ಶಾರುಖ್​ ಪುತ್ರ ಆರ್ಯನ್​ ಖಾನ್​ ನೋಡಲು ಮುಗಿಬಿದ್ದ ಜನ; ಅಬ್ಬಬ್ಬಾ ಎಂಥ ಕ್ರೇಜ್​

ಶಾರುಖ್​ ಖಾನ್​ ರೀತಿ ಆರ್ಯನ್​ ಖಾನ್​ ಅವರು ಹೀರೋ ಆಗುವ ಆಸಕ್ತಿ ತೋರಿಸಿಲ್ಲ. ನಿರ್ದೇಶಕನಾಗಿ ಗುರುತಿಸಿಕೊಳ್ಳಲು ಅವರು ಮುಂದಾಗಿದ್ದಾರೆ. ಪಾರ್ಟಿಗೆ ಬಂದ ಆರ್ಯನ್​ ಖಾನ್​ ಅವರನ್ನು ನೋಡಲು ಫ್ಯಾನ್ಸ್​ ಮುಗಿಬಿದ್ದಿದ್ದಾರೆ. ಅವರ ಫೋಟೋ ಕ್ಲಿಕ್ಕಿಸಲು ಬಂದ ಓರ್ವ ಫೋಟೋಗ್ರಾಫರ್​ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ವೈರಲ್​ ಆಗಿದೆ.

ಶಾರುಖ್​ ಪುತ್ರ ಆರ್ಯನ್​ ಖಾನ್​ ನೋಡಲು ಮುಗಿಬಿದ್ದ ಜನ; ಅಬ್ಬಬ್ಬಾ ಎಂಥ ಕ್ರೇಜ್​
ಆರ್ಯನ್​ ಖಾನ್​
Follow us
|

Updated on: Jul 08, 2024 | 6:59 PM

ನಟ ಶಾರುಖ್​ ಖಾನ್​ ಅವರನ್ನು ನೋಡಲು ಜನರು ಮುಗಿಬೀಳುತ್ತಾರೆ ಎಂಬುದು ಹೊಸದೇನೂ ಇಲ್ಲ. ಈಗ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರನ್ನು ನೋಡಲು ಕೂಡ ಫ್ಯಾನ್ಸ್​ ಮುಗಿಬೀಳುತ್ತಿದ್ದಾರೆ. ಆರ್ಯನ್​ ಖಾನ್​ ಇನ್ನೂ ಚಿತ್ರರಂಗಕ್ಕೆ ಪೂರ್ಣ ಪ್ರಮಾಣದಲ್ಲಿ ಕಾಲಿಟ್ಟಿಲ್ಲ. ಅದಕ್ಕೂ ಮುನ್ನವೇ ಅವರಿಗೆ ಅಭಿಮಾನಿಗಳ ಬಳಗ ಸೃಷ್ಟಿ ಆಗಿದೆ. ಅವರು ಹೋದಲ್ಲಿ ಬಂದಲ್ಲಿ ಜನರು ಮುತ್ತಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಹೊಸ ವಿಡಿಯೋ ವೈರಲ್​ ಆಗಿದೆ. ಇದನ್ನು ನೋಡಿದರೆ ಶಾರುಖ್​ ಖಾನ್​ ಪುತ್ರನ ಬಗ್ಗೆ ಜನರಿಗೆ ಎಷ್ಟು ಕ್ರೇಜ್​ ಎಂಬುದು ತಿಳಿಯುತ್ತದೆ.

ಆರ್ಯನ್​ ಖಾನ್​ ಅವರು ಇತ್ತೀಚೆಗೆ ಮುಂಬೈನಲ್ಲಿ ಪಾರ್ಟಿಯೊಂದನ್ನು ಅಟೆಂಡ್​ ಮಾಡಿದರು. ಪಾರ್ಟಿ ನಡೆಯುವ ಸ್ಥಳಕ್ಕೆ ಬಂದ ಅವರು ಕಾರಿನಿಂದ ಕಳೆಗೆ ಇಳಿಯುತ್ತಿದ್ದಂತೆಯೇ ಅವರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು ಮುತ್ತಿಕೊಂಡರು. ಫೋಟೋ ತೆಗೆಯುವ ಉತ್ಸಾಹದಲ್ಲಿ ಫೋಟೋಗ್ರಾಫರ್​ ಒಬ್ಬನಂತೂ ಕೆಳಗೆ ಬಿದ್ದೇಬಿಟ್ಟ!

ಇದನ್ನೂ ಓದಿ: ಆರ್ಯನ್​ ಖಾನ್​ ಬಟ್ಟೆ ವ್ಯಾಪಾರದಲ್ಲಿ ಶಾರುಖ್​ ​ಕೂಡ ಚೌಕಾಸಿ ಮಾಡಲಾಗುತ್ತಿಲ್ಲ; ಅಬ್ಬಬ್ಬಾ ದುಬಾರಿ ಬೆಲೆ

ಕೆಳಗೆ ಬಿದ್ದ ಫೋಟೋಗ್ರಾಫರ್​ ಮೇಲೆ ಏಳಲು ಆರ್ಯನ್​ ಖಾನ್​ ಸಹಾಯ ಮಾಡಿದರು. ಬಳಿಕ ಅವರು ಮುಂದೆ ಸಾಗಿದರು. ಅಕ್ಕಪಕ್ಕದಲ್ಲಿ ಇದ್ದ ಜನರು ಆರ್ಯನ್​ ಖಾನ್​ನ ನೋಡಲು, ಕೈ ಕುಲುಕಲು, ಮಾತನಾಡಿಸಲು ಸಖತ್​ ಉತ್ಸಾಹ ತೋರಿಸಿದರು. ಎಲ್ಲರ ಕಡೆಗೆ ಕೈ ಬೀಸಿದ ಆರ್ಯನ್​ ಖಾನ್​ ಅವರು ಪಾರ್ಟಿ ನಡೆಯುತ್ತಿದ್ದ ಜಾಗದ ಒಳಗೆ ತೆರಳಿದರು. ವೈರಲ್​ ಆಗಿರುವ ಈ ವಿಡಿಯೋ ನೋಡಿ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದೇ ಪಾರ್ಟಿಗೆ ಆರ್ಯನ್​ ಖಾನ್​ ಅವರ ಗರ್ಲ್​ಫ್ರೆಂಡ್​ ಲರಿಸ್ಸಾ ಬೊನೆಸಿ ಕೂಡ ಬಂದಿದ್ದರು. ಅವರಿಬ್ಬರು ಈ ಮೊದಲು ಕೂಡ ಜೊತೆಯಾಗಿ ಕಾಣಿಸಿಕೊಂಡಿದ್ದರು. ಆದರೆ ತಮ್ಮ ರಿಲೇಷನ್​ಶಿಪ್​ ಬಗ್ಗೆ ಅವರು ಬಹಿರಂಗವಾಗಿ ಮಾತನಾಡಿಲ್ಲ. ಆರ್ಯನ್​ ಖಾನ್​ ಅವರು ತಂದೆ ರೀತಿ ನಟನೆಯನ್ನು ಆಯ್ಕೆ ಮಾಡಿಕೊಂಡಿಲ್ಲ. ಬದಲಿಗೆ ಅವರು ನಿರ್ದೇಶನದ ಕಡೆಗೆ ಆಸಕ್ತಿ ತೋರಿಸಿದ್ದಾರೆ. ಅವರು ಆ್ಯಕ್ಷನ್​-ಕಟ್​ ಹೇಳಿರುವ ‘ಸ್ಟಾರ್​ಡಮ್​’ ವೆಬ್​ ಸರಣಿ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇತ್ತೀಚೆಗಷ್ಟೇ ಇದರ ಚಿತ್ರೀಕರಣ ಅಂತ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ