AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscar 2023: ‘ಆಸ್ಕರ್​ ಪ್ರಶಸ್ತಿ ನನಗೆ ಮುಟ್ಟಲು ಕೊಡಿ ಪ್ಲೀಸ್’: ರಾಮ್​ ಚರಣ್​ ಬಳಿ ಶಾರುಖ್​ ಖಾನ್​ ಮನವಿ​

Shah Rukh Khan | Pathaan Movie: ‘ಇಡೀ ಪಠಾಣ್​ ಸಿನಿಮಾ ತಂಡಕ್ಕೆ ಒಳ್ಳೆಯದಾಗಲಿ’ ಎಂದು ರಾಮ್​ ಚರಣ್​ ಶುಭ ಹಾರೈಸಿದ್ದಾರೆ. ಅವರ ಹಾರೈಕೆಗೆ ಶಾರುಖ್​ ಖಾನ್​ ಆತ್ಮೀಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Oscar 2023: ‘ಆಸ್ಕರ್​ ಪ್ರಶಸ್ತಿ ನನಗೆ ಮುಟ್ಟಲು ಕೊಡಿ ಪ್ಲೀಸ್’: ರಾಮ್​ ಚರಣ್​ ಬಳಿ ಶಾರುಖ್​ ಖಾನ್​ ಮನವಿ​
ರಾಮ್ ಚರಣ್, ಶಾರುಖ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Jan 10, 2023 | 10:31 PM

ಬಾಲಿವುಡ್​ ಮತ್ತು ಸೌತ್​ ಸಿನಿಮಾ ಎಂಬ ಪೈಪೋಟಿ ಏನೇ ಇರಬಹುದು. ಆದರೆ ಹಿಂದಿ ಚಿತ್ರರಂಗದ ಸ್ಟಾರ್​ ನಟರು ದಕ್ಷಿಣದ ಹೀರೋಗಳ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದಕ್ಕೆ ಬೆಸ್ಟ್​ ಉದಾಹರಣೆ ಎಂದರೆ ರಾಮ್​ ಚರಣ್​ ಮತ್ತು ಶಾರುಖ್​ ಖಾನ್​ (Shah Rukh Khan) ನಡುವಿನ ಸ್ನೇಹ. ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾ ಬಿಡುಗಡೆಗೆ ಸಿ​ದ್ಧವಾಗಿದೆ. ಈ ಚಿತ್ರದ ಟ್ರೇಲರ್​ ಅನ್ನು ರಾಮ್​ ಚರಣ್ (Ram Charan)​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಶಾರುಖ್​ ಖಾನ್​ ಅವರು ಆತ್ಮೀಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇಬ್ಬರ ಈ ಮಾತಿನ ಮಧ್ಯೆ ಆಸ್ಕರ್​ ಪ್ರಶಸ್ತಿ (Oscar 2023) ವಿಚಾರ ಪ್ರಸ್ತಾಪ ಆಗಿದೆ!

ರಾಮ್​ ಚರಣ್​ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಪ್ರಶಸ್ತಿ ಪಡೆಯಲು ಹಣಾಹಣಿ ನಡೆಸುತ್ತಿದೆ. ಖಂಡಿತವಾಗಿಯೂ ಈ ಚಿತ್ರಕ್ಕೆ ಆಸ್ಕರ್​ ಒಲಿಯಲಿದೆ ಎಂಬ ಭರವಸೆ ಶಾರುಖ್​ ಖಾನ್​ ಅವರಿಗೆ ಇದೆ. ಅದೇ ನಂಬಿಕೆ ಮೇಲೆ ಅವರು ಟ್ವೀಟ್​ ಮಾಡಿದ್ದಾರೆ. ‘ಆಸ್ಕರ್​ ಪ್ರಶಸ್ತಿಯನ್ನು ಆರ್​ಆರ್​ಆರ್​ ಚಿತ್ರತಂಡ ಭಾರತಕ್ಕೆ ತಂದಾಗ ನನಗೆ ಅದನ್ನು ಮುಟ್ಟಲು ಕೊಡಿ ಪ್ಲೀಸ್​’ ಎಂದು ಶಾರುಖ್​ ಖಾನ್​ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಇದನ್ನೂ ಓದಿ: Oscar 2023: ಆಸ್ಕರ್​ ಪ್ರಶಸ್ತಿ ಕಣದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ; ಖುಷಿ ಸುದ್ದಿ ಹಂಚಿಕೊಂಡ ವಿವೇಕ್​ ಅಗ್ನಿಹೋತ್ರಿ

ಶಾರುಖ್​ ಖಾನ್​ ಅವರು ಈ ಮಾತಿಗೆ ಪ್ರತಿಕ್ರಿಯಿಸಿರುವ ರಾಮ್​ ಚರಣ್​ ಅವರು, ‘ಖಂಡಿತವಾಗಿಯೂ ಶಾರುಖ್​ ಸರ್​. ಆ ಪ್ರಶಸ್ತಿ ಭಾರತೀಯ ಚಿತ್ರರಂಗಕ್ಕೆ ಸೇರಿದ್ದು’ ಎಂದು ಟ್ವೀಟ್​ ಮಾಡಿದ್ದಾರೆ. ಈ ನಟರಿಬ್ಬರ ನಡುವಿನ ಈ ಟ್ವಿಟರ್​ ಮಾತುಕಥೆ ವೈರಲ್​ ಆಗಿದೆ. ಅಭಿಮಾನಿಗಳು ಇದಕ್ಕೆ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇಬ್ಬರ ನಡುವಿನ ಸ್ನೇಹವನ್ನು ಫ್ಯಾನ್ಸ್​ ಕೊಂಡಾಡುತ್ತಿದ್ದಾರೆ.

‘ಪಠಾಣ್​’ ಟ್ರೇಲರ್​ಗೆ ರಾಮ್​ ಚರಣ್​ ಮೆಚ್ಚುಗೆ:

‘ಇಡೀ ಪಠಾಣ್​ ಸಿನಿಮಾ ತಂಡಕ್ಕೆ ಒಳ್ಳೆಯದಾಗಲಿ. ಹಿಂದೆಂದೂ ಕಾಣದ ರೀತಿಯಲ್ಲಿ ಶಾರುಖ್​ ಖಾನ್​ ಅವರನ್ನು ಸಾಹಸ ದೃಶ್ಯಗಳಲ್ಲಿ ನೋಡಲು ಕಾದಿದ್ದೇನೆ’ ಎಂದು ಟ್ವೀಟ್​ ಮಾಡಿರುವ ರಾಮ್​ ಚರಣ್​ ಅವರು ‘ಪಠಾಣ್​’ ಟ್ರೇಲರ್​ ಹಂಚಿಕೊಂಡಿದ್ದಾರೆ. ಈ ಸಿನಿಮಾ ತೆಲುಗಿನಲ್ಲಿಯೂ ಬಿಡುಗಡೆ ಆಗಲಿದೆ.

ಇದನ್ನೂ ಓದಿ: RRR: ಆಸ್ಕರ್​ ಪ್ರಶಸ್ತಿ ಪಡೆಯುತ್ತಾ ‘ಆರ್​ಆರ್​​ಆರ್​’ ಸಿನಿಮಾ? ಜಾಗತಿಕ ಮಟ್ಟದಲ್ಲಿ ರಾಜಮೌಳಿ ಚಿತ್ರದ ಬಗ್ಗೆ ಚರ್ಚೆ

ಸಿದ್ದಾರ್ಥ್​ ಆನಂದ್​ ನಿರ್ದೇಶನದ ‘ಪಠಾಣ’ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಅವರು ಶಾರುಖ್​ ಖಾನ್​ಗೆ ಜೋಡಿಯಾಗಿ ನಟಿಸಿದ್ದಾರೆ. ವಿಲನ್​ ಪಾತ್ರದಲ್ಲಿ ಜಾನ್​ ಅಬ್ರಾಹಂ ಅವರು ಅಬ್ಬರಿಸಲಿದ್ದಾರೆ. ವಿವಿಧ ದೇಶಗಳಲ್ಲಿ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಅದ್ದೂರಿ ಬಜೆಟ್​ನಲ್ಲಿ ಮೂಡಿಬಂದ ಈ ಚಿತ್ರಕ್ಕೆ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ