AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್ ಸಂದರ್ಭದಲ್ಲಿ ರಿಲೀಸ್ ಆಗಿ ಭರ್ಜರಿ ಲಾಭ ಕಂಡ ಸಿನಿಮಾಗಳಿವು..

ಈ ಬಾರಿ ಕ್ರಿಸ್​ಮಸ್​ಗೆ ‘ಸಲಾರ್’ ಹಾಗೂ ‘ಡಂಕಿ’ ಸಿನಿಮಾ ರಿಲೀಸ್​ ಆಗಲಿವೆ. ಈ ಸಿನಿಮಾಗಳ ಮಧ್ಯೆ ಕ್ಲ್ಯಾಶ್ ಏರ್ಪಡುತ್ತಿದೆ. ಎರಡೂ ಸಿನಿಮಾ ಚೆನ್ನಾಗಿದ್ದರೆ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬೆಳೆ ತೆಗೆಯಲಿವೆ. ಈ ಮೊದಲು ಕ್ರಿಸ್​ಮಸ್ ಸಂದರ್ಭದಲ್ಲಿ ರಿಲೀಸ್ ಆದ ಹಲವು ಹಿಂದಿ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಗೆದ್ದಿದ್ದವು.

ಕ್ರಿಸ್​ಮಸ್ ಸಂದರ್ಭದಲ್ಲಿ ರಿಲೀಸ್ ಆಗಿ ಭರ್ಜರಿ ಲಾಭ ಕಂಡ ಸಿನಿಮಾಗಳಿವು..
ಕ್ರಿಸ್​ಮಸ್ ಸಂದರ್ಭದಲ್ಲಿ ರಿಲೀಸ್ ಆದ ಸಿನಿಮಾಗಳು
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 01, 2023 | 1:24 PM

Share

ಕ್ರಿಸ್​ಮಸ್ ಸಂದರ್ಭದಲ್ಲಿ ದೊಡ್ಡ ಬಜೆಟ್​​ನ ಸಿನಿಮಾ ರಿಲೀಸ್ ಮಾಡಬೇಕು ಎಂದು ಹಲವು ನಿರ್ಮಾಪಕರು ಕನಸು ಕಂಡಿರುತ್ತಾರೆ. ಇದಕ್ಕೆ ಕಾರಣ ಸಾಲು ಸಾಲು ರಜೆ. ಈ ಸಂದರ್ಭದಲ್ಲಿ ಹಲವು ಕಂಪನಿಗಳು, ಶಾಲಾ-ಕಾಲೇಜುಗಳು ಒಂದು ವಾರ ರಜೆ ಘೋಷಣೆ ಮಾಡಿಬಿಡುತ್ತವೆ. ಹೀಗಾಗಿ ಅನೇಕರು ಕುಟುಂಬ ಸಮೇತ ಚಿತ್ರಮಂದಿರಕ್ಕೆ ಬರುತ್ತಾರೆ. ಈ ವರ್ಷ ಬಾಕ್ಸ್ ಆಫೀಸ್​ನಲ್ಲಿ ಪ್ರಭಾಸ್ ನಟನೆಯ ‘ಸಲಾರ್’ (Salaar) ಹಾಗೂ ಶಾರುಖ್ ಖಾನ್ ನಟನೆಯ ‘ಡಂಕಿ’ (Dunki) ಸಿನಿಮಾ ರಿಲೀಸ್​ಗೆ ರೆಡಿ ಇವೆ. ಈ ಎರಡೂ ಸಿನಿಮಾಗಳ ಮಧ್ಯೆ ದೊಡ್ಡ ಕ್ಲ್ಯಾಶ್ ಏರ್ಪಡುತ್ತಿದೆ. ಎರಡೂ ಸಿನಿಮಾ ಚೆನ್ನಾಗಿದ್ದರೆ ಬಾಕ್ಸ್ ಆಫೀಸ್​ನಲ್ಲಿ ಎರಡೂ ಸಿನಿಮಾಗಳು ಒಳ್ಳೆಯ ಬೆಳೆ ತೆಗೆಯಲಿವೆ. ಈ ಮೊದಲು ಕ್ರಿಸ್​ಮಸ್ (Christmas) ಸಂದರ್ಭದಲ್ಲಿ ರಿಲೀಸ್ ಆದ ಹಲವು ಹಿಂದಿ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಗೆದ್ದಿದ್ದವು. ಆ ಬಗ್ಗೆ ಇಲ್ಲಿದೆ ಮಾಹಿತಿ.

ಟೈಗರ್ ಜಿಂದಾ ಹೇ: ಹಬ್ಬದ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಮಾಡೋಕೆ ಸಲ್ಮಾನ್ ಖಾನ್ ಹೆಚ್ಚು ಒತ್ತು ನೀಡುತ್ತಾರೆ. ಅವರ ನಟನೆಯ ‘ಟೈಗರ್ ಜಿಂದಾ ಹೇ’ ಚಿತ್ರ 2017ರ ಡಿಸೆಂಬರ್ 22ರಂದು ರಿಲೀಸ್ ಆಯಿತು. ಈ ಸಿನಿಮಾ 570 ಕೋಟಿ ರೂಪಾಯಿ ಗಳಿಕೆ ಮಾಡಿಕೊಂಡಿತು.

ಪಿಕೆ: ನಿರ್ದೇಶಕ ರಾಜ್​ಕುಮಾರ್ ಹಿರಾನಿ ಅವರು ಈಗ ‘ಡಂಕಿ’ ಸಿನಿಮಾನ ಕ್ರಿಸ್​ಮಸ್​ಗೆ ರಿಲೀಸ್ ಮಾಡುತ್ತಿದ್ದಾರೆ. ಈ ಮೊದಲು ಆಮಿರ್ ಖಾನ್ ನಟನೆಯ ‘ಪಿಕೆ’ ಸಿನಿಮಾ ಕೂಡ ಇದೇ ಸಂದರ್ಭದಲ್ಲಿ ರಿಲೀಸ್ ಆಗಿತ್ತು. 2014ರ ಡಿಸೆಂಬರ್ 9ರಂದು ಈ ಚಿತ್ರ ಬಿಡುಗಡೆ ಆಗಿ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 769 ಕೋಟಿ ರೂಪಾಯಿ ಬಾಚಿಕೊಂಡಿತ್ತು.

ಇದನ್ನೂ ಓದಿ: Merry Christmas: ‘ಮೇರಿ ಕ್ರಿಸ್​ಮಸ್​’ ಒಂದು ಸಿನಿಮಾ ಅಲ್ಲ, ಎರಡು; ಅಚ್ಚರಿ ಮೂಡಿಸಿದ ನಿರ್ದೇಶಕ ಶ್ರೀರಾಮ್​ ರಾಘವನ್​

ದಿಲ್​ವಾಲೇ ಮತ್ತು ಬಾಜಿರಾವ್ ಮಸ್ತಾನಿ: ಶಾರುಖ್ ಖಾನ್ ಹಾಗೂ ಕಾಜೋಲ್ ನಟನೆಯ ‘ದಿಲ್​ವಾಲೆ’ ಹಾಗೂ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಬಾಜಿರಾವ್ ಮಸ್ತಾನಿ’ 2015ರ ಡಿಸೆಂಬರ್ 18ರಂದು ಒಟ್ಟಿಗೆ ರಿಲೀಸ್ ಆಗಿತ್ತು. ‘ಬಾಜಿರಾವ್ ಮಸ್ತಾನಿ’ 355 ಕೋಟಿ ರೂಪಾಯಿ ಗಳಿಸಿದರೆ. ‘ದಿಲ್​ವಾಲೆ’ 376 ಕೋಟಿ ರೂಪಾಯಿ ಕಲೆ ಹಾಕಿತ್ತು.

‘ಧೂಮ್ 3’: ‘ಧೂಮ್’ ಸರಣಿಯಲ್ಲಿ ಎರಡು ಚಿತ್ರಗಳು ರಿಲೀಸ್ ಆಗಿ ಗೆದ್ದಿದ್ದವು. ಈ ಸರಣಿಯಲ್ಲಿ ಮೂರನೇ ಸಿನಿಮಾ ಬಂದಿತ್ತು. ಆಮಿರ್ ಖಾನ್ ಅವರು ‘ಧೂಮ್ 3’ ಚಿತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸಿದ್ದರು. 2013ರ ಡಿಸೆಂಬರ್ 20ರಂದು ಬಿಡುಗಡೆ ಆದ ಈ ಸಿನಿಮಾ ವಿಶ್ವ ಮಟ್ಟದಲ್ಲಿ 558 ಕೋಟಿ ರೂಪಾಯಿ ಗಳಿಸಿತ್ತು.

‘ಸಿಂಬಾ’: ರೋಹಿತ್ ಶೆಟ್ಟಿ ಅವರು ಕಮರ್ಷಿಯಲ್ ಸಿನಿಮಾಗಳನ್ನು ಮಾಡೋಕೆ ಎತ್ತಿದ ಕೈ. ಅವರ ನಿರ್ದೇಶನದ ‘ಸಿಂಬಾ’ ಗಮನ ಸೆಳೆಯಿತು. ಈ ಚಿತ್ರ 2018ರ ಡಿಸೆಂಬರ್ 28ರಂದು ರಿಲೀಸ್ ಆಯಿತು. ವಿಶ್ವ ಮಟ್ಟದಲ್ಲಿ 400 ಕೋಟಿ ರೂಪಾಯಿ ಬಾಚಿದೆ.

ಇದನ್ನೂ ಓದಿ: ಸೆಲೆಬ್ರಿಟಿಗಳ ಕ್ರಿಸ್​ಮಸ್​ ಸಂಭ್ರಮ: ರಶ್ಮಿಕಾ, ಐಶ್ವರ್ಯಾ ರೈ, ಪ್ರೀತಿ ಜಿಂಟಾ ಮನೆಯಲ್ಲಿ ಸಡಗರ

‘ದಬಾಂಗ್ 2’: 2012ರ ಡಿಸೆಂಬರ್ 21ರಂದು ‘ದಬಾಂಗ್​ 2’ ರಿಲೀಸ್ ಆಯಿತು. ಈ ಸಿನಿಮಾ 255 ಕೋಟಿ ರೂಪಾಯಿ ಗಳಿಕೆ ಮಾಡಲು ಯಶಸ್ವಿ ಆಗಿದೆ. ಸಲ್ಮಾನ್ ಖಾನ್ ಅವರ ಮ್ಯಾನರಿಸಂ ಸಿನಿಮಾದಲ್ಲಿ ಗಮನ ಸೆಳೆಯಿತು.

‘ದಂಗಲ್’: ಆಮಿರ್ ಖಾನ್ ವೃತ್ತಿ ಜೀವನದಲ್ಲಿ ‘ದಂಗಲ್’ ಚಿತ್ರಕ್ಕೆ ವಿಶೇಷ ಸ್ಥಾನ ಇದೆ. ಈ ಸಿನಿಮಾ 2016ರ ಡಿಸೆಂಬರ್ 23ರಂದು ರಿಲೀಸ್ ಆಗಿ 2,024 ಕೋಟಿ ರೂಪಾಯಿ ಗಳಿಕೆ ಮಾಡಿತು.

ಡಾನ್ 2: ಶಾರುಖ್ ಖಾನ್ ಅವರು ‘ಡಾನ್ 2’ ಮೂಲಕ ಗೆದ್ದು ಬೀಗಿದರು. ಇದು ಕ್ರಿಸ್​​ಮಸ್​ಗೆ ರಿಲೀಸ್ ಆಯಿತು. ಈ ಸಿನಿಮಾ 203 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. 2011ರಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂಬ ಖ್ಯಾತಿ ಚಿತ್ರಕ್ಕೆ ಸಿಕ್ಕಿತ್ತು.

ಗುಡ್ ನ್ಯೂಸ್: ಅಕ್ಷಯ್ ಕುಮಾರ್ ನಟನೆಯ ಗುಡ್​ ನ್ಯೂಸ್ ಸಿನಿಮಾ 2019ರ ಡಿಸೆಂಬರ್ 27ರಂದು ರಿಲೀಸ್ ಆಯಿತು. ಈ ಚಿತ್ರ ಬಂಗಾರದ ಬೆಳೆ ತೆಗೆದಿತ್ತು. ಹಾಸ್ಯ ಹಾಗೂ ಭಾವನಾತ್ಮಕ ವಿಚಾರವನ್ನು ಹೇಳಲಾಯಿತು.

ಇದನ್ನೂ ಓದಿ: ಕ್ರಿಸ್‌ಮಸ್ ಹಬ್ಬದ ಇತಿಹಾಸ, ಮಹತ್ವ ಮತ್ತು ಆಚರಿಸುವ ವಿಧಾನಗಳ ಕುರಿತು ಮಾಹಿತಿ ಇಲ್ಲಿವೆ

ಕೆಜಿಎಫ್: ‘ಕೆಜಿಎಫ್’ ಚಿತ್ರ ಹಿಂದಿಯಲ್ಲೂ ಬಿಡುಗಡೆ ಕಂಡಿತ್ತು. ಈ ಸಿನಿಮಾದ ಮೊದಲ ಚಾಪ್ಟರ್ 44 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಕನ್ನಡದ ಚಿತ್ರವೊಂದು ಹಿಂದಿಯಲ್ಲಿ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡಿದ್ದು ಅದೇ ಮೊದಲು. ಈ ಸಿನಿಮಾ 2018ರ ಡಿಸೆಂಬರ್ 21ರಂದು ರಿಲೀಸ್ ಆಗಿತ್ತು. ಯಶ್ ನಟನೆಗೆ, ಪ್ರಶಾಂತ್ ನೀಲ್ ನಿರ್ದೇಶನಕ್ಕೆ ಜನರು ಮಾರುಹೋದರು.

ಪುಷ್ಪ: ಅಲ್ಲು ಅರ್ಜುನ್ ನಟನೆಯ, ಸುಕುಮಾರ್ ನಿರ್ದೇಶನದ ‘ಪುಷ್ಪ’ ಸಿನಿಮಾ 2021ರ ಡಿಸೆಂಬರ್​ನಲ್ಲಿ ರಿಲೀಸ್ ಆಯಿತು. ಈ ಚಿತ್ರ ಹಿಂದಿ ಭಾಷೆಯಲ್ಲೂ ಬಿಡುಗಡೆ ಕಂಡಿತ್ತು. ಅಲ್ಲಿ ಈ ಸಿನಿಮಾ ಬರೋಬ್ಬರಿ 100 ಕೋಟಿ ರೂಪಾಯಿ ಗಳಿಕೆ ಮಾಡಿ ಸಾಧನೆ ಮಾಡಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:52 pm, Sun, 1 October 23

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?