‘ಶಾರುಖ್​ ಖಾನ್​ಗೆ ಹೇಳಿ ಜವಾನ್​ ಚಿತ್ರದ ಟಿಕೆಟ್​ ಕೊಡಿಸಿ ಪ್ಲೀಸ್​’: ವಿವೇಕ್​ ಅಗ್ನಿಹೋತ್ರಿ ಬಹಿರಂಗ ಮನವಿ

‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾವನ್ನು ಪ್ರಚಾರ ಮಾಡುವ ಉದ್ದೇಶದಿಂದ ವಿವೇಕ್​ ಅಗ್ನಿಹೋತ್ರಿ ಅವರು ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಅವರಿಗೆ ‘ಜವಾನ್​’ ಸಿನಿಮಾ ಬಗ್ಗೆ ಶಾರುಖ್​ ಖಾನ್​ ಅಭಿಮಾನಿಗಳಿಂದ ಪ್ರಶ್ನೆ ಎದುರಾಗಿದೆ. ಅದಕ್ಕೆ ವಿವೇಕ್​ ಅಗ್ನಿಹೋತ್ರಿ ನೀಡಿದ ಉತ್ತರ ಎಲ್ಲರ ಗಮನ ಸೆಳೆಯುತ್ತಿದೆ.

‘ಶಾರುಖ್​ ಖಾನ್​ಗೆ ಹೇಳಿ ಜವಾನ್​ ಚಿತ್ರದ ಟಿಕೆಟ್​ ಕೊಡಿಸಿ ಪ್ಲೀಸ್​’: ವಿವೇಕ್​ ಅಗ್ನಿಹೋತ್ರಿ ಬಹಿರಂಗ ಮನವಿ
ವಿವೇಕ್​ ಅಗ್ನಿಹೋತ್ರಿ, ಶಾರುಖ್​ ಖಾನ್​
Follow us
|

Updated on: Sep 03, 2023 | 7:56 AM

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಬಾಲಿವುಡ್​ನ ಒಂದು ವರ್ಗದ ಸೆಲೆಬ್ರಿಟಿಗಳನ್ನು ವಿರೋಧಿಸುತ್ತಾರೆ ಎಂಬುದು ಗೊತ್ತಿರುವ ವಿಚಾರ. ಅವರ ಟ್ವೀಟ್​ಗಳ ಮೂಲಕ ಈಗಾಗಲೇ ಅದು ಸಾಬೀತಾಗಿದೆ. ಇತ್ತೀಚೆಗೆಷ್ಟೇ ಅವರು ‘ಜವಾನ್​’ (Jawan Movie) ಸಿನಿಮಾದ ಬಗ್ಗೆ ವ್ಯಂಗ್ಯವಾಡಿದ್ದರು. ಈ ಚಿತ್ರದ ಬಗ್ಗೆ ಇರುವ ಮೀಮ್​ ಶೇರ್​ ಮಾಡಿಕೊಂಡಿದ್ದರು. ಆದರೆ ಈಗ ಅವರು ಏಕಾಏಕಿ ಉಲ್ಟಾ ಹೊಡೆದಿದ್ದಾರೆ. ಶಾರುಖ್​ ಖಾನ್​ (Shah Rukh Khan) ನಟನೆಯ ಈ ಸಿನಿಮಾದ ಟ್ರೇಲರ್​ಗೆ ವಿವೇಕ್​ ಅಗ್ನಿಹೋತ್ರಿ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೇ, ಈ ಚಿತ್ರದ ಟಿಕೆಟ್​ ಕೊಡಿಸಿ ಎಂದು ಅವರು ಬಹಿರಂಗವಾಗಿಯೇ ಮನವಿ ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಟ್ವೀಟ್​ ವೈರಲ್​ ಆಗಿದೆ. ‘ಜವಾನ್​’ ಸಿನಿಮಾ ಬ್ಲಾಕ್​ಬಸ್ಟರ್​ ಹಿಟ್​ ಆಗುತ್ತದೆ ಎಂದು ಕೂಡ ವಿವೇಕ್​ ಅಗ್ನಿಹೋತ್ರಿ ಅವರು ಭವಿಷ್ಯ ನುಡಿದಿದ್ದಾರೆ.

‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಖ್ಯಾತಿ ಹೆಚ್ಚಾಯಿತು. ಈಗ ಅವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾಗೆ ನಿರ್ದೇಶನ ಮಾಡಿದ್ದು, ಆ ಚಿತ್ರದ ಬಿಡುಗಡೆಗೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಆ ಸಿನಿಮಾ ಸೆಪ್ಟೆಂಬರ್ 28ರಂದು ಬಿಡುಗಡೆ ಆಗಲಿದೆ. ತಮ್ಮ ಸಿನಿಮಾವನ್ನು ಪ್ರಚಾರ ಮಾಡುವ ಉದ್ದೇಶದಿಂದ ಅವರು ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರ ಜೊತೆ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಅವರಿಗೆ ‘ಜವಾನ್​’ ಸಿನಿಮಾ ಬಗ್ಗೆ ಶಾರುಖ್​ ಖಾನ್​ ಅಭಿಮಾನಿಗಳಿಂದ ಪ್ರಶ್ನೆ ಎದುರಾಗಿದೆ. ಅದಕ್ಕೆ ವಿವೇಕ್​ ಅಗ್ನಿಹೋತ್ರಿ ನೀಡಿದ ಉತ್ತರ ಎಲ್ಲರ ಗಮನ ಸೆಳೆಯುತ್ತಿದೆ.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಜವಾನ್​ ಸಿನಿಮಾದ ಟ್ರೇಲರ್​ ಹೇಗನಿಸಿತು’ ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಉತ್ತರ ನೀಡಿರುವ ವಿವೇಕ್​ ಅಗ್ನಿಹೋತ್ರಿ ಅವರು, ‘ಅದ್ಭುತ.. ಮೈಂಡ್​ ಬ್ಲೋಯಿಂಗ್​. ಬ್ಲಾಕ್​ ಬಸ್ಟರ್​ ಖಚಿತ ಎಂಬುದು ಟ್ರೇಲರ್​ನಿಂದ ತಿಳಿಯುತ್ತಿದೆ’ ಎಂದು ಟ್ವೀಟ್​ ಮಾಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಟ್ವೀಟ್:

‘ಜವಾನ್​ ಸಿನಿಮಾ ನೋಡುತ್ತೀರಾ’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ‘ಫಸ್ಟ್​ ಡೇ ಫಸ್ಟ್​ ಶೋ ನೋಡುತ್ತೇವೆ. ಆದರೆ ಟಿಕೆಟ್​ ಎಲ್ಲಿದೆ ಗೆಳೆಯ? ಶಾರುಖ್​ ಖಾನ್​ಗೆ ಹೇಳಿ ಟಿಕೆಟ್​ ಕೊಡಿಸಿ ಪ್ಲೀಸ್​’ ಎಂದು ವಿವೇಕ್​ ಅಗ್ನಿಹೋತ್ರಿ ಮನವಿ ಮಾಡಿಕೊಂಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ಟ್ವೀಟ್:

ವಿವೇಕ್ ಅಗ್ನಿಹೋತ್ರಿ ಅವರ ಈ ಮಾತಿಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಇಷ್ಟಕ್ಕೆಲ್ಲ ಶಾರುಖ್​ ಖಾನ್​ಗೆ ಯಾಕೆ ಕೇಳಬೇಕು? ನಾನೇ ಭಿಕ್ಷೆ ಹಾಕುತ್ತೇನೆ’ ಎಂದು ವ್ಯಕ್ತಿಯೊಬ್ಬರು ವ್ಯಂಗ್ಯವಾಡಿದ್ದಾರೆ. ‘ನನಗೆ ನಿಮ್ಮ ವಿವರ ಕಳಿಸಿ. ನಿಮ್ಮ ಊರು ಮತ್ತು ಹತ್ತಿರದ ಚಿತ್ರಮಂದಿರ ಯಾವುದು ಅಂತ ಹೇಳಿ’ ಎಂದು ಇನ್ನೊಬ್ಬರು ಟ್ವೀಟ್​ ಮಾಡಿದ್ದಾರೆ. ‘ವಿವೇಕ್​ ಅಗ್ನಿಹೋತ್ರಿ ಬಳಿ ಇರುವ ದುಡ್ಡು ಖಾಲಿ ಆಯಿತು ಎನಿಸುತ್ತದೆ. ಮತ್ತೊಂದು ಕಾಶ್ಮೀರ್​ ಫೈಲ್ಸ್​ ಸಿನಿಮಾ ಮಾಡಬೇಕಿದೆ’ ಎಂದು ನೆಟ್ಟಿಗರೊಬ್ಬರು ಕಾಲೆಳೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ