AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscar 2023: ‘ಆಸ್ಕರ್​ ಪ್ರಶಸ್ತಿ ನನಗೆ ಮುಟ್ಟಲು ಕೊಡಿ ಪ್ಲೀಸ್’: ರಾಮ್​ ಚರಣ್​ ಬಳಿ ಶಾರುಖ್​ ಖಾನ್​ ಮನವಿ​

Shah Rukh Khan | Pathaan Movie: ‘ಇಡೀ ಪಠಾಣ್​ ಸಿನಿಮಾ ತಂಡಕ್ಕೆ ಒಳ್ಳೆಯದಾಗಲಿ’ ಎಂದು ರಾಮ್​ ಚರಣ್​ ಶುಭ ಹಾರೈಸಿದ್ದಾರೆ. ಅವರ ಹಾರೈಕೆಗೆ ಶಾರುಖ್​ ಖಾನ್​ ಆತ್ಮೀಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Oscar 2023: ‘ಆಸ್ಕರ್​ ಪ್ರಶಸ್ತಿ ನನಗೆ ಮುಟ್ಟಲು ಕೊಡಿ ಪ್ಲೀಸ್’: ರಾಮ್​ ಚರಣ್​ ಬಳಿ ಶಾರುಖ್​ ಖಾನ್​ ಮನವಿ​
ರಾಮ್ ಚರಣ್, ಶಾರುಖ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on: Jan 10, 2023 | 10:31 PM

Share

ಬಾಲಿವುಡ್​ ಮತ್ತು ಸೌತ್​ ಸಿನಿಮಾ ಎಂಬ ಪೈಪೋಟಿ ಏನೇ ಇರಬಹುದು. ಆದರೆ ಹಿಂದಿ ಚಿತ್ರರಂಗದ ಸ್ಟಾರ್​ ನಟರು ದಕ್ಷಿಣದ ಹೀರೋಗಳ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದಕ್ಕೆ ಬೆಸ್ಟ್​ ಉದಾಹರಣೆ ಎಂದರೆ ರಾಮ್​ ಚರಣ್​ ಮತ್ತು ಶಾರುಖ್​ ಖಾನ್​ (Shah Rukh Khan) ನಡುವಿನ ಸ್ನೇಹ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾ ಬಿಡುಗಡೆಗೆ ಸಿ​ದ್ಧವಾಗಿದೆ. ಈ ಚಿತ್ರದ ಟ್ರೇಲರ್​ ಅನ್ನು ರಾಮ್​ ಚರಣ್ (Ram Charan)​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಶಾರುಖ್​ ಖಾನ್​ ಅವರು ಆತ್ಮೀಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇಬ್ಬರ ಈ ಮಾತಿನ ಮಧ್ಯೆ ಆಸ್ಕರ್​ ಪ್ರಶಸ್ತಿ (Oscar 2023) ವಿಚಾರ ಪ್ರಸ್ತಾಪ ಆಗಿದೆ!

ರಾಮ್​ ಚರಣ್​ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಪ್ರಶಸ್ತಿ ಪಡೆಯಲು ಹಣಾಹಣಿ ನಡೆಸುತ್ತಿದೆ. ಖಂಡಿತವಾಗಿಯೂ ಈ ಚಿತ್ರಕ್ಕೆ ಆಸ್ಕರ್​ ಒಲಿಯಲಿದೆ ಎಂಬ ಭರವಸೆ ಶಾರುಖ್​ ಖಾನ್​ ಅವರಿಗೆ ಇದೆ. ಅದೇ ನಂಬಿಕೆ ಮೇಲೆ ಅವರು ಟ್ವೀಟ್​ ಮಾಡಿದ್ದಾರೆ. ‘ಆಸ್ಕರ್​ ಪ್ರಶಸ್ತಿಯನ್ನು ಆರ್​ಆರ್​ಆರ್​ ಚಿತ್ರತಂಡ ಭಾರತಕ್ಕೆ ತಂದಾಗ ನನಗೆ ಅದನ್ನು ಮುಟ್ಟಲು ಕೊಡಿ ಪ್ಲೀಸ್​’ ಎಂದು ಶಾರುಖ್​ ಖಾನ್​ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಇದನ್ನೂ ಓದಿ: Oscar 2023: ಆಸ್ಕರ್​ ಪ್ರಶಸ್ತಿ ಕಣದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ; ಖುಷಿ ಸುದ್ದಿ ಹಂಚಿಕೊಂಡ ವಿವೇಕ್​ ಅಗ್ನಿಹೋತ್ರಿ

ಶಾರುಖ್​ ಖಾನ್​ ಅವರು ಈ ಮಾತಿಗೆ ಪ್ರತಿಕ್ರಿಯಿಸಿರುವ ರಾಮ್​ ಚರಣ್​ ಅವರು, ‘ಖಂಡಿತವಾಗಿಯೂ ಶಾರುಖ್​ ಸರ್​. ಆ ಪ್ರಶಸ್ತಿ ಭಾರತೀಯ ಚಿತ್ರರಂಗಕ್ಕೆ ಸೇರಿದ್ದು’ ಎಂದು ಟ್ವೀಟ್​ ಮಾಡಿದ್ದಾರೆ. ಈ ನಟರಿಬ್ಬರ ನಡುವಿನ ಈ ಟ್ವಿಟರ್​ ಮಾತುಕಥೆ ವೈರಲ್​ ಆಗಿದೆ. ಅಭಿಮಾನಿಗಳು ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇಬ್ಬರ ನಡುವಿನ ಸ್ನೇಹವನ್ನು ಫ್ಯಾನ್ಸ್​ ಕೊಂಡಾಡುತ್ತಿದ್ದಾರೆ.

‘ಪಠಾಣ್​’ ಟ್ರೇಲರ್​ಗೆ ರಾಮ್​ ಚರಣ್​ ಮೆಚ್ಚುಗೆ:

‘ಇಡೀ ಪಠಾಣ್​ ಸಿನಿಮಾ ತಂಡಕ್ಕೆ ಒಳ್ಳೆಯದಾಗಲಿ. ಹಿಂದೆಂದೂ ಕಾಣದ ರೀತಿಯಲ್ಲಿ ಶಾರುಖ್​ ಖಾನ್​ ಅವರನ್ನು ಸಾಹಸ ದೃಶ್ಯಗಳಲ್ಲಿ ನೋಡಲು ಕಾದಿದ್ದೇನೆ’ ಎಂದು ಟ್ವೀಟ್​ ಮಾಡಿರುವ ರಾಮ್​ ಚರಣ್​ ಅವರು ‘ಪಠಾಣ್​’ ಟ್ರೇಲರ್​ ಹಂಚಿಕೊಂಡಿದ್ದಾರೆ. ಈ ಸಿನಿಮಾ ತೆಲುಗಿನಲ್ಲಿಯೂ ಬಿಡುಗಡೆ ಆಗಲಿದೆ.

ಇದನ್ನೂ ಓದಿ: RRR: ಆಸ್ಕರ್​ ಪ್ರಶಸ್ತಿ ಪಡೆಯುತ್ತಾ ‘ಆರ್​ಆರ್​​ಆರ್​’ ಸಿನಿಮಾ? ಜಾಗತಿಕ ಮಟ್ಟದಲ್ಲಿ ರಾಜಮೌಳಿ ಚಿತ್ರದ ಬಗ್ಗೆ ಚರ್ಚೆ

ಸಿದ್ದಾರ್ಥ್​ ಆನಂದ್​ ನಿರ್ದೇಶನದ ‘ಪಠಾಣ’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರು ಶಾರುಖ್​ ಖಾನ್​ಗೆ ಜೋಡಿಯಾಗಿ ನಟಿಸಿದ್ದಾರೆ. ವಿಲನ್​ ಪಾತ್ರದಲ್ಲಿ ಜಾನ್​ ಅಬ್ರಾಹಂ ಅವರು ಅಬ್ಬರಿಸಲಿದ್ದಾರೆ. ವಿವಿಧ ದೇಶಗಳಲ್ಲಿ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಅದ್ದೂರಿ ಬಜೆಟ್​ನಲ್ಲಿ ಮೂಡಿಬಂದ ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ