AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಪುತ್ರ ಆರ್ಯನ್​ ಖಾನ್​ ನೋಡಲು ಮುಗಿಬಿದ್ದ ಜನ; ಅಬ್ಬಬ್ಬಾ ಎಂಥ ಕ್ರೇಜ್​

ಶಾರುಖ್​ ಖಾನ್​ ರೀತಿ ಆರ್ಯನ್​ ಖಾನ್​ ಅವರು ಹೀರೋ ಆಗುವ ಆಸಕ್ತಿ ತೋರಿಸಿಲ್ಲ. ನಿರ್ದೇಶಕನಾಗಿ ಗುರುತಿಸಿಕೊಳ್ಳಲು ಅವರು ಮುಂದಾಗಿದ್ದಾರೆ. ಪಾರ್ಟಿಗೆ ಬಂದ ಆರ್ಯನ್​ ಖಾನ್​ ಅವರನ್ನು ನೋಡಲು ಫ್ಯಾನ್ಸ್​ ಮುಗಿಬಿದ್ದಿದ್ದಾರೆ. ಅವರ ಫೋಟೋ ಕ್ಲಿಕ್ಕಿಸಲು ಬಂದ ಓರ್ವ ಫೋಟೋಗ್ರಾಫರ್​ ಕೆಳಗೆ ಬಿದ್ದಿದ್ದಾನೆ. ಈ ವಿಡಿಯೋ ವೈರಲ್​ ಆಗಿದೆ.

ಶಾರುಖ್​ ಪುತ್ರ ಆರ್ಯನ್​ ಖಾನ್​ ನೋಡಲು ಮುಗಿಬಿದ್ದ ಜನ; ಅಬ್ಬಬ್ಬಾ ಎಂಥ ಕ್ರೇಜ್​
ಆರ್ಯನ್​ ಖಾನ್​
ಮದನ್​ ಕುಮಾರ್​
|

Updated on: Jul 08, 2024 | 6:59 PM

Share

ನಟ ಶಾರುಖ್​ ಖಾನ್​ ಅವರನ್ನು ನೋಡಲು ಜನರು ಮುಗಿಬೀಳುತ್ತಾರೆ ಎಂಬುದು ಹೊಸದೇನೂ ಇಲ್ಲ. ಈಗ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರನ್ನು ನೋಡಲು ಕೂಡ ಫ್ಯಾನ್ಸ್​ ಮುಗಿಬೀಳುತ್ತಿದ್ದಾರೆ. ಆರ್ಯನ್​ ಖಾನ್​ ಇನ್ನೂ ಚಿತ್ರರಂಗಕ್ಕೆ ಪೂರ್ಣ ಪ್ರಮಾಣದಲ್ಲಿ ಕಾಲಿಟ್ಟಿಲ್ಲ. ಅದಕ್ಕೂ ಮುನ್ನವೇ ಅವರಿಗೆ ಅಭಿಮಾನಿಗಳ ಬಳಗ ಸೃಷ್ಟಿ ಆಗಿದೆ. ಅವರು ಹೋದಲ್ಲಿ ಬಂದಲ್ಲಿ ಜನರು ಮುತ್ತಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ಹೊಸ ವಿಡಿಯೋ ವೈರಲ್​ ಆಗಿದೆ. ಇದನ್ನು ನೋಡಿದರೆ ಶಾರುಖ್​ ಖಾನ್​ ಪುತ್ರನ ಬಗ್ಗೆ ಜನರಿಗೆ ಎಷ್ಟು ಕ್ರೇಜ್​ ಎಂಬುದು ತಿಳಿಯುತ್ತದೆ.

ಆರ್ಯನ್​ ಖಾನ್​ ಅವರು ಇತ್ತೀಚೆಗೆ ಮುಂಬೈನಲ್ಲಿ ಪಾರ್ಟಿಯೊಂದನ್ನು ಅಟೆಂಡ್​ ಮಾಡಿದರು. ಪಾರ್ಟಿ ನಡೆಯುವ ಸ್ಥಳಕ್ಕೆ ಬಂದ ಅವರು ಕಾರಿನಿಂದ ಕಳೆಗೆ ಇಳಿಯುತ್ತಿದ್ದಂತೆಯೇ ಅವರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು ಮುತ್ತಿಕೊಂಡರು. ಫೋಟೋ ತೆಗೆಯುವ ಉತ್ಸಾಹದಲ್ಲಿ ಫೋಟೋಗ್ರಾಫರ್​ ಒಬ್ಬನಂತೂ ಕೆಳಗೆ ಬಿದ್ದೇಬಿಟ್ಟ!

ಇದನ್ನೂ ಓದಿ: ಆರ್ಯನ್​ ಖಾನ್​ ಬಟ್ಟೆ ವ್ಯಾಪಾರದಲ್ಲಿ ಶಾರುಖ್​ ​ಕೂಡ ಚೌಕಾಸಿ ಮಾಡಲಾಗುತ್ತಿಲ್ಲ; ಅಬ್ಬಬ್ಬಾ ದುಬಾರಿ ಬೆಲೆ

ಕೆಳಗೆ ಬಿದ್ದ ಫೋಟೋಗ್ರಾಫರ್​ ಮೇಲೆ ಏಳಲು ಆರ್ಯನ್​ ಖಾನ್​ ಸಹಾಯ ಮಾಡಿದರು. ಬಳಿಕ ಅವರು ಮುಂದೆ ಸಾಗಿದರು. ಅಕ್ಕಪಕ್ಕದಲ್ಲಿ ಇದ್ದ ಜನರು ಆರ್ಯನ್​ ಖಾನ್​ನ ನೋಡಲು, ಕೈ ಕುಲುಕಲು, ಮಾತನಾಡಿಸಲು ಸಖತ್​ ಉತ್ಸಾಹ ತೋರಿಸಿದರು. ಎಲ್ಲರ ಕಡೆಗೆ ಕೈ ಬೀಸಿದ ಆರ್ಯನ್​ ಖಾನ್​ ಅವರು ಪಾರ್ಟಿ ನಡೆಯುತ್ತಿದ್ದ ಜಾಗದ ಒಳಗೆ ತೆರಳಿದರು. ವೈರಲ್​ ಆಗಿರುವ ಈ ವಿಡಿಯೋ ನೋಡಿ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದೇ ಪಾರ್ಟಿಗೆ ಆರ್ಯನ್​ ಖಾನ್​ ಅವರ ಗರ್ಲ್​ಫ್ರೆಂಡ್​ ಲರಿಸ್ಸಾ ಬೊನೆಸಿ ಕೂಡ ಬಂದಿದ್ದರು. ಅವರಿಬ್ಬರು ಈ ಮೊದಲು ಕೂಡ ಜೊತೆಯಾಗಿ ಕಾಣಿಸಿಕೊಂಡಿದ್ದರು. ಆದರೆ ತಮ್ಮ ರಿಲೇಷನ್​ಶಿಪ್​ ಬಗ್ಗೆ ಅವರು ಬಹಿರಂಗವಾಗಿ ಮಾತನಾಡಿಲ್ಲ. ಆರ್ಯನ್​ ಖಾನ್​ ಅವರು ತಂದೆ ರೀತಿ ನಟನೆಯನ್ನು ಆಯ್ಕೆ ಮಾಡಿಕೊಂಡಿಲ್ಲ. ಬದಲಿಗೆ ಅವರು ನಿರ್ದೇಶನದ ಕಡೆಗೆ ಆಸಕ್ತಿ ತೋರಿಸಿದ್ದಾರೆ. ಅವರು ಆ್ಯಕ್ಷನ್​-ಕಟ್​ ಹೇಳಿರುವ ‘ಸ್ಟಾರ್​ಡಮ್​’ ವೆಬ್​ ಸರಣಿ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಇತ್ತೀಚೆಗಷ್ಟೇ ಇದರ ಚಿತ್ರೀಕರಣ ಅಂತ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ