದರು, ರೀಚಾ ಚಡ್ಡಾ ಮಾನನಷ್ಟ ಮೊಕದ್ದಮೆ ದಾಖಲಿಸಿದಾಗ ಬೇಷರತ್ ಕ್ಷಮೆ ಯಾಚಿಸಿದರು. ಪಾಯಲ್ ಘೋಷ್ ತೆಲುಗು, ಕನ್ನಡ, ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ವರ್ಷಧಾರೆ’ ಹೆಸರಿನ ಸಿನಿಮಾದಲ್ಲಿ ಪಾಯಲ್ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?